ಸೈಟ್ ಕೊಡದ ಪೃಥ್ವಿ ಬಿಲ್ಡರಗೆ ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆಯೋಗ ಆದೇಶ
ಧಾರವಾಡ () ಮಾ.17: ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ ಹಾಗೂ ಡೆವಲಪರ್ನ ಪಾಲುದಾರರಾದ ಶಿವನಗೌಡ ಪಾಟೀಲ ಎಂಬುವವರು ತಡಸಿನಕೊಪ್ಪಾ ಗ್ರಾಮದಲ್ಲಿ ಅಭಿವೃದ್ಧಿಪಡಿಸುತ್ತಿದ್ದ ಲೇಔಟನಲ್ಲಿ, ಧಾರವಾಡದ ಮಾಳಮಡ್ಡಿಯ ಶ್ರೀನಿವಾಸ ಅಂಬೇಕರ್ ಎಂಬುವವರು ಸೈಟ್ ಪಡೆದುಕೊಳ್ಳಲು ಇಚ್ಚಿಸಿ ಪೃಥ್ವಿಡವಲಪರ್ಸ್ ಜೊತೆ ಪ್ಲಾಟ ನಂ.146 ಬಗ್ಗೆ ಮಾರಾಟದ ಒಪ್ಪಂದ ಮಾಡಿಕೊಂಡು, ಪ್ಲಾಟ್ಗೆ ಕಂತುಗಳ ಮುಖಾಂತರ ಪೂರ್ತಿ ಹಣ ರೂ.6,50,720 ರೂಪಾಯಿ ಹಣ ಸಂದಾಯ ಮಾಡಿದ್ದರು. ಸಾಕಷ್ಟು ಕಾಲಾವಕಾಶ ಕಳೆದರೂ ಬಿಲ್ಡರ ಲೇಔಟ್ ನಿರ್ಮಾಣ ಮಾಡದೇ, ತಮಗೆ ಬುಕ್ ಮಾಡಿದ ಸೈಟ್ ಕೊಡದೇ ಸೇವಾ ನೂನ್ಯತೆ ಎಸಗಿ ಮತ್ತು ಮೋಸ ಮಾಡಿದ್ದಾರೆ ಅಂತಾ ಹೇಳಿ ದೂರುದಾರರು ಬಿಲ್ಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ:19/08/2024 ರಂದು ಈ ದೂರನ್ನು ಸಲ್ಲಿಸಿದ್ದರು.
ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿ.ಅ. ಬೋಳಶೆಟ್ಟಿ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಪೂರ್ತಿ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಪ್ಲ್ಯಾಟುಗಳನ್ನು ಕೊಡದೇ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿರುತ್ತಾರೆ ಅಂತಾ ಆಯೋಗ ಅಭಿಪ್ರಾಯ ಪಟ್ಟು ತೀರ್ಪು ನೀಡಿದೆ. ಈ ಬಗ್ಗೆ ಪೃಥ್ವಿ ಬಿಲ್ಡರ್ ಹಾಗೂ ಡೆವಲಪರ್ನ ಪಾಲುದಾರರಾದ ಶಿವನಗೌಡ ಪಾಟೀಲ ರವರು ದೂರುದಾರರಿಂದ ಪಡೆದ ಪೂರ್ತಿ ಹಣ ರೂ.6,50,720 ಕ್ಕೆ ಶೆ.10 ರಂತೆ ಹಣ ಸಂದಾಯವಾದ ದಿನಾಂಕದಿಂದ ಬಡ್ಡಿ ಲೆಕ್ಕ ಹಾಕಿ ಒಂದು ತಿಂಗಳ ಒಳಗಾಗಿ ಪೂರ್ತಿ ಹಣಕೊಡಲು ಆಯೋಗ ಆದೇಶಿಸಿದೆ. ಜೊತೆಗೆ ದೂರುದಾರರು ಅನುಭವಿಸಿದ ಮಾನಸಿಕ ತೊಂದರೆ ಹಾಗೂ ಅನಾನುಕೂಲತೆಗಾಗಿ ತಲಾ ರೂ.50,000 ಪರಿಹಾರ ಹಾಗೂ ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ಪೃಥ್ವಿ ಡವಲಪರ್ಸ್ಗೆ ನಿರ್ದೇಶಿಸಿದೆ.
***
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.