ಇಂದು ದಾವಣಗೆರೆಗೆ ಪ್ರಿಯಾಂಕ ಗಾಂಧಿ ಅಬ್ಬರದ ಪ್ರಚಾರ.!
ದಾವಣಗೆರೆ : AICC ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕ ಗಾಂಧಿ ಅವರು ಇಂದುದಾವಣಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಪರ ಪ್ರಚಾರ ನಡೆಸಲಿದ್ದಾರೆ.
ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಇಂದು ಮಧ್ಯಾಹ್ನ ಸಮಾವೇಶ ನಡೆಯಲಿದೆ. ಈ ಒಂದು ಬೃಹತ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ,ರಣದಿಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
ಇನ್ನೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕುರುಬ ಸಮಾಜದ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ಜಿಟಿ ವಿನಯ್ ಕುಮಾರ್ ಅವರು ಕ್ಷೇತ್ರದಲ್ಲಿ ಆ ಕಣಕ್ಕಿಳಿಯಲಿದ್ದಾರೆ ಹೀಗಾಗಿ ಸಿಎಂ ಸಿದ್ದರಾಮಯ್ಯನವರು ಕುರುಬ ಸಮಾಜದ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.