LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ಪತ್ರಿಕಾ ಗೋಷ್ಠಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ ಪ್ರಕಟಣೆ

ದಾವಣಗೆರೆ ಜುಲೈ -1.
ಈಗಾಗಲೇ ಹಲವಾರು ಕಾರಣಗಳಿಂದ ವೀರಶೈವ-ಲಿಂಗಾಯತ ಸಮಾಜವು ಛಿದ್ರ ಛಿದ್ರವಾಗಿ ಹೋಗುತ್ತಿದ್ದು ಅವೆಲ್ಲವುಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಒಂದು ಗಟ್ಟಿ ನಿರ್ಧಾರ ಕೈಗೊಳ್ಳುವ ಅವಶ್ಯಕತೆಯಿದೆ. ಬರಲಿರುವ ವರ್ಷ ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ಮಾಡಲು ನಿರ್ಧರಿಸಿದೆ. ಜಾತಿ ಗಣತಿ ಮಾಡಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದ್ದು ಉಳಿದ ಯಾರಿಗೂ ಆ ಅಧಿಕಾರವಿಲ್ಲವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಮಂಗಳವಾರ ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಜರುಗಿದ ಪತ್ರಿಕಾ ಗೋಷ್ಠಿ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಜುಲೈ 21 ಹಾಗೂ 22ರಂದು ದಾವಣಗೆರೆ ನಗರದ ಶ್ರೀಮದಭಿನವರ ರೇಣುಕ ಮಂದಿರದ ಸಭಾಂಗಣದಲ್ಲಿ ನಡೆಯಲಿರುವ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದ ಉದ್ದೇಶವನ್ನು ತಿಳಿಸಿದ ಅವರು 40 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಪೀಠಾಚಾರ್ಯರ ಮತ್ತು ಶಿವಾಚಾರ್ಯರ ಬೃಹತ್ ಸಮ್ಮೇಳನ ನಡೆದಿದೆ. 10-15 ವರ್ಷಗಳಿಂದ ಕೆಲವು ಆಂತರಿಕ ಸಮಸ್ಯೆಗಳಿಂದ ತಪ್ಪು ಕಲ್ಪನೆಯಿಂದ ಪೀಠಗಳು ದೂರ ದೂರ ಇದ್ದವು. ಈಗ ಸಮಸ್ಯೆಗಳೆಲ್ಲವನ್ನು ಬದಿಗಿರಿಸಿ ವೀರಶೈವ ಧರ್ಮ ಸಂಸ್ಕೃತಿ ಬೆಳೆಸುವ ಪ್ರಯತ್ನ ಆಗಬೇಕಾಗಿದೆ. ವಿವಿಧ ರಂಗಗಳಲ್ಲಿ ಕವಲು ದಾರಿಯಲ್ಲಿ ಹೆಜ್ಜೆ ಹಾಕುತ್ತಿರುವ ಎಲ್ಲ ಭಿನ್ನ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಆದರ್ಶ ಉತ್ಕೃಷ್ಟ ವೀರಶೈವ ಲಿಂಗಾಯತ ಧರ್ಮ ಸಂಸ್ಕೃತಿಯನ್ನು ಮತ್ತೊಮ್ಮೆ ಪುನಶ್ಚೇತನಗೊಳಿಸುವ ಸಂಕಲ್ಪವನ್ನು ಹೊಂದಿ ಶ್ರೀ ಜಗದ್ಗುರು ಪಂಚ ಪೀಠಾಧೀಶರು ಗಟ್ಟಿಯಾದ ಹೆಜ್ಜೆ ಇಟ್ಟಿದ್ದೇವೆ. ಧಾರ್ಮಿಕ ಸಾಮಾಜಿಕ ಚಿಂತನಗಳನ್ನು ಒಳಗೊಂಡAತ ಸಮಾಲೋಚನಾ ಸಮಾರಂಭ ನಡೆಯಲಿದೆ. ಇದರಲ್ಲಿ ಕರ್ನಾಟಕ ಮಹಾರಾಷ್ಟç ಆಂಧ್ರ ತೆಲಂಗಾಣ ಮಧ್ಯ ಪ್ರದೇಶ ಉತ್ತರ ಪ್ರಧೇಶ ಇನ್ನು ಅನೇಕ ರಾಜ್ಯಗಳಿಂದ ವೀಶೈವ ಗುರು ಪರಂಪರೆಯ ಮಠಾಧೀಶರು ಭಾಗವಹಿಸುವರು. ಮಾನವ ಧರ್ಮಕ್ಕೆ ಜಯವಾಗಲಿ ಎಂದ ದಿವ್ಯ ಸಂದೇಶ ನೀಡಿದ ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ತಪಗೈದ ಮುಕ್ತಿಮಂದಿರ ಕ್ಷೇತ್ರದಲ್ಲಿ ಮೊದಲ ಸಮ್ಮೇಳನ ನಡೆದು ಒಂದು ನಿರ್ಧಾರಕ್ಕ ಬರಲಾಗಿದೆ. ತದನಂತರ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟಿçÃಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಇವರ ಬೆಂಗಳೂರು ನಿವಾಸದಲ್ಲಿ ಪೀಠಾಚಾರ್ಯರು ಒಂದೆಡೆ ಸೇರಿ ಧಾರ್ಮಿಕವಾಗಿ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಚರ್ಚಿಸಲಾಗಿದೆ. ಸಮಾಜ ಬಾಂಧವರಿಗಾಗುತ್ತಿರುವ ತೊಂದರೆ ತಾಪತ್ರಯ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಒಂದು ಸಮಷ್ಟಿಯಾದ ನಿಲುವನ್ನು ವ್ಯಕ್ತಪಡಿಸುವ ಉದ್ದೇಶ ಹೊಂದಲಾಗಿದೆ.
ಈ ಕಾರಣದಿಂದಾಗಿ 21 ಹಾಗೂ 22 ರಂದು ದಾವಣಗೆರೆ ನಗರದಲ್ಲಿ ಈ ಶೃಂಗ ಸಮ್ಮೇಳನ ನಡೆಸಲಾಗುತ್ತಿದೆ.
ವೀರಶೈವ ಧರ್ಮ ಇತಿಹಾಸ ಪರಂಪರೆ ಬಹು ದೊಡ್ಡದು. ಇದಕ್ಕೆ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರ ಕೊಡುಗೆ ಬಹಳ ದೊಡ್ಡದಾಗಿದೆ. ವೀರಶೈವ ಭವ್ಯ ಸಂಸ್ಕೃತಿಗೆ 12ನೇ ಶತಮಾನದ ಶಿವಶರಣರು ಇನ್ನಷ್ಟು ಮೆರಗು ಕೊಟ್ಟಿದ್ದನ್ನು ಮರೆಯುವಂತಿಲ್ಲ. ದಿನಾಂಕ 21ರಂದು ಈ ಶೃಂಗ ಸಮ್ಮೇಳನವನ್ನು ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟಿçÃಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿಯವರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು. 22ರ ಸಮ್ಮೇಳನದಲ್ಲಿ ಪಂಚ ಪೀಠಾಧೀಶರ ಹಾಗೂ ಶಿವಾಚಾರ್ಯರ ವಿಚಾರ ವಿನಿಮಯ ಮಾಡಲಾಗುವುದು. ಇದರ ನಂತರ ವೀರಶೈವ-ಲಿಂಗಾಯತ ಮಹಾಸಭಾದವರು ಏರ್ಪಡಿಸಲು ಉದ್ದೇಶಿಸಿರುವ ಬೃಹತ್ ಸಮಾರಂಭದಲ್ಲಿ ಪಾಲ್ಗೊಳ್ಳಲಾಗುವುದು ಎಂದು ತಿಳಿಸಿದರು.
ಶ್ರೀ ಉಜ್ಜಯಿನಿ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಭಗವತ್ಪಾದರು, ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಭಗವತ್ಪಾದರು ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಮುಕ್ತಿಮಂದಿರ, ತೊಗರ್ಸಿ, ಸಂಗೊಳ್ಳಿ, ಕೊಡಿಯಾಲ ಪುಣ್ಯಕೋಟಿಮಠದ ಶ್ರೀಗಳು ಭಾಗವಹಿಸಿದ್ದರು. ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು ನಿರೂಪಿಸಿದರು ಸ್ವಾಗತಿಸಿ ನಿರೂಪಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು