Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ವಚನಗಳ ಮೂಲಕವೇ ಸಾರ್ವಜನಿಕರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ ಮಡಿವಾಳ ಮಾಚಿದೇವ:ಶಾಸಕ ರಘುಮೂರ್ತಿ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸಮಾಜದಲ್ಲಿ ಬದಲಾವಣೆಯ ಪರ್ವವನ್ನು ಆರಂಭಿಸಿದ ಅನೇಕ ದಾರ್ಶನಿಕರು ತಮ್ಮದೇಯಾದ ವಚನಗಳ ಮೂಲಕ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಲು ಶ್ರಮಿಸಿದ್ಧಾರೆ. ವಿಶೇಷವಾಗಿ ಮಡಿವಾಳಮಾಚಿದೇವ ವಚನಗಳು ಸಾರ್ವಜನಿಕರಲ್ಲಿ ಪರಿವರ್ತನೆ ಉಂಟುಮಾಡಲು ಸಹಕಾರಿಯಾಗಿವೆ ಎಂದು ಶಾಸಕ
, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಸೋಮವಾರ ತಾಲ್ಲೂಕು ಪಂಚಾಯಿತಿ ಕಾರ್ಯಲಯದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಮಡಿವಾಳ ಸಮುದಾಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಡಿವಾಳಮಾಚಿದೇವ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಮಡಿವಾಳಮಾಚಿದೇವರು ನಿರಂತರ ಕಾಯಕಯೋಗಿಯಾಗಿದ್ದರು, ಸದಾಕಾಲ ಧಾರ್ಮಿಕ ವಿಚಾರಧಾರೆಗಳನ್ನು ಎಲ್ಲರಿಗೂ ತಲುಪಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದವರು, ಇಂದು ಮಡಿವಾಳ ಸಮುದಾಯ ಜನರಲ್ಲಿ ಗುರುತಿಸಿಕೊಳ್ಳಲು ಮಡಿವಾಳ ಮಾಚಿದೇವರ ವಚನಗಳು ಸ್ಪೂರ್ತಿ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಶೀಲ್ಧಾರ್ ರೇಹಾನ್‌ಪಾಷ, ರಾಜ್ಯ ಸರ್ಕಾರ ಇಂತಹ ಮಹಾನೀಯರ ವಚನಗಳು ಸಮಾಜದ ಎಲ್ಲಾ ವರ್ಗಕ್ಕೂ ತಲುಪಿಸಬೇಕೆಂಬ ದೂರದೃಷ್ಟಿಯಿಂದ ಮಡಿವಾಳಮಾಚಿದೇವ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮೂಲಕ ನಡೆಸಲಾಗುತ್ತಿದೆ. ಧಾರ್ಮಿಕ ಪರಿತರ್ವನೆಯ ಹರಿಕಾರರಲ್ಲಿ ಮಡಿವಾಳಮಾಚಿದೇವರು ಒಬ್ಬರು ಎಂದರು.

ಮಡಿವಾಳ ಮಾಚಿದೇವರ ಬಗ್ಗೆ ಕೃಷಿ ಜಂಟಿ ನಿರ್ದೇಶಕ ಟಿ.ಮಂಜುನಾಥ ಉಪನ್ಯಾಸ ನೀಡಿದರು. ಸಂಜೀವಿನಿ ಲ್ಯಾಬ್‌ಟೆಕ್ನಿಷನ್ ಎಂ.ಎನ್.ಮೃತ್ಯುಂಜಯ ಮಾತನಾಡಿ, ಮಡಿವಾಳಸಮಾಜಕ್ಕೆ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಪ್ರಾತಿನಿಧ್ಯ ದೊರೆಯಬೇಕಿದೆ. ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡಬೇಕಿದೆ. ಮಡಿವಾಳ ಸಮಾಜಕ್ಕೆ ಎಸ್ಸಿ ಮೀಸಲಾತಿ ಕೊಡಿಸಲು ಶಾಸಕರು ಮುಂದಾಗಬೇಕೆಂದರು. 

ಜಿಲ್ಲಾಧ್ಯಕ್ಷ ರಾಮಜ್ಜ, ಗೌರವಾಧ್ಯಕ್ಷ ಎನ್.ಮಂಜುನಾಥ, ಅಧ್ಯಕ್ಷ ಎಂ.ನಾಗರಾಜು, ಕಾರ್ಯದರ್ಶಿ ಕುಶಾಲಪ್ಪ, ಖಜಾಂಚಿ ಆರ್ಟ್ಸ್‌ಸನ್‌ಪ್ರಕಾಶ್, ವಿಜಯಕುಮಾರ್, ಇಒ ಶಶಿಧರ, ಪೌರಾಯುಕ್ತ ಜಗರೆಡ್ಡಿ, ನಗರಸಭಾ ಸದಸ್ಯ ಬಿ.ಟಿ.ರಮೇಶ್‌ಗೌಡ, ಮುಖಂಡರಾದ ವೇದಮೂರ್ತಿ, ಜೀವನ್, ಓಂಕಾರಪ್ಪ, ಮಹಿಳಾಘಟಕದ ಅಧ್ಯಕ್ಷೆ ಶೈಲಜಾಮಂಜುನಾಥ, ಎನ್.ಮಂಜಳಾ ಮುಂತಾದವರು ಉಪಸ್ಥಿತರಿದ್ದರು.  

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ