ಬೆಳಗಾವಿ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ರಾಮದುರ್ಗದಲ್ಲಿ ಅವರು ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ರಾಮದುರ್ಗ ಮತ ಕ್ಷೇತ್ರದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ ಅಶೋಕ ಪಟ್ಟಣ ಅವರ ಚುನಾವಣಾ ಪ್ರಚಾರಕ್ಕೆ ನೆರವಾಗಲಿದ್ದಾರೆ.
ರಾಹುಲ್ ಗಾಂಧಿ ಆಗಮಿಸುತ್ತಿರುವುದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇದುವರೆಗೆ ಅವರ ಕಾರ್ಯಕ್ರಮ ನಿಗದಿಯಾಗಿರಲಿಲ್ಲ. ಆದರೆ ರವಿವಾರ ಏಕಾಏಕಿ ಅವರ ಕಾರ್ಯಕ್ರಮ ನಿಗದಿಗೊಂಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.