LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರ ಕೋಟೆ ಹತ್ತಿರದ ರಾಜಕಾಲುವೆಯ ದುರಸ್ಥಿ ಕಾರ್ಯದ ಪರಿಶೀಲನೆ

 
ರಾಯಚೂರು ಜೂನ್ 6 ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಜೂನ್ 5ರಂದು ಸಂಜೆ ರಾಯಚೂರ ನಗರದ ಕೋಟೆ ಹತ್ತಿರದ ರಾಜಕಾಲುವೆ ಪ್ರದೇಶಕ್ಕೆ ಭೇಟಿ ನೀಡಿ ಕಾಲುವೆಯ ದುರಸ್ಥಿ ಕಾರ್ಯದ ವೀಕ್ಷಣೆ ನಡೆಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡ್ವೆ, ರಾಯಚೂರ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಾಪತ್ರ ಅವರೊಂದಿಗೆ ರಾಜಕಾಲುವೆಯ ಸ್ಥಳಕ್ಕೆ ಭೇಟಿ ನೀಡಿ, ಜೆಸಿಬಿಗಳಿಂದ ನಡೆದ ಕಾಲುವೆಯ ಸ್ವಚ್ಚತಾ ಕಾರ್ಯವನ್ನು ಪರಿಶೀಲಿಸಿದರು.
ಕಾಲುವೆಯ ಸ್ವಚ್ಛತಾ ಕಾರ್ಯವು ಈಗ ಆರಂಭವಾಗಿದ್ದರಿAದಾಗಿ ರಾಯಚೂರ ನಿಗರದ ನಿವಾಸಿಗಳಿಗೆ ಸಂತಸ ತಂದಿದೆ. ಈ ಕಾಲುವೆಯ ಸ್ವಚ್ಛತಾ ಕಾರ್ಯವು ವೈಜ್ಞಾನಿಕ ರೀತಿಯಲ್ಲಿ ಆಗಬೇಕು. ಇಲ್ಲಿ ಮತ್ತೆ ಗಲೀಜು ಸೇರಿದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಮಾಜ ಸೇವಕರಾದ ಮೋಸಿನ್ ಖಾನ್ ಅವರು ಇದೆ ವೇಳೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಈಗ ಜೆಸಿಬಿಗಳಿಂದ ಕಸ ಎತ್ತು ಹಾಕಿ ಸರಿಪಡಿಸುತ್ತಿರುವುದು ಸರಿ ಇದೆ. ಬಹುವರ್ಷಗಳ ನಂತರ ಈ ಕೆಲಸ ಆರಂಭವಾಗಿದ್ದು ಕಂಡು ನಮಗೆ ಬಹಳಷ್ಟು ಖುಷಿ ಆಗಿದೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ರಾಯಚೂರ ನಗರದ ಜನರು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತಿದೆ. ಈ ರೀತಿ ಕಸವನ್ನು ಎತ್ತುವ ಕಾರ್ಯ ಮತ್ತೆ ಮತ್ತೆ ಆಗದಂತೆ ಮತ್ತೆ ಮತ್ತೆ ಕಸ ತುಂಬದ ಹಾಗೆ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಈ ರಾಜಕಾಲುವೆಯ ದುರಸ್ತಿ ಮತ್ತು ಕಾಲುವೆಯನ್ನು ಸರಿಪಡಿಸುವ ಕಾರ್ಯ ನಡೆಯಬೇಕು. ಇಡೀ ರಾಜ್ಯಕ್ಕೆ ಮಾದರಿಯಾಗುವ ಹಾಗೆ ಈ ಕಾಲುವೆಯನ್ನು ವಿನೂತನ ರೀತಿಯಲ್ಲಿ ಸರಿಪಡಿಸುವ ಕಾರ್ಯ ಆಗಬೇಕು ಎಂದು ಸಾರ್ವಜನಿಕರು ಇದೆ ವೇಳೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ನಗರದ ಹೃದಯಭಾಗದ ಜನನಿಬಿಡ ಪ್ರದೇಶದಲ್ಲಿನ ಕೋಟೆ ಪಕ್ಕದಲ್ಲಿದ್ದ ಈ ರಾಜಕಾಲುವೆಯ ಸ್ಥಿತಿಯಿಂದ ರಾಯಚೂರ ನಗರದ ನಿವಾಸಿಗಳಿಗೆ ಸಾಕಷ್ಟು ಕಿರಿಕಿರಿಯಾಗಿತ್ತು. ರಾಯಚೂರ ನಗರವನ್ನು ಪ್ರವೇಶಿಸುವ ಜನತೆಯು ಸಹ ಕಾಲುವೆಯನ್ನು ಕಂಡು ಬೇಸರ ವ್ಯಕ್ತಪಡಿಸುವ ದುಸ್ಥಿತಿಯಿತ್ತು. ಈಗಾಗಲೇ ಕೆಲವು ದಿನಗಳಿಂದ ನಿರಂತರವಾಗಿ ಈ ಕಾಲುವೆಯ ದುರಸ್ಥಿ ಕಾರ್ಯ ನಡೆದಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಇದೆ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ರಾಜಕಾಲುವೆಗೆ ಇನ್ಮೇಲೆ ಯಾರು ಸಹ ಕಸವನ್ನು ಎಸೆಯದಂತೆ ವೈಜ್ಞಾನಿಕ ರೀತಿಯಲ್ಲಿ ಕಾಲುವೆಯ ಶುಚಿತ್ವಕ್ಕೆ ಕ್ರಮ ವಹಿಸಲಾಗುವುದು ಎಂದು ಇದೆ ವೇಳೆ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು