LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

‘ನಾನು ಹೈದರಾಬಾದ್​ನವಳು’ : ಹೆಮ್ಮೆಯಿಂದ ಹೇಳಿದ ರಶ್ಮಿಕಾ…!

ತೆಲಂಗಾಣ : ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಅವರನ್ನು ದ್ವೇಷಿಸುವವರ ಸಂಖ್ಯೆ ದೊಡ್ಡದಿದೆ. ಇದಕ್ಕೆ ಕಾರಣ ಹಲವು. ಈಗ ಅವರನ್ನು ಟ್ರೋಲ್ ಮಾಡಲು ಹೊಸ ಕಾರಣ ಸಿಕ್ಕಿದೆ. ರಶ್ಮಿಕಾ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ. ಅವರ ಹೇಳಿಕೆ ಚರ್ಚೆಗೆ ಕಾರಣ ಆಗಿದೆ.





 

‘ನಾನು ಹೈದರಾಬಾದ್​ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದುಕೊಳ್ಳುತ್ತೇನೆ’ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ.

‘ರಶ್ಮಿಕಾ ಯಾವಾಗ ಹೈದರಾಬಾದ್​ನವರಾದರು? ಇದನ್ನು ಜನನ ಪ್ರಮಾಣಪತ್ರದಲ್ಲಿ ಸೇರಿಸಿದ್ದಾರಾ’ ಎಂದು ಕೆಲವರು ಕೇಳಿದ್ದಾರೆ. ಇನ್ನೂ ಕೆಲವರು, ‘ವಿಜಯ್ ದೇವರಕೊಂಡ ಅವರನ್ನು ವಿವಾಹ ಆಗುವ ಮೊದಲೇ ರಶ್ಮಿಕಾ ಹೈದರಾಬಾದ್​ನವರಾಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ‘ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ‘ನಿಮ್ಮನ್ನು ದ್ವೇಷಿಸಲು ನಿತ್ಯ ಹೊಸ ಹೊಸ ಕಾರಣ ನೀಡುತ್ತೀರಿ’ ಎಂದು ಕೆಲವರು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಈ ರೀತಿಯ ಹೇಳಿಕೆಯನ್ನು ಈ ಮೊದಲಿನಿಂದಲೂ ನೀಡುತ್ತಾ ಬರುತ್ತಿದ್ದಾರೆ. ಈ ಮೊದಲು ಅವರು ‘ನನಗೆ ಕನ್ನಡವೂ ಬರಲ್ಲ’ ಎಂದು ಸಂದರ್ಶನ ಒಂದರಲ್ಲಿ ಹೇಳಿ ಟೀಕೆಗೆ ಗುರಿಯಾಗಿದ್ದರು. ಈಗ ಅವರ ಮೇಲೆ ದ್ವೇಷ ಹೆಚ್ಚುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST