ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೊಂದಣಿ
ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನೇಕಾರ ಸಮ್ಮಾನ್ ಯೋಜನೆಯಡಿ 2025-26ನೇ ಸಾಲಿನಲ್ಲಿ ನೊಂದಣಿಯಾದ ನೇಕಾರರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ(ಪಿ.ಎಂ.ಜೆ.ಜೆ.ಬಿ.ವೈ) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ (ಪಿ.ಎಂ.ಎಸ್.ಬಿ.ವೈ) ಅಡಿ ವಿಮಾ ಸೌಲಭ್ಯ ಪಡೆಯಲು ಆರ್ಥಿಕ ನೆರವು ನೀಡಲಾಗುವುದು. ವಿಮೆ ಪಡೆಯುವುದು ಕಡ್ಡಾಯವಾಗಿದ್ದು, 18 ರಿಂದ 50 ವರ್ಷದ ಅರ್ಹ ನೇಕಾರರು ಪಿ.ಎಂ.ಜೆ.ಜೆ.ಬಿ.ವೈ ಯೋಜನೆಯಡಿ 18 ರಿಂದ 70 ವರ್ಷದ ಅರ್ಹ ನೇಕಾರರು ಪಿ.ಎಂ.ಎಸ್.ಬಿ.ವೈ ನೊಂದಾಯಿಸಿಕೊಳ್ಳಬಹುದು.
ಇವರಿಗೆ 2026-27ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ನೀಡಲು ಪರಿಗಣಿಸಲಾಗುವುದು. ಅರ್ಹರು ವಿಮೆಯಡಿ ನೊಂದಾಯಿಸಿಕೊAಡ ರಸೀದಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಬ್ಯಾಂಕ್ ಸ್ಟೇಟ್ಮೆಂಟ್ ಪ್ರತಿ, ಆಧಾರ್ ಕಾರ್ಡ್, ನೇಕಾರರ ಪೇಚ್ಹಾನ್ ಕಾರ್ಡ್ ದಾಖಲೆಗಳೊಂದಿಗೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿಯಲ್ಲಿರುವ ಕಚೇರಿಗೆ ಮೇ.31 ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-221426 ಸಂಪರ್ಕಿಸಬಹುದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.