LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರದಿಂದ ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಪಶುಸಂಗೋಪನೆ ಇಲಾಖೆಯೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ರಾಜ್ಯ ಸರ್ಕಾರ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ ಸೇವನೆ ಎಷ್ಟು ಸುರಕ್ಷಿತ? ಹಕ್ಕಿಜ್ವರದ ಭೀತಿ ಮಧ್ಯೆಯೂ ಕೋಳಿ ಸೇವನೆಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕೋಳಿ ಸೇವನೆಗೆ ಮಾರ್ಗಸೂಚಿ:
70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ ಎಂದು ಗೈಡ್‌ಲೈನ್ಸ್ ಹೇಳಿದೆ.

ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಧನೆಯನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ : ಲಂಬಾಣಿ ಗುರುಪೀಠದ ಶ್ರೀನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ: ದಿನೇಶ ಗುಂಡೂರಾವ್.!ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆ:  ಶಾಸಕ ಟಿ. ರಘುಮೂರ್ತಿಸಮುದ್ರದ ಒಳಗೆ ಭರತನಾಟ್ಯ - 14 ವರ್ಷದ ಬಾಲಕಿಯ ನಾಟ್ಯಪ್ರೇಮಕ್ಕೆ ನೆಟ್ಟಿಗರು ಫಿದಾ!ಮಗುವಿನ ಕೈಯಲ್ಲಿ ಚೀನಾದ ರೈಫಲ್ ಸ್ಕೋಪ್ ಪತ್ತೆ!ರಷ್ಯಾದ ಸೇನೆಗೆ ಸೇರುವಂತೆ ಗುಜರಾತ್ ವಿದ್ಯಾರ್ಥಿಗೆ ಒತ್ತಾಯ3 ಕೋಟಿ ವಿಮೆಗಾಗಿ ತಂದೆಗೆ ಹಾವು ಕಚ್ಚಿಸಿ ಕೊಂದ ಪುತ್ರರು!!'ಬಲವಿಲ್ಲದ ಯೂನಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ವಿಫಲ'– ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ- ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆಮೂಳೆ ಮುರಿದರೂ ವೀಲ್‌ಚೇರ್, ಆಕ್ಸಿಜನ್ ಸಪೋರ್ಟ್‌ನಿಂದ UPSC ಬರೆದ ದಿಟ್ಟೆ