LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೌನೇಶ್ವರರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು.



ಸಿರುಗುಪ್ಪ. ಜನವರಿ 28. ನಗರದ ಬಳ್ಳಾರಿ ರಸ್ತೆಯಲ್ಲಿರುವ ಶ್ರೀಮೌನೇಶ್ವರದೇವಸ್ಥಾನದಲ್ಲಿಶ್ರೀಮೌನೇಶ್ವರಮಹಾಸ್ವಾಮಿಗಳ7ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬುಧವಾರ ಬೆಳಿಗ್ಗೆ ಶ್ರೀ ಕಾಳಿಕಾ ದೇವಸ್ಥಾನದಲ್ಲಿ ಶ್ರೀದೇವಿಗೆ ಪಂಚಾಮೃತ ಅಭಿಷೇಕ, ವಿವಿಧ ಪೂಜೆಗಳನ್ನು ನೆರವೇರಿಸಿ ಹೂಗಳಿಂದ ವಿಶೇಷ ಅಲಂಕಾರ ಮಾಡಿದ ನಂತರ, ಶ್ರೀ ಮೌನೇಶ್ವರ ಉತ್ಸವ ಮೂರ್ತಿಯನ್ನು ಪುರಂತರ ಸೇವೆ, ಮಂಗಳ ವಾದ್ಯಗಳೊಂದಿಗೆ ಶ್ರೀ ಮೌನೇಶ್ವರ ದೇವಸ್ಥಾನಕ್ಕೆ ತರಲಾಯಿತು.
ಶ್ರೀ ಮೌನೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಶ್ರೀ ಮೌನೇಶ್ವರ ಸ್ವಾಮಿಯ ಮೂರ್ತಿಗೆ ವಿವಿಧ ಅಭಿಷೇಕಗಳನ್ನು ನೆರವೇರಿಸಿ, ವಿವಿಧ ಹೂಗಳಿಂದ ಅಲಂಕರಿಸಿ ಮಹಾಮಂಗಳಾರತಿ ಮಾಡಲಾಯಿತು. ನಂತರ ದೇವಸ್ಥಾನದ ಆವರಣದಲ್ಲಿ ಶ್ರೀ ಮೌನೇಶ್ವರನ ಭಾವಚಿತ್ರವನ್ನು ಇಟ್ಟು ವಿಶಿಷ್ಟ ಖಾದ್ಯ ಮಾದಲಿಗೆ ಪೂಜೆಯನ್ನು ನೆರವೇರಿಸಿ ಮಹಾಮಂಗಳಾರತಿ ಮಾಡಿದ ನಂತರ ಭಕ್ತರಿಗೆ ಮಾದಲಿ ಪ್ರಸಾದವನ್ನು ವಿತರಿಸಲಾಯಿತು. ನಂತರ ಅನ್ನ ದಾಸೋಹ ನಡೆಯಿತು. ಇದೇ ಸಂದರ್ಭದಲ್ಲಿ ಮೂರುಜನ ಮಕ್ಕಳಿಗೆ ಉಪನಯನ ಕಾರ್ಯಕ್ರಮ ನಡೆಯಿತು.
ಪುರೋಹಿತರಾದ ಬ್ರಹ್ಮಶ್ರೀ ಆಯ್ಯಪ್ಪಸ್ವಾಮಿ ವಿಶ್ವಕರ್ಮ, ವೇ.ಪಂ. ಮಲ್ಲಿಕಾರ್ಜುನ ಶಾಸ್ತ್ರಿ,ಆದಿವಿಷ್ಣು ಆಚಾರಿ, ಮಾನಪ್ಪ ಆಚಾರಿ, ಎಚ್ ಶಂಕ್ರಾಚಾರಿ, ಸಿದ್ದಾರ್ಥ ಆಚಾರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.


ಶ್ರೀ ಮೌನೇಶ್ವರ ದೇವಸ್ಥಾನ ಟ್ರಸ್ಟ್ (ರಿ.) ಕಾಳಿಕಾ ಕಮಠೇಶ್ವರ ದೇವಸ್ಥಾನ ಟ್ರಸ್ಟ್ (ರಿ.) ಸಿರುಗುಪ್ಪ ಮತ್ತು ವಿಶ್ವಕರ್ಮಸಮಾಜದ ಮುಖಂಡರರಾದ ,ಮೌನೇಶ ಆಚಾರಿ , ಅರಳಿಗನೂರ ರಾಮಲಿಂಗ ಆಚಾರಿ , ಹಳೆಕೊಟೆ ವಿರೇಶ ಆಚಾರಿ ಸೇರಿದಂತೆ,ವಿರೇಶ ಆಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಬಂದುಗಳು ಉಪಸ್ಥಿತಿರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು