LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾಸ್ವಾಮಿ ಕೊಲೆ ಕೇಸ್: ಪ್ರತ್ಯಕ್ಷದರ್ಶಿ ಮೊಬೈಲ್‌ನಲ್ಲಿದ್ದ 8 ಫೋಟೋ ರಿಕವರಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿ ಪುನೀತ್ ಮೊಬೈಲ್‌ನಲ್ಲಿದ್ದ 8 ಫೋಟೋಗಳನ್ನು ತನಿಖಾಧಿಕಾರಿಗಳು ತನಿಖಾಧಿಕಾರಿಗಳು ರಿಕವರಿ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿ ಪುನಿತ್ ಮೊಬೈಲ್‌ನಲ್ಲಿ ಸಿಕ್ಕ ಮಹತ್ವದ ಸಾಕ್ಷಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೋಟೋ ಸಿಕ್ಕರೆ ನನಗೆ ಕಂಟಕವಾಗುತ್ತೆ ಎಂಬ ಭಯದಲ್ಲಿದ್ದ ಪುನೀತ್ ಫೋಟೋಗಳನ್ನು ಡಿಲೀಟ್ ಮಾಡಿದ್ದ. ಇದೀಗ ತನಿಖಾಧಿಕಾರಿಗಳು ರಿಟ್ರೀವ್ ಮಾಡಿದ್ದು ಪುನೀತ್ ಮೊಬೈಲ್‌ನಲ್ಲಿದ್ದ ಫೋಟೋಗಳನ್ನು ರಿಕವರಿಯಾಗಿದೆ.

ರಿಕವರಿಯಾದ ಫೋಟೋದಲ್ಲಿ, ಕೊಲೆ ನಡೆದ ಶೆಡ್‌ನಲ್ಲಿ ಆರೋಪಿಗಳ ಜೊತೆ ದರ್ಶನ್ ನೀಲಿ ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಹಾಕಿಕೊಂಡು ಪೋಸ್ ಕೊಟ್ಟಿದ್ದಾರೆ. ಆರೋಪಿ ವಿನಯ್ ರ‍್ಯಾಗ್ಲಂರ್ ಕಾರಿನ ಮುಂದೆ, ಎ2 ಆರೋಪಿ ನಟ ದರ್ಶನ್, ಮೂವರು ಆರೋಪಿಗಳಾದ ಎ6 ಜಗ್ಗ, ಎ7 ಅನುಕುಮಾರ್, ಎ8 ರವಿಶಂಕರ್ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆರೋಪಿಗಳು ಪುನೀತ್‌ಗೆ ಹಾಯ್ ಎಂದು ಮೇಸೇಜ್ ಮಾಡಿ ಫೋಟೊಗಳನ್ನ ತರಿಸಿಕೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇದೀಗ ಪ್ರತ್ಯಕ್ಷದರ್ಶಿ ಪುನೀತ್ ಮೊಬೈಲ್‌ನಲ್ಲಿ ದೊರೆತ ಫೋಟೋಗಳು ದರ್ಶನ್‌ಗೆ ಕಂಟಕವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಈ ಫೋಟೋಗಳು ಮಹತ್ವದ ಸಾಕ್ಷಿಯಾಗಿ ಪರಿಣಮಿಸಲಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಳ್ಳಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಜಾಗ ಖರೀದಿಸಿದ ಕಿಚ್ಚ ಸುದೀಪ್ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!