Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಚ್.ಕೆ.ಪಾಟೀಲ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮನವಿ

ಬೆಳಗಾವಿ : ರಾಜ್ಯದ ನೂತನ ಸಂಪುಟದಲ್ಲಿ ಹಿರಿಯ ರಾಜಕಾರಣಿ, ಮುತ್ಸದ್ಧಿ, ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ರಾಜಕೀಯ ಹಾದಿಯನ್ನು ಕ್ರಮಿಸುತ್ತ ಬಂದಿರುವ ಎಚ್.ಕೆ.ಪಾಟೀಲ ಅವರು ಸೇರ್ಪಡೆಯಾಗದೇ ಇರುವುದು ನಾಡಿನ ಪ್ರಜ್ಞಾವಂತ ನಾಗರಿಕರಿಗೆ ಅಚ್ಚರಿ ಹಾಗೂ  ಆಘಾತವನ್ನುಂಟು ಮಾಡಿದೆ. ವಿಶೇಷವಾಗಿ ಗಡಿನಾಡು ಹಾಗೂ ಹೊರನಾಡು ಕನ್ನಡಿಗರಿಗೆ ಮತ್ತು ಕನ್ನಡ ಪರ ಸಂಘಟನೆಗಳಿಗೆ ಭಾರಿ ನಿರಾಸೆಯನ್ನುಂಟು ಮಾಡಿದೆ ಎಂದು ಬೆಳಗಾವಿಯ ವಿವಿಧ ಕನ್ನಡ ಸಂಘಟನೆಗಳು ಅಭಿಪ್ರಾಯ ವ್ಯಕ್ತಪಡಿಸಿವೆ.  

ಈ ಬಗ್ಗೆ ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ಮುಖ್ಯಮಂತ್ರಿಗೆ ಮನವಿ ರವಾನೆ ಮಾಡಿವೆ.

ಗಡಿನಾಡು ಹಾಗೂ ಹೊರನಾಡು ಕನ್ನಡಿಗರ ಒತ್ತಾಯದ ಮೇರೆಗೆ 2016 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್.ಕೆ. ಪಾಟೀಲ ಅವರನ್ನು ಗಡಿ ಉಸ್ತುವಾರಿ ಮಂತ್ರಿಗಳನ್ನಾಗಿ ನೇಮಕ ಮಾಡಿದ್ದರು. ನಾಡು, ನುಡಿ, ಗಡಿಯ ಸಮಸ್ಯೆಗಳ ಬಗ್ಗೆ ಆಳವಾದ ಅಭ್ಯಾಸ ಹಾಗೂ ಅಧ್ಯಯನ ಮಾಡಿರುವ ಅವರು ಕರ್ನಾಟಕದ ಗಡಿ ಭಾಗದ ಸಮಸ್ಯೆಗಳ ಬಗ್ಗೆ ನಿರಂತರವಾಗಿ ಚರ್ಚಿಸುತ್ತ ಬಂದಿರುವ ಪರಿಣಾಮವಾಗಿ 2023 ರಲ್ಲಿ ಮತ್ತೆ ಅವರನ್ನೇ ಗಡಿ  ಉಸ್ತವಾರಿ ಸಚಿವರನ್ನಾಗಿ ಸಿದ್ದರಾಮಯ್ಯನವರು ನೇಮಕ ಮಾಡಿದ್ದರು. ಬೆಳಗಾವಿ  ಗಡಿ ಭಾಗದ ಕನ್ನಡ ಸಂಘಟನೆಗಳೊಂದಿಗೆ ನಿರಂತರವಾಗಿ ಸಂಪರ್ಕ ಇಟ್ಟುಕೊಂಡಿರುವ ಅವರು ರಾಜ್ಯ ರಚನೆಯಾಗಿ 70 ವರ್ಷಗಳ ನಂತರವೂ ಕನ್ನಡ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳಿರದ ಗ್ರಾಮಗಳಲ್ಲಿ ಶಾಲೆಗಳನ್ನು ಮಂಜೂರು ಮಾಡಿಕೊಟ್ಟರು. ರಾಜ್ಯ ರಚನೆಯಾಗಿ 70 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲು ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಆಚರಣೆಗಾಗಿ ತಮ್ಮ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದರು.  ಎಚ್.ಕೆ. ಪಾಟೀಲ ಅವರ ತಂದೆ, ಹುಲಕೋಟಿ ಹುಲಿ ದಿ.ಕೆ.ಎಚ್.ಪಾಟೀಲ ಅವರು 1973 ರಲ್ಲಿ ದೇವರಾಜ ಅರಸು ಸಂಪುಟದಲ್ಲಿ ಗಡಿ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಂತವರ ಪುತ್ರ ಎಚ್.ಕೆ. ಪಾಟೀಲರವರು ಕರ್ನಾಟಕ ಕಂಡ ಸಭ್ಯ ಹಾಗೂ ಸೈದ್ಧಾಂತಿಕ ರಾಜಕಾರಣಿ. ಅವರನ್ನು ಸಂಪುಟದಿಂದ ದೂರವಿಟ್ಟಿರುವುದರಿಂದ ಕರ್ನಾಟಕದ ಜನತೆಗೆ ತಪ್ಪು ಸಂದೇಶ ಹೋಗಿದೆ. ಇದನ್ನು ಸರಿಪಡಿಸುವ ಹೊಣಗಾರಿಕೆ ತಮ್ಮ ಮೇಲಿದೆ ಎಂದು ಸಂಘಟನೆಗಳು ಹೇಳಿವೆ.

ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾವು ಸಂಪುಟದ ವಿಸ್ತರಣೆಯ ಸಂದರ್ಭದಲ್ಲಿ ಅವರನ್ನು ಮರು ಸೇರ್ಪಡೆ ಮಾಡಿಕೊಂಡು ಸೈದ್ಧಾಂತಿಕ ನೆಲಗಟ್ಟಿನ ರಾಜಕೀಯಕ್ಕೆ ಇನ್ನೂ ಆಸ್ಪದವಿದೆಯೆಂಬ ಸಂದೇಶವನ್ನು ರಾಜ್ಯದ ಜನತೆಗೆ  ಕಳಿಸಬೇಕೆಂದು ಕಳಕಳಿಯಿಂದ ಮನವಿ ಮಾಡುತ್ತೇವೆ ಎಂದು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ