Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜಶ್ರೀ ಅವರಿಗೆ ಕರ್ನಾಟಕ ರಾಜ್ಯೋತ್ಸವ ತಡೆಹಿಡಿಯಲು ಮನವಿ

ಬೆಳಗಾವಿ: ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ರಾಜಶ್ರೀ ನಾಗರಾಜ ಯಾದವ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುವುದನ್ನು ತಕ್ಷಣ ತಡೆಹಿಡಿಯುವಂತೆ ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದೆ.

ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ನಾಗರಾಜ ಯಾದವ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿರುವುದು ಅತ್ಯಂತ ಖಂಡನಿಯವಾಗಿದ್ದು ಗಡಿಭಾಗದಲ್ಲಿ ವ್ಯಾಪಕ ಆಕ್ರೋಶ ಅಸಮಾಧಾನ ವ್ಯಕ್ತವಾಗುತ್ತಿದೆ. ಅಲ್ಲದೇ ಕರ್ನಾಟಕ ಸರಕಾರಕ್ಕೆ ಇದೊಂದು ಕಪ್ಪು ಚುಕ್ಕೆಯಾಗಿದೆ. ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರ ಪತ್ನಿ ಎಂಬ ಕಾರಣಕ್ಕಾಗಿ ಪ್ರಶಸ್ತಿ ನೀಡಲಾಗಿದೆಯೆಂಬ ಭಾವನೆ ಉಂಟಾಗಿದ್ದು ಸರಕಾರಕ್ಕೆ ಕಳಂಕ ತಂದಂತಾಗಿದೆ. ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯು ಕನ್ನಡ ನಾಡು, ನುಡಿ, ಗಡಿಯ ಸಂಬಂಧ ಯಾವಾಗಲೂ ನಕಾರಾತ್ಮಕ ನಿಲುವು ತಳೆಯುತ್ತ ಬಂದಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಧಿಕ್ಕರಿಸುತ್ತಲೇ ಬಂದಿದೆ. ಸಂಸ್ಥೆಯ ಒಂದೂ ನಾಮ ಫಲಕಗಳಲ್ಲಿ ಕನ್ನಡವು ಕಾಣುವುದಿಲ್ಲ. ಅಲ್ಲದೇ ರಾಜ್ಯೋತ್ಸವ ಪ್ರಶಸ್ತಿಯನ್ನು 60 ವರ್ಷ ವಯಸ್ಸಿಗಿಂತ ಮೇಲಿನವರಿಗೆ ಕೊಡಬೇಕೆಂಬ ನಿಯಮವನ್ನು ಸಹ ರಾಜಶ್ರೀಯವರ ವಿಷಯದಲ್ಲಿ ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಆದ್ದರಿಂದ ರಾಜಶ್ರೀ ಅವರಿಗೆ ನೀಡಲು ಉದ್ದೇಶಿಸಿರುವ ಪ್ರಶಸ್ತಿಯನ್ನು ಸರಕಾರದ ಮಾನ, ಮರ್ಯಾದೆ, ಗೌರವದ ದೃಷ್ಟಿಯಿಂದ ತತಕ್ಷಣ ತಡೆಹಿಡಿಯಬೇಕೆಂದು ಕೋರುತ್ತೇವೆ.

ಬೆಳಗಾವಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ ಅನೇಕ ಗಣ್ಯ ಮಾನ್ಯರಿದ್ದಾರೆ. ಸಾಹಿತ್ಯ, ಶಿಕ್ಷಣ, ರಂಗಭೂಮಿ, ಪತ್ರಿಕೋದ್ಯಮ ಹಾಗೂ ಕನ್ನಡ ಹೋರಾಟಗಳಲ್ಲಿ ಅನೇಕ ಮಹನೀಯರಿದ್ದಾರೆ. ಈ ಕೆಳಕಂಡ ಅವರ ಬಗ್ಗೆ ತಾವು ಸಹಾನುಭೂತಿಯಿಂದ ಪರಿಶೀಲಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಬೇಕು.

1)ಶ್ರೀ. ಬಿ.ಎಸ್. ಗವಿಮಠ : 80 ವರ್ಷ, 2) ಶ್ರೀ ಬಸವರಾಜ ಜಗಜಂಪಿ : 78 ವರ್ಷ, 3) ಶ್ರೀ. ಎಲ್ ಎಸ್. ಶಾಸ್ತ್ರಿ : 82 ವರ್ಷ,
ಈ ಮೂವರು ಕ್ರಮವಾಗಿ ಸಾಹಿತ್ಯ, ರಂಗಭೂಮಿ ಹಾಗೂ ಪತ್ರಿಕೋದ್ಯಮದಲ್ಲಿ ಅಪಾರ ಸೇವೆ ಸಲ್ಲಿಸಿದವರಾಗಿದ್ದಾರೆ. ಎಸ್.ಎಂ. ಕುಲಕರ್ಣಿ 83 ವರ್ಷ ಬೆಳಗಾವಿಯ ಪ್ರತಿಷ್ಠಿತ ಕರ್ನಾಟಕ ಲಾ ಸೊಸಾಯಿಟಿ ಅಧ್ಯಕ್ಷರಾಗಿ ಬೆಳಗಾವಿಯ ಕನ್ನಡ ಚಟುವಟಿಕೆಗಳಲ್ಲಿ ಸದಾಕಾಲ ತಮ್ಮನ್ನು ತಾವು ತೊಡಗಿಸಿಕೊಂಡವರಾಗಿದ್ದಾರೆ.

ಎಚ್.ಬಿ.ಕೋಲಕಾರ : ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಡಿ.ಎಸ್.ಚೌಗಲೆ : ಅಪ್ಪಟ ರಂಗಕರ್ಮಿಯಾಗಿರುವ ಇವರು ಕರ್ನಾಟಕವಲ್ಲದೇ ಹೊರರಾಜ್ಯಗಳಲ್ಲೂ ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿದವರಾಗಿದ್ದಾರೆ.

ಮಾನವ ಬಂಧುತ್ವ ವೇದಿಕೆ : ಈ ಸಂಸ್ಥೆಯು ಜನತೆಯಲ್ಲಿ ಪ್ರಗತಿಪರ ವಿಚಾರಧಾರೆಗಳನ್ನು ಬಿತ್ತುತಿದ್ದು ಪ್ರೊ. ವೈ.ಬಿ.ಹಿಮ್ಮಡಿಯವರ
ನೇತೃತ್ವದಲ್ಲಿ ಜನಪರವಾದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ.

ಈ ಮೇಲಿನ ಅಂಶಗಳನ್ನು ಪರಿಗಣಿಸಿ ರಾಜಶ್ರೀ ನಾಗರಾಜ ಯಾದವ ಅವರ ಬದಲಿಗೆ ಮೇಲಿನ ಒಬ್ಬರಿಗೆ ಪ್ರಶಸ್ತಿಯನ್ನು ಘೋಷಿಸಬೇಕೆಂದು ಕೋರುತ್ತೇವೆ ಎಂದು ಸಂಘಟನೆಯ ಅಧ್ಯಕ್ಷ ಅಶೋಕ ಚಂದರಗಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ