LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಮುದಾಯ ಸಂಪನ್ಮೂಲ ಸಖಿಯರು ವೇತನ ಹೆಚ್ಚಳಕ್ಕೆ ಆಗ್ರಹ.!

 

ಚಿತ್ರದುರ್ಗ : ಜಿಲ್ಲೆಯ ಆರು ತಾಲ್ಲೂಕಿನ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿನ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ಸಖಿಯರು ವೇತನ ಹೆಚ್ಚಳ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವ-ಸಹಾಯ ಗುಂಪುಗಳ ಒಕ್ಕೂಟಗಳನ್ನು ರಚಿಸಿಕೊಂಡು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಬರುತ್ತಿದ್ದರೂ ವೇತನ ಹೆಚ್ಚಳವಾಗಿಲ್ಲ. ಮುಖ್ಯ ಪುಸ್ತಕ ಬರಹಗಾರರಿಗೆ ಮಾಸಿಕ ಇಪ್ಪತ್ತು ಸಾವಿರ ರೂ. ಸ್ಥಳೀಯ ಸಂಪನ್ಮೂಲ ಸಖಿಯರಿಗೆ ತಿಂಗಳಿಗೆ ಹದಿನೈದು ಸಾವಿರ ರೂ.ಗಳ ವೇತನ ಕೊಡಬೇಕೆಂದು ಪ್ರತಿಭಟನಾನಿರತ ಮಹಿಳೆಯರು ಒತ್ತಾಯಿಸಿದರು.

ಸರ್ಕಾರದಿಂದ ನೇರವಾಗಿ ವೇತನ ಬ್ಯಾಂಕ್ ಖಾತೆಗಳಿಗೆ ಜಮೆಯಾಗಬೇಕು. ವೇತನ ಸಹಿತ ಹೆರಿಗೆ ರಜೆ ಮಂಜೂರು ಮಾಡಬೇಕು. ನಮ್ಮ ಮೇಲೆ ನಡೆಯುತ್ತಿರುವ ಮಾನಸಿಕ ದೌರ್ಜನ್ಯಗಳು ನಿಲ್ಲಲಿ. ಇ.ಎಸ್.ಐ. ಮತ್ತು ಪಿ.ಎಫ್. ಸೌಲಭ್ಯಗಳನ್ನು ನೀಡಬೇಕೆಂದು ಮುಖ್ಯ ಪುಸ್ತಕ ಬರಹಗಾರರು ಹಾಗೂ ಸಖಿಯವರು ಆಗ್ರಹಿಸಿದರು.

ಸುನಿತ, ಅನಿತ, ಮಂಜುಳ, ವನಿತಮ್ಮ, ನಿರ್ಮಲ, ವಿಂದ್ಯಾ, ಉಷ, ತ್ರಿವೇಣಿ, ಸೌಮ್ಯ, ಬಸಮ್ಮ, ರಾಧ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ