Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಿವೃತ್ತಿ ಘೋಷಿಸಿದ ವೈಎಸ್‌ವಿ ದತ್ತ : ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ

 

ಚಿಕ್ಕಮಗಳೂರು:
ಕೆಲ ದಿನಗಳ ಹಿಂದೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತ ನಂತರ ಜೆಡಿಎಸ್​ನ ವೈಎಸ್​ವಿ ದತ್ತ ಅವರು ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗೂ ಚನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ಅವರು ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ.
ವಿಧಾನಸಭಾ ಚುನಾವಣೆಗೂ ಮೊದಲು ಅವರು ಕಾಂಗ್ರೆಸ್ ಪಕ್ಷ ಸೇರಿ, ಅಲ್ಲಿ ಟಿಕೆಟ್ ಕೈ ತಪ್ಪಿದ್ದರಿಂದ ಕೊನೆಯ ಕ್ಷಣದಲ್ಲಿ ಪುನಃ ಜೆಡಿಎಸ್ ಸೇರಿಕಡೂರು ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಮತದಾರರು ಅವರ ಕೈ ಹಿಡಿಯಲಿಲ್ಲ. ಚುನಾವಣೆಯಲ್ಲಿ ಸೋಲುಂಡಿದ್ದ ಅವರು, ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಸುದೀರ್ಘ ಪತ್ರ ಬರೆದಿರುವ ಅವರು, ಜೂನ್ 24ರಂದು ಪಶ್ಚಾತ್ತಾಪದ ಯಾತ್ರೆಯನ್ನು ಕೈಗೊಳ್ಳಲು ನಿರ್ಧರಿಸಿದ್ದಾರೆ. ಪತ್ರದಲ್ಲಿ ಅವರು ತಮ್ಮ ಮನದಾಳದ ಮಾತುಗಳನ್ನು ತೋಡಿಕೊಂಡಿದ್ದಾರೆ. ಪತ್ರದಲ್ಲಿ ಅವರು, 2023ರ ಮಹಾ ಚುನಾವಣೆ ಅತ್ಯಂತ ಶಾಂತಿಯುತವಾಗಿ ಸಂಪನ್ನವಾಗಿದೆ. ಕಳೆದ ಮೂವತ್ತು ದಿನದಿಂದ ನಿಮ್ಮ ಮನೆಗಳಿಗೆ ಹಾಗೂ ಗ್ರಾಮಗಳಿಗೆ ಮತ ಕೇಳಲು ನಾನು ಬಂದ ಸಂದರ್ಭದಲ್ಲಿ ನೀವು ತೋರಿದ ಪ್ರೀತಿ, ವಿಶ್ವಾಸ, ಆತಿಥ್ಯಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಜೀವಮಾನವಿಡೀ ನಿಮ್ಮ ಋಣ ತೀರಿಸಲು ನನ್ನಿಂದ ಸಾಧ್ಯವಿಲ್ಲವೇನೋ ಎಂಬ ಭಾವನೆ ನನ್ನಲ್ಲಿ ಮೂಡಿದೆ. ನಾನು ನಿಮ್ಮಲ್ಲಿಗೆ ಬಂದ ಸಂದರ್ಭದಲ್ಲಿ ನನಗೆ ನಿಮ್ಮಿಂದ ಬಂದ ಪ್ರತಿಸ್ಪಂದನೆಯ ಕಾರಣದಿಂದ 2023ರ ಚುನಾವಣೆಗೆ ನನ್ನ ಪಾಲಿಗೆ ಅವಿಸ್ಮರಣೀಯ ಚುನಾವಣೆ ಆಗಬಹುದೆಂಬ ಅಶಾ ಭಾವನೆ ಮೂಡಿತ್ತು. ಅದೂ ಅಲ್ಲದೇ ಇದೇ ನನ್ನ ಕಡೆಯ ಚುನಾವಣೆ ಎಂಬುದನ್ನೂ ತಮ್ಮಲ್ಲಿ ತಿಳಿಸಿದ್ದೆ. ಆದರೆ, ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಮೇಲೆ ನನಗೆ ವಾಸ್ತವ ದರ್ಶನವಾಯಿತು ಎಂದು ತಮ್ಮ ಸೋಲಿನ ಬಗ್ಗೆ ಹೇಳಿಕೊಂಡಿದ್ದಾರೆ.

 

 

2006ರಲ್ಲಿ ನಾನು ಕ್ಷೇತ್ರಕ್ಕೆ ಅನಿವಾರ್ಯವಾಗಿ ಬಂದ ದಿನದಿಂದ 2023ರ ವರೆಗೂ ನನ್ನ ನಡವಳಿಕೆ, ನಿರ್ಧಾರ ಹಾಗೂ ಮತದಾರನೊಂದಿಗಿನ ಸಂಬಂಧದ ಬಗ್ಗೆ ನಾನೇ ಎಲ್ಲೋ ಎಡವಿದ್ದೇನೆ ಎಂಬ ಅನುಮಾನ ಕಾಡತೊಡಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ನಾನು ಎಂದಿಗೂ ತಲೆಕೆಡಿಸಿಕೊಂಡವನಲ್ಲ. ನನ್ನ ರಾಜಕೀಯ ಜೀವನದಲ್ಲಿ ನಾನು ಗೆಲುವಿಗಿಂತ ಸೋಲನ್ನೇ ಜಾಸ್ತಿ ನೋಡಿದ್ದೇನೆ. ಎರಡನ್ನು ಸಮಾನಾವಾಗಿ ಸ್ವೀಕರಿಸುವ ಮನೋಭಾವ ನನ್ನದು. ಹೀಗಾಗಿ ಬಂದ ಫಲಿತಾಂಶದ ಬಗ್ಗೆ ನನಗೆ ಎಳ್ಳಷ್ಟು ಬೇಸರವಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.
ನಾನೀಗ ಆತ್ಮವಾಲೋಕನ ಮಾಡಿಕೊಳ್ಳಬೇಕಿದೆ ಚುನಾವಣೆಯಲ್ಲಿ ನಾನು ಎಲ್ಲಿ ಎಡವಿದೆ, ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ಎಲ್ಲಿ ವಿಫಲನಾಗಿದ್ದೇನೆ ಎಂಬುದರ ಕುರಿತು ಚಿಂತನ-ಮಂಥನ ಮಾಡುತ್ತಿದ್ದೇನೆ. ಈ ಸೋಲು ನನ್ನ ಉತ್ಸಾಹ ಕಡಿಮೆ ಮಾಡಿಲ್ಲ. ಆದರೂ ಚುನಾವಣಾ ರಾಜಕೀಯದಿಂದ ಹೊರನಡೆಯಲು ತೀರ್ಮಾನಿಸಿದ್ದೇನೆ. ಆದರೆ, ಸಕ್ರಿಯ ರಾಜಕರಾಣದಿಂದ ದುರ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಾಯಶ್ಚಿತ ಪಾದಯಾತ್ರೆ ಮಾಡ್ತೇನೆ…
17 ವರ್ಷಗಳಿಂದ ನೀವು ತೋರಿರುವ ಪ್ರೀತಿ, ಅಭಿಮಾನದ ಕಾರಣಕ್ಕಾಗಿ ನಿಮ್ಮ ಋಣ ತೀರಿಸುವ ಹಾಗೂ ನನ್ನ ಕೊನೆಯ ಉಸಿರಿರುವವರೆಗೂ ನಿಮ್ಮೊಂದಿಗೆ ಇದ್ದು ಈ ನೆಲದಲ್ಲಿಯೇ ಮಣ್ಣಾಗಬೇಕು ಎಂಬ ದೃಢ ಸಂಕಲ್ಪ ಮಾಡಿದ್ದೇನೆ. ಈ ನಿಟ್ಟಿನಲ್ಲಿ ನಾನೊಂದು ನಿರ್ಧಾರಕ್ಕೆ ಬಂದಿದ್ದು ಜೂನ್​ 24ರಂದು ನನ್ನ 70ನೇ ಜನ್ಮದಿನ. ಈ ದಿನ ಪಾದಯಾತ್ರೆಯನ್ನು ಆರಂಭಿಸಿ ನಿಮ್ಮ ನಿಮ್ಮ ಊರುಗಳಿಗೆ ಬಂದು ನಾನು ನನ್ನ ತಪ್ಪುಗಳನ್ನು ನಿಮ್ಮ ಬಳಿ ನಿವೇದಿಸಿಕೊಂಡು ನಿಮ್ಮ ಕ್ಷಮೆ ಕೇಳುವ ಸಲುವಾಗಿ ಪ್ರಾಯಶ್ಚಿತ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಪ್ರಾಯಶ್ಚಿತ ಪಾದಯಾತ್ರೆ ಎಂಬ ಹೆಸರಿನಲ್ಲಿ ನಾನು ನಿಮ್ಮಲ್ಲಿಗೆ ಬರುತ್ತಿದ್ದೇನೆ. ಜೂನ್​ ಮೊದಲನೇ ವಾರ ಪಾದಯಾತ್ರೆಯ ಪ್ರವಾಸದ ವಿವರವನ್ನು ನಿಮಗೆ ತಲುಪಿಸುತ್ತೇನೆ ಎಂದು ವೈಎಸ್​.ವಿ ದತ್ತಾ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ