LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರೋಗ್ಯ ಬಂಧು ಯೋಜನೆ’ಗೆ ಪರಿಷ್ಕೃತ ಮಾರ್ಗಸೂಚಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಆರೋಗ್ಯ ಬಂಧು ಯೋಜನೆಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಆದೇಶದಲ್ಲಿ, ರಾಜ್ಯದಲ್ಲಿನ ಆಯ್ದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ವಹಣೆಯನ್ನು ಕೆಲವು ಷರತ್ತುಗಳನ್ನು ವಿಧಿಸಿ, ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಮತ್ತು ಸಂಸ್ಥೆ/ ನಿಗಮಗಳಿಗೆ ವಹಿಸಿಕೊಡಲು ಆರೋಗ್ಯ ಬಂಧು ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ.

ಮೇಲೆ ಕ್ರ.ಸಂ. (2) ರಲ್ಲಿ ಓದಲಾದ ಆದೇಶದಲ್ಲಿ ಡಾ: ನಂಜುಂಡಪ್ಪ ಸಮಿತಿಯಲ್ಲಿ ಗುರುತಿಸಿರುವ 39 ತಾಲ್ಲೂಕುಗಳಲ್ಲಿನ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 2008ರ ಆರೋಗ್ಯ ಬಂಧು ಮಾರ್ಗಸೂಚಿಗಳನ್ವಯ ಖಾಸಗಿ ಸಂಸ್ಥೆಗಳು, ವೈದ್ಯಕೀಯ ಮಹಾವಿದ್ಯಾಲಯಗಳಿಗೆ ವಹಿಸಲು ಆದೇಶಿಸಲಾಗಿದೆ.

ಮೇಲೆ ಕ್ರ.ಸಂ. (3) ರಲ್ಲಿ ಓದಲಾದ ಆದೇಶದಲ್ಲಿ ರಾಜ್ಯದ ಇತರೆ ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಬಂಧು ಯೋಜನೆಗೆ ಒಳಪಡಿಸಲಾಗಿದೆ.

ಮೇಲೆ ಕ್ರ.ಸಂ.(4) ರಲ್ಲಿ ಓದಲಾದ ಆದೇಶದಲ್ಲಿ, ಆರೋಗ್ಯ ಬಂಧು ಯೋಜನೆಯಡಿಯಲ್ಲಿನ ಒಟ್ಟು 52 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 27 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅವಧಿ ಪೂರ್ಣಗೊಂಡದ್ದು, ಅವಧಿ ಪೂರ್ಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರದ ವಶಕ್ಕೆ ಕೂಡಲೇ ಹಿಂಪಡೆದು, ಉಳಿದ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅವಧಿ ಪೂರ್ಣಗೊಂಡ ನಂತರ ಇಲಾಖೆ ವಶಕ್ಕೆ ಪಡೆಯಲು ಹಾಗೂ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು/ಸಮುದಾಯ ಆರೋಗ್ಯ ಕೇಂದ್ರಗಳನ್ನು ಸರ್ಕಾರೇತರ ಸಂಸ್ಥೆಗಳಿಗೆ ಆರೋಗ್ಯ ಬಂಧು ಯೋಜನೆಯಡಿ ನೀಡುವಾಗ ಪರಿಷ್ಕೃತ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಪರಿಷ್ಕೃತ ಒಡಂಬಡಿಕೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಅನುಮೋದನೆ ಪಡೆಯಲು ಆದೇಶಿಸಲಾಗಿದೆ.

ಮೇಲೆ ಕ್ರ.ಸಂ. (6) ರಲ್ಲಿ ಓದಲಾದ ಏಕಕಡತದಲ್ಲಿ ಆರೋಗ್ಯ ಬಂಧು ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳ ಬದಲಾವಣೆಗಳೊಂದಿಗೆ Revised Arogya Bhandu ಮಾರ್ಗಸೂಚಿ 2024-25 ಅನುಮೋದನೆಗಾಗಿ ಆಯುಕ್ತರು, ಆಕುಕ ಸೇವೆಗಳು ಇವರಿಂದ ಸ್ವೀಕೃತವಾಗಿದೆ.

ಆಯುಕ್ತರು, ಆಕುಕ ಸೇವೆಗಳು ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಸ್ವೀಕೃತವಾದ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಆರೋಗ್ಯ ಬಂಧು ಯೋಜನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕೆಳಕಂಡ ಪ್ರಮುಖ ಅಂಶಗಳು ಪರಿಷ್ಕೃತ ಆರೋಗ್ಯ ಬಂಧು ಯೋಜನೆ ಮಾರ್ಗಸೂಚಿಗಳನ್ನು ಒಳಗೊಳ್ಳುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026