Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಲಿಂಗಸೂರು–ಹತ್ತಿಗೂಡೂರು ಹೆದ್ದಾರಿ ದುರವಸ್ಥೆ ವಿರೋಧಿಸಿ ರಸ್ತೆ ತಡೆ ಪ್ರತಿಭಟನೆ

ಸುರಪುರ, ಏ.19: ಬೀದರ–ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಲಿಂಗಸೂರು–ಹತ್ತಿಗೂಡೂರು ಭಾಗದ ದುರವಸ್ಥೆ ವಿರುದ್ಧ ಸುರಪುರದ ಸಾಮಾಜಿಕ ಹೋರಾಟಗಾರರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಹೆದ್ದಾರಿಯ ದುಸ್ಥಿತಿಯಿಂದ ವರ್ಷದಲ್ಲಿ ನೂರಾರು ಅಪಘಾತಗಳು ಸಂಭವಿಸುತ್ತಿದ್ದು, ಅನೇಕ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಕ್ಷಣ ರಸ್ತೆ ಸುಧಾರಣೆ ಕೈಗೊಳ್ಳಬೇಕು ಹಾಗೂ ಅಪಘಾತಗಳಲ್ಲಿ ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆ అనంతರ ಹೋರಾಟಗಾರರು ತಹಶೀಲ್ದಾರರ ಮೂಲಕ ಸರ್ಕಾರದ ಉನ್ನತ ಅಧಿಕಾರಿಗಳು, ಪ್ರಮುಖ ಮಂತ್ರಿಗಳು, ಶಾಸಕರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇದೇ ಮನವಿಯನ್ನು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕಲಬುರಗಿ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಕೂಡ ಸಲ್ಲಿಸಲಾಗಿದೆ.

ಶಾಂತಾಪುರ, ತಿಂಥಣಿ, ಬಂಡೋಳಿ, ದಾದಲಪುರ, ಲಿಂಗದಹಳ್ಳಿ, ಅರಳಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ರಸ್ತೆ ಭಾರೀ ಹಾನಿಗೊಂಡಿದ್ದು ಅಪಘಾತಗಳು ಸಾಮಾನ್ಯವಾಗಿವೆ. ಕಳೆದ ಎರಡು ದಶಕಗಳಿಂದ ನಿರ್ವಹಣೆ ಇಲ್ಲದಂತೆ ಕಾಣುತ್ತಿರುವ ಈ ರಸ್ತೆಯಲ್ಲಿ ಮಾರಣಾಂತಿಕ ಗುಂಡಿಗಳು ಉಂಟಾಗಿವೆ. ಟೆಂಡರ್‌ ಕರೆದಿದ್ದರೂ ಕಾಮಗಾರಿ ಆರಂಭವಾಗದಿರುವುದನ್ನು ಹೋರಾಟಗಾರರು ಪ್ರಶ್ನಿಸಿದ್ದಾರೆ.

ಈ ಭಾಗದಲ್ಲೇ ವರ್ಷಕ್ಕೆ 50ರಿಂದ 60 ಮಂದಿ ಸಾವನ್ನಪ್ಪುತ್ತಿರುವುದಾಗಿ ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಹತ್ತಿಗೂಡೂರು–ತಿಂಥಣಿ ನಡುವಿನ ಪ್ರದೇಶದಲ್ಲಿ ನೂರಾರು ಅಪಘಾತಗಳು ನಡೆದಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದರು.

ಶೀಘ್ರದಲ್ಲೇ ರಸ್ತೆ ದುರಸ್ತಿ ಮಾಡಿ, ಅಪಘಾತಗಳನ್ನು ತಡೆಯಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದವರು ಈ ರಸ್ತೆಯಲ್ಲಿ ನಡೆದ ಭೀಕರ ಅಪಘಾತಗಳ ವಿವರಗಳನ್ನು ಅಧಿಕಾರಿಗಳಿಗೆ ತಿಳಿಸಿದರು.

ಗೋಲಪಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವರದಾನೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ದೇವಿಂದ್ರಪ್ಪ ಮೇಟಿ, ಗಂಗಾಧರ ನಾಯಕ, ರಾಮು ನಾಯಕ ಅರಳಹಳ್ಬಳಿ, ಲಭೀಮ ನಾಯಕ, ಮರಿಲಿಂಗಪ್ಪ ಗುಡಿಮನಿ, ಹನುಮಂತ ಮನ್ನಾಪುರಿ, ಶರಣು ಮಕಾಶಿ, ಯಲ್ಲಪ್ಪ ಆಲ್ದರ್ತಿ, ಮಲ್ಲಿಕಾರ್ಜುನ್‌, ರವಿ ಅಂಬಿಗೇರ್‌, ಅಯ್ಯಣ್ಣ ಹಾಲಬಾವಿ, ಶರಣಗೌಡ ಪೋಲಿಸ್ ಪಾಟೀಲ್‌, ಮೌನೇಶ್ ಕವಲ್ದಾರ, ರತ್ನರಾಜ ಶಾಲಿಮನಿ, ಬೆವರಾಜ ಪೋಲಿಸ್ ಪಾಟೀಲ್‌ ದಳಪತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸ್ಥಳಕ್ಕೆ ಆಗಮಿಸಿದ ಸುರಪುರ ತಹಶೀಲ್ದಾರರು ಮನವಿ ಸ್ವೀಕರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ