LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರು ವಿಧಾನಸಭೆ ಉಪಚುನಾವಣೆ; ಸಂಡೂರು ವ್ಯಾಪ್ತಿಯಲ್ಲಿ ನ.13 ರಂದು ವೇತನ ಸಹಿತ ರಜೆ

ಬಳ್ಳಾರಿ,ನ.11
95-ಸಂಡೂರು (ಪ.ಪಂ) ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂರಾಷ್ತ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೆ ಔಧ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ನೆಗೋಶಬಲ್ ಇನ್ಸುಲಿನ್ ಆಕ್ಟ್ 1881, ಕಲಂ 135ಬಿ ಅಡಿ ಎಲ್ಲಾ ಉಪಬಂಧಗಳನ್ವಯ ಒಂದು ದಿನದ ವೇತನ ಸಹಿತ ರಜೆಯನ್ನು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಹಾಗೂ ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
-
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು