
ಈ ಸಂದರ್ಭದಲ್ಲಿ ‘ಸಂಸ್ಕೃತಿ ಯುವಾ ಸಂಸ್ಥೆ’ಯ ಅಧ್ಯಕ್ಷ ಪಂಡಿತ್ ಸುರೇಶ್ ಮಿಶ್ರಾ ಮಾತನಾಡಿ, ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರು ಭಾರತೀಯ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯವಾಗಿದೆ. ಅವರ ನೇತೃತ್ವದಲ್ಲಿ ಸನಾತನ ಸಂಸ್ಥೆಯು ಅನೇಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಜಾಗೃತಿ ಮತ್ತು ಸಕಾರಾತ್ಮಕ ಬದಲಾವಣೆಯನ್ನು ತಂದಿದೆ ಎಂದು ಹೇಳಿದರು.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರು ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಮಾಡಿದ ದಿವ್ಯ ಕಾರ್ಯಕ್ಕಾಗಿ ಅವರಿಗೆ ಗೌರವ !
ಈ ಪ್ರಶಸ್ತಿಯನ್ನು ಸ್ವೀಕರಿಸಿದ ಶ್ರೀಸತ್ ಶಕ್ತಿ (ಸೌ.) ಬಿಂದಾ ನಿಲೇಶ ಸಿಂಗಬಾಳ ಅವರು ಮಾತನಾಡಿ, 'ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರಿಗೆ ಫ್ರಾನ್ಸ್ ಸಂಸತ್ತಿನಲ್ಲಿ 'ಭಾರತ ಗೌರವ ಪ್ರಶಸ್ತಿ'ಯಿಂದ ಗೌರವಿಸಿದ್ದಕ್ಕೆ ಸನಾತನ ಸಂಸ್ಥೆಯಿಂದ 'ಸಂಸ್ಕೃತಿ ಯುವಾ ಸಂಸ್ಥೆ' ಮತ್ತು ಸಂಸ್ಥೆಯ ಅಧ್ಯಕ್ಷ ಪಂ. ಸುರೇಶ್ ಮಿಶ್ರಾ ಅವರಿಗೆ ಕೃತಜ್ಞತೆ ವ್ಯಕ್ತಪಡಿಸುತ್ತೇವೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಉಚ್ಛ ಮಟ್ಟದ ಸಂತರಾಗಿದ್ದು ಈ ಪ್ರಶಸ್ತಿಗಳು ಮತ್ತು ಗೌರವಗಳ ಆಚೆಗೆ ತಲುಪಿದ್ದರೂ, ಅವರಿಗೆ ಸಂದ ಗೌರವವು ಸಂಪೂರ್ಣ ಮನುಕುಲದ ಕಲ್ಯಾಣಕ್ಕಾಗಿ ಅವರು ನೀಡಿದ ದಿವ್ಯ ಆಧ್ಯಾತ್ಮಿಕ ಕಾರ್ಯದ ಗೌರವವಾಗಿದೆ. ಈ ಗೌರವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರು ಅಧ್ಯಾತ್ಮ ಶಾಸ್ತ್ರದ ಬಗ್ಗೆ ಮಾಡಿದ ಅಸಾಧಾರಣ ಸಂಶೋಧನಾ ಕಾರ್ಯ ಮತ್ತು ಗ್ರಂಥ ಲೇಖನ ಹಾಗೆಯೇ ಅಖಿಲ ಮನುಕುಲದ ಶೀಘ್ರ ಆಧ್ಯಾತ್ಮಿಕ ಉನ್ನತಿಗಾಗಿ ನೀಡಿದ 'ಗುರುಕೃಪಾಯೋಗ' ಈ ಸಾಧನಾಮಾರ್ಗ ಇವುಗಳಿಗೇ ಸಲ್ಲುತ್ತದೆ ಎಂದು ನಾವು ತಿಳಿಯುತ್ತೇವೆ.' ಎಂದರು.
*ತಮ್ಮ ಸವಿನಯ,*
ಶ್ರೀ. ಚೇತನ ರಾಜಹಂಸ,
ರಾಷ್ಟ್ರೀಯ ವಕ್ತಾರರು, ಸನಾತನ ಸಂಸ್ಥೆ
(ಸಂಪರ್ಕ : 7775858387)