LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊದಲ ಪ್ರಯತ್ನದಲ್ಲೇ IAS ಆದ ಸೌರಭ್ ಸ್ವಾಮಿ..!

ಹರಿಯಾಣ :ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಸೌರಭ್ ಸ್ವಾಮಿಯ ಕಥೆ ತುಂಬಾ ಸ್ಪೂರ್ತಿದಾಯಕವಾಗಿದೆ.

ಸಿಹಿ ಮಾರುವ ವ್ಯಕ್ತಿಯ ಮಗ ಮುಂದೊಂದು ದಿನ ದೇಶದ ಅತ್ಯುನ್ನತ ಸೇವೆಗೆ ಸೇರುತ್ತಾನೆ ಎಂಬ ಕಲ್ಪನೆ ಯಾರಿಗೂ ಇರಲಿಲ್ಲ. ಅವರು ತಮ್ಮ ತಂದೆಯ ಕನಸನ್ನು ನನಸಾಗಿಸುವುದು ಮಾತ್ರವಲ್ಲದೆ ಇಡೀ ಕುಟುಂಬಕ್ಕೆ ಗೌರವವನ್ನು ತಂದಿದ್ದಾರೆ. ಸೌರಭ್ ಸ್ವಾಮಿ ಹರಿಯಾಣದ ಚರ್ಕಿ ದಾದ್ರಿಯಲ್ಲಿ ಸಾಮಾನ್ಯ ಕುಟುಂಬಕ್ಕೆ ಸೇರಿದವರು. ಕುಟುಂಬದ ಮುಖ್ಯಸ್ಥರು ರೋಹ್ಟಕ್ ಚೌಕ್ ನಲ್ಲಿ ಸಿಹಿತಿಂಡಿಗಳು ಮತ್ತು ಕುಲ್ಫಿಗಳನ್ನು ಮಾರಾಟ ಮಾಡುತ್ತಿದ್ದರು. 1989ರ ಡಿಸೆಂಬರ್ 1ರಂದು ಸೌರಭ್ ಸ್ವಾಮಿ ಜನಿಸಿದ್ದಾರೆ.

ಸೌರಭ್ ಬಾಲ್ಯದಿಂದಲೂ ಅಧ್ಯಯನದಲ್ಲಿ ತುಂಬಾ ಚುರುಕಾಗಿದ್ದರುಸೌರಭ್ ಸ್ವಾಮಿ ಚಾರ್ಖಿ ದಾದ್ರಿಯಲ್ಲಿರುವ ಎಪಿಜೆ ಶಾಲೆಯಲ್ಲಿ 12 ನೇ ತರಗತಿಯವರೆಗೆ ಓದಿದ್ದಾರೆ. ನಂತರ ದೆಹಲಿಗೆ ಬಂದರು. ಇಲ್ಲಿ ಅವರು ಭಾರತೀಯ ವಿದ್ಯಾಪೀಠದಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಮಾಡಿದರು.

ಓದು ಮುಗಿದ ಮೇಲೆ ಬೆಂಗಳೂರಿನಲ್ಲಿ ಕೆಲಸ ಸಿಕ್ಕಿತು. ಖಾಸಗಿ ಉದ್ಯೋಗದೊಂದಿಗೆ, ಅವರು UPSC ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಸೌರಭ್ ಸ್ವಾಮಿ ಮೂರು ತಿಂಗಳಲ್ಲಿ UPSC ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಇದಕ್ಕಾಗಿ ಅವರು ದೆಹಲಿಗೆ ತೆರಳಿದ್ದರು. ದೆಹಲಿಯಲ್ಲಿ ತರಬೇತಿ ಮತ್ತು ಸ್ವಯಂ-ಅಧ್ಯಯನದ ಮೂಲಕ, ಅವರು 2014 ರಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿ UPSC ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಇದರಲ್ಲಿ 149ನೇ ರ್ಯಾಂಕ್ ಪಡೆದರು. ನಂತರ ಅವರು LBSNAA ಮಸ್ಸೂರಿಯಲ್ಲಿ ತರಬೇತಿ ಪಡೆದ ನಂತರ 2015 ರಲ್ಲಿ IAS ಅಧಿಕಾರಿಯಾದರು.

ಸೌರಭ್ ಸ್ವಾಮಿ ರಾಜಸ್ಥಾನ ಕೇಡರ್ ನ ಐಎಎಸ್ ಅಧಿಕಾರಿ. ಪ್ರಸ್ತುತ ಶ್ರೀಗಂಗಾನಗರದಲ್ಲಿ ಜಿಲ್ಲಾಧಿಕಾರಿಯಾಗಿ ಪೋಸ್ಟ್ ಮಾಡಲಾಗಿದೆ. ಅವರು 2017 ರಲ್ಲಿ ರಾಜಸ್ಥಾನದ ಆರ್ಜೆಎಸ್ ಅನುಭೂತಿ ಸ್ವಾಮಿ ಅವರನ್ನು ವಿವಾಹವಾದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆ