LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

13,735 ಜೂನಿಯರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ SBI BANK ಅರ್ಜಿ ಆಹ್ವಾನ

ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರಿಕಲ್ ಮಟ್ಟದ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬರೋಬ್ಬರಿ 13,735 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆ ವಿವರ: 13,735 ಗ್ರಾಹಕ ಬೆಂಬಲ ಮತ್ತು ಮಾರಾಟದಲ್ಲಿ ಕಿರಿಯ ಸಹಾಯಕರ ಹುದ್ದೆಗಳು. ಇದರಲ್ಲಿ ಕರ್ನಾಟಕಕ್ಕೆ 50 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿ ಮೀರಿಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಪ್ರಿಲಿಮ್ಸ್, ಮೇನ್ಸ್ ಮತ್ತು ಭಾಷಾ ಪರಿಣಿತಿ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.

ಈ ಹುದ್ದೆಗೆ ಡಿಸೆಂಬರ್ 17ರಿಂದ ಅರ್ಜಿ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನ ಜನವರಿ 7 ಆಗಿದೆ. ಈ ಹುದ್ದೆಗಳಿಗೆ 2025ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಮುಖ್ಯ ಪರೀಕ್ಷೆ 2025ರ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ನಡೆಯುವ ಸಾಧ್ಯತೆ ಇದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sbi.co.in ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ