LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಾರ್ವಾ ಸಮೀಕ್ಷೆ ಕಾರ್ಯ: ನಗರ ಸ್ವಯಂ ಸೇವಕರ ಆಯ್ಕೆ

ಚಿತ್ರದುರ್ಗಜೂನ್.27:

2024-25ನೇ ಸಾಲಿಗೆ ಜಿಲ್ಲೆಯ ವಿವಿಧ ನಗರ ಪ್ರದೇಶಗಳ ಸಮಸ್ಯಾತ್ಮಕ ವಾರ್ಡ್ಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆ ಕಾರ್ಯವನ್ನು ನಡೆಸಲು ಅನುಷ್ಟಾನ ಮಾರ್ಗಸೂಚಿ ಪ್ರಕಾರ ಕೇವಲ 100 ದಿನಗಳ ಅವಧಿಗೆ ಮಾತ್ರ ತಾತ್ಕಾಲಿಕವಾಗಿ ನಗರ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುವುದು. ಈ ಅವಧಿಯನ್ನು ವಿಸ್ತರಿಸಲಾಗುವುದಿಲ್ಲ.

ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ನಗರ-09, ಚಳ್ಳಕೆರೆ-2, ಹಿರಿಯೂರು-2, ಹೊಸದುರ್ಗ-2 ರಂತೆ ನಗರ ಸ್ವಯಂ ಸೇವಕರು ನಗರ ಪ್ರದೇಶಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆಯನ್ನು ನಡೆಸಲು, ಪ್ರತಿದಿನ ಕಡ್ಡಾಯವಾಗಿ 100 ಮನೆಗಳಿಗೆ ಬೇಟಿ ನೀಡಿ, ಒಳಾಂಗಣ ಮತ್ತು ಹೊರಾಂಗಣದ ಕೃತಕ ನೀರಿನ ಸಂಗ್ರಹಗಳಲ್ಲಿ ಈಡೀಸ್ ಲಾರ್ವಾ ಸಮೀಕ್ಷೆಗೆ ನಡೆಸಲು ದಿನ ಒಂದಕ್ಕೆ ರೂ.200 ಗಳಂತೆ ಆಯ್ಕೆಗೊಂಡ ಸೇವಕರ ಬ್ಯಾಂಕ್ ಖಾತೆಗಳಿಗೆ ಪಾವತಿ ಮಾಡಲಾಗುವುದು.

ಈ ಸಮೀಕ್ಷೆಗೆ ಸೇರ ಬಯಸುವವರು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಆಗಿರಬೇಕು. ತಮ್ಮ ಸ್ವ-ವಿವರಗಳೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್ ಪುಸ್ತಕದ ಮೊದಲನೇ ಪುಟ ಮತ್ತು ಆಧಾರ್ ಕಾರ್ಡ್ನ ನಕಲು ಪ್ರತಿಗಳೊಂದಿಗೆ ಜೂನ್ 29 ರ ಸಂಜೆ 4.30ರೊಳಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗಳ ಕಚೇರಿ ಆವರಣದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆಗೆ ಖುದ್ದು ಹಾಜರಾಗಬೇಕು. ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡುವುದಿಲ್ಲ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ರೋಗವಾಹಕಗಳ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು