Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯ ಮುತ್ಸದ್ದಿ ಎನ್.ವೈ. ಗೋಪಾಲಕೃಷ್ಣಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ನಾಯಕರ ಒತ್ತಾಯ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ದಿ ಹಾಗೂ ಅನುಭವಿ ಶಾಸಕರಾದ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂಬ ಒತ್ತಾಯ ಜಿಲ್ಲೆಯಾದ್ಯಂತ ತೀವ್ರಗೊಂಡಿದೆ.

ಜಿಲ್ಲಾ ಕಾಂಗ್ರೆಸ್ ಎಸ್‌ಟಿ ಸೆಲ್‌ಮಾಜಿ ಅಧ್ಯಕ್ಷರಾದ ದೇವರಕೊಟ್ಟ ಜಿ.ಒ. ನಾಗರಾಜ್ ಹಾಗೂ ಜಿಲ್ಲಾ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಟಿ. ರುದ್ರಮುನಿ ಅವರು ಜಂಟಿಯಾಗಿ ಈ ಕುರಿತು ಪಕ್ಷದ ಹೈಕಮಾಂಡ್‌ಗೆ ಪ್ರಬಲ ಆಗ್ರಹ ಮಂಡಿಸಿದ್ದಾರೆ.

ಅನುಭವ ಮತ್ತು ನಿಷ್ಠೆಗೆ ಸಿಗಬೇಕಿದೆ ಗೌರವ:
ಎನ್.ವೈ. ಗೋಪಾಲಕೃಷ್ಣ ಅವರು ರಾಜಕೀಯದಲ್ಲಿ ಸುದೀರ್ಘ ಇತಿಹಾಸ ಹೊಂದಿರುವ ನಾಯಕ. ಐದು ಬಾರಿ ಮೊಳಕಾಲ್ಮೂರು, ಒಮ್ಮೆ ಕೂಡ್ಲಿಗಿ ಮತ್ತು ಬಳ್ಳಾರಿ ಕ್ಷೇತ್ರದಲ್ಲಿ ಒಂದು ಸಲ ಸೇರಿ ಒಟ್ಟು 7 ಬಾರಿ ಶಾಸಕರಾಗಿ ಆಯ್ಕೆಯಾಗಿ, ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿದ ಅಪಾರ ಅನುಭವ ಅವರಿಗಿದೆ. ಇದಲ್ಲದೆ ಐದು ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿಧಾನಸಭೆಯ ಉಪ ಸಭಾಪತಿಗಳಾಗಿ, ನಂಜುಂಡಪ್ಪ ಆಯೋಗದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯ ಮಾಡಿದ್ದು ಒಮ್ಮೆ ಇವರನ್ನ ಸಚಿವರನ್ನಾಗಿ ಮಾಡುವಂತೆ ಅವರು ಆಗ್ರಹ ಮಾಡಿದ್ದಾರೆ.

"ಗೋಪಾಲಕೃಷ್ಣ ಅವರ ರಾಜಕೀಯ ಅನುಭವ ಮತ್ತು ಸೇವಾ ಹಿರಿತನವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವುದು ಕೇವಲ ಅವರಿಗೆ ಕೊಡುವ ಗೌರವವಲ್ಲ; ಬದಲಿಗೆ ಇಡೀ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಪಕ್ಷದ ಬಲವರ್ಧನೆಗೆ ತೀರಾ ಅತ್ಯಗತ್ಯವಾಗಿದೆ," ಎಂದು ದೇವರಕೊಟ್ಟ ಜಿ.ಒ. ನಾಗರಾಜ್ ಮತ್ತು ಕೆ.ಟಿ. ರುದ್ರಮುನಿ ಒಕ್ಕೊರಲಿನಿಂದ ಅಭಿಪ್ರಾಯಪಟ್ಟಿದ್ದಾರೆ.

news_1780408635_1_350.webp

 

news_1780408621_9_145.webp

 

ಅದ್ವಿತೀಯ ನಾಯಕತ್ವ ಮತ್ತು ಹಿರಿತನ: ಎನ್.ವೈ.ಜಿ ಅವರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾದ ನಾಯಕರಲ್ಲ. ಅವರ ಸೌಮ್ಯ ಸ್ವಭಾವ, ಮುತ್ಸದ್ದಿತನ ಹಾಗೂ ಎಲ್ಲ ವರ್ಗದ ಜನರನ್ನು ಒಟ್ಟಿಗೆ ಕೊಂಡೊಯ್ಯುವ ಗುಣ ಪಕ್ಷಕ್ಕೆ ದೊಡ್ಡ ಆಸ್ತಿಯಾಗಿದೆ.

ಸಾಮಾಜಿಕ ನ್ಯಾಯ ಮತ್ತು ಪ್ರಾತಿನಿಧ್ಯ: ಶೋಷಿತ ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿರುವ ಇವರಿಗೆ ಸಚಿವ ಸ್ಥಾನ ನೀಡುವುದರಿಂದ, ಆಯಾ ಸಮುದಾಯಗಳಿಗೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಂತಾಗುತ್ತದೆ.

ಜಿಲ್ಲೆಯ ಸಮಗ್ರ ಅಭಿವೃದ್ಧಿ: ಹಿರಿಯ ನಾಯಕರೊಬ್ಬರು ಸಚಿವರಾದರೆ ಜಿಲ್ಲೆಯ ಬಾಕಿ ಉಳಿದಿರುವ ನೀರಾವರಿ, ರಸ್ತೆ, ಕೈಗಾರಿಕೆಗಳು ಸೇರಿದಂತೆ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಹೊಸ ವೇಗ ಸಿಗಲಿದೆ ಎಂಬುದು ಕಾರ್ಯಕರ್ತರ ಆಶಯವಾಗಿದೆ.

ಹೈಕಮಾಂಡ್‌ಗೆ ಮನವಿ:
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಿಪಾಯಿಯಾಗಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಎನ್.ವೈ. ಗೋಪಾಲಕೃಷ್ಣ ಅವರಿಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪಬಾರದು. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ಈ ನಾಯಕರ ನ್ಯಾಯಯುತ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಪದಾಧಿಕಾರಿಗಳಾದ ನಾಗರಾಜ್ ಮತ್ತು ರುದ್ರಮುನಿ ಅವರು ಒತ್ತಾಯಿಸಿದ್ದಾರೆ.

ಅನುಭವಿ ನಾಯಕನಿಗೆ ಸಚಿವ ಪಟ್ಟ ಸಿಕ್ಕರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಿ ಬೇರೂರಲು ಸಾಧ್ಯವಾಗುತ್ತದೆ ಎಂಬುದು ಇಡೀ ಜಿಲ್ಲಾ ಕಾರ್ಯಕರ್ತರ ಒಟ್ಟಾರೆ ಆಶಯವಾಗಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ