LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕಾ ಪ್ರದೇಶಗಳಿಗೆ ಪ್ರತ್ಯೇಕ ನೀರು ಸರಬರಾಜು ವ್ಯವಸ್ಥೆ: ಎಂ ಬಿ ಪಾಟೀಲ

ಬೆಂಗಳೂರು: `ಬರಗಾಲ ಮತ್ತು ಬೇಸಿಗೆ ಎರಡೂ ಸೇರಿಕೊಂಡು ನಮ್ಮ ದೇಶವೂ ಸೇರಿದಂತೆ ಜಗತ್ತಿನ ಎಲ್ಲೆಡೆಯೂ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಇಂತಹ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ. ಕಂಪನಿಗಳಿಗೆ ಆಹ್ವಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು. ಅವರ ಈ ನಡವಳಿಕೆ ಆರೋಗ್ಯಕರವಲ್ಲ’ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, `ಕೇರಳದ ಕೈಗಾರಿಕಾ ಸಚಿವ ಪಿ.ರಾಜೀವ್ ಅವರು ನೀರಿನ ಕೊರತೆಯ ಹಿನ್ನೆಲೆಯಲ್ಲಿ ಬೆಂಗಳೂರನ್ನು ಬಿಟ್ಟು ತಮ್ಮ ರಾಜ್ಯಕ್ಕೆ ಬಂದು ನೆಲೆಯೂರುವಂತೆ ಐಟಿ ಕಂಪನಿಗಳಿಗೆ ಆಹ್ವಾನಿಸಿರುವ ಸಂಗತಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದು ಒಂದು ರೀತಿ ಕುಚೋದ್ಯದ ನಡೆ ಎಂದು ಟೀಕಿಸಿದ್ದಾರೆ.

ನಾವೆಲ್ಲರೂ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಅಂದಮೇಲೆ, ಪರಸ್ಪರ ಕೊಡು-ಕೊಳ್ಳುವಿಕೆ ಇರಬೇಕೇ ವಿನಾ ಪರಿಸ್ಥಿತಿಯ ದುರ್ಲಾಭ ಪಡೆಯಲು ನೋಡಬಾರದು. ಇದರಿಂದ ಕೊನೆಗೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಈ ಪ್ರಾಥಮಿಕ ಸತ್ಯವನ್ನು ಕೇರಳದ ಸಚಿವರು ಅರ್ಥ ಮಾಡಿಕೊಳ್ಳಬೇಕು' ಎಂದು ಅವರು ತಿಳಿಸಿದ್ದಾರೆ.

ಈ ವರ್ಷ ಜಗತ್ತಿನ ಎಲ್ಲೆಡೆಗಳಲ್ಲೂ ನೀರಿನ ಕೊರತೆ ಕಾಣಿಸಿಕೊಂಡಿದೆ. ಇದಕ್ಕೆ ಕೇರಳವೂ ಹೊರತಲ್ಲ. ಬೆಂಗಳೂರಿನಲ್ಲಿ ಐ.ಟಿ. ಕಂಪನಿಗಳು ನೆಲೆಯೂರಿರುವ ಪ್ರದೇಶಗಳಲ್ಲಿ ಕೂಡ ಗಂಭೀರ ಸ್ವರೂಪದಲ್ಲೇನೂ ನೀರಿನ ಕೊರತೆ ಕಾಣಿಸಿಕೊಂಡಿಲ್ಲ. ಜತೆಗೆ ನಮ್ಮಲ್ಲಿ ಕೇರಳ ಮೂಲದ ಲಕ್ಷಾಂತರ ಯುವಕ- ಯುವತಿಯರು ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಅವರು ಮರೆಯಬಾರದು ಎಂದು ಅವರು ಸಲಹೆ ನೀಡಿದ್ದಾರೆ.

ಕೇರಳ ಒಂದು ರಾಜ್ಯವಾಗಿ ಎಷ್ಟು ಬೇಕಾದರೂ ಬಂಡವಾಳ ಆಕರ್ಷಿಸಲಿ. ಆ ಸ್ವಾತಂತ್ರ್ಯ ಅವರಿಗಿದೆ. ಅದು ಬಿಟ್ಟು ಕ್ಷುಲ್ಲಕ ರಾಜಕಾರಣ ಸರಿಯಲ್ಲ ಎಂದು ಪಾಟೀಲ ಟೀಕಿಸಿದ್ದಾರೆ.

ಐ.ಟಿ. ವರಮಾನ ಮತ್ತು ರಫ್ತು ವಹಿವಾಟಿನಲ್ಲಿ ಕರ್ನಾಟಕವು ದೇಶಕ್ಕೇ ಮೊದಲ ಸ್ಥಾನದಲ್ಲಿದ್ದು, ನಮ್ಮಲ್ಲಿ ಕೈಗಾರಿಕಾಸ್ನೇಹಿ ನೀತಿಗಳಿವೆ. ಇಲ್ಲಿರುವಷ್ಟು ಜಾಗತಿಕ ಮಟ್ಟದ ಕಂಪನಿಗಳು ಬೇರೆಲ್ಲೂ ಇಲ್ಲ. ಹೀಗಾಗಿ ಬೆಂಗಳೂರು ಕಳೆದ ಎರಡೂವರೆ ದಶಕಗಳಲ್ಲಿ ದೇಶದ ಹೊಸ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆದರೆ ಕೇರಳಕ್ಕೆ ಇಂತಹ ಸಾಧನೆ ಸಾಧ್ಯವಾಗಿಲ್ಲ. ನೀರಿನ ಕೊರತೆಯನ್ನೇ ಮುಂದಿಟ್ಟುಕೊಂಡು ಇನ್ನೊಬ್ಬರ ಅವಕಾಶಗಳನ್ನು ಕಸಿದುಕೊಳ್ಳುತ್ತೇವೆ ಎನ್ನುವ ಚಿಂತನೆ ಅತ್ಯಂತ ಅಪಾಯಕಾರಿಯಾದುದು ಎಂದು ಸಚಿವರು ತೀಕ್ಷ್ಣವಾಗಿ ಉತ್ತರಿಸಿದ್ದಾರೆ.

ಕೇರಳದಲ್ಲಿ 40 ನದಿಗಳಿವೆ ಎಂದು ಅಲ್ಲಿನ ಸಚಿವರು ಹೇಳಿದ್ದಾರೆ. ಆದರೆ ಅಲ್ಲಿ ಎಷ್ಟು ಅಣೆಕಟ್ಟುಗಳಿವೆ? ಎಷ್ಟರಲ್ಲಿ ಈಗ ನೀರಿದೆ? ಮುಂತಾದ ಪ್ರಶ್ನೆಗಳು ಇಲ್ಲಿ ಏಳುತ್ತವೆ. ಕೇವಲ ನದಿಗಳಿದ್ದ ಮಾತ್ರಕ್ಕೆ ಕಂಪನಿಗಳನ್ನು ಕಟ್ಟುವುದು ಸಾಧ್ಯವಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಮುಂಗಾರುಪೂರ್ವ ಮಳೆ ಬರಲಿದ್ದು, ಬೆಂಗಳೂರು ಸೇರಿದಂತೆ ಎಲ್ಲೆಡೆಯೂ ಪರಿಸ್ಥಿತಿ ಸುಧಾರಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಪ್ರತ್ಯೇಕ ನೀರು ಸರಬರಾಜು ವ್ಯವಸ್ಥೆ:

ಕರ್ನಾಟಕದ ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಸಮೀಪದ ನದಿ ಮೂಲಗಳಿಂದ‌ ನೀರು ಸರಬರಾಜಿಗೆ ಪ್ರತ್ಯೇಕ ವ್ಯವಸ್ಥೆ ಮಾಡುತ್ತಿದ್ದು ಈ ಕುರಿತು ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಹಾಗೆಯೇ ಬೆಂಗಳೂರಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನದಿಯಿಂದ ನೀರು ತರುವ ಪ್ರತ್ಯೇಕ ಯೋಜನೆ ಜಾರಿ ಸಂಬಂಧ ಹಲವು ಸಭೆಗಳನ್ನು‌ ನಡೆಸಿ, ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ವಿಜಯಪುರದ ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಆಲಮಟ್ಟಿ, ಧಾರವಾಡ, ಕಿತ್ತೂರು, ದುರ್ಗದಕೇರಿ ಕೈಗಾರಿಕಾ ಪ್ರದೇಶಗಳಿಗೆ ಮಲಪ್ರಭಾ ನದಿಯಿಂದ ನೀರು ಸರಬರಾಜು ಮಾಡುವ ಯೋಜನೆಗೆ ಟೆಂಡರ್ ಕರೆದಿದ್ದು, ಅನುಷ್ಠಾನದ ಹಂತದಲ್ಲಿ ಇದೆ. ಹೀಗೆ ರಾಜ್ಯದ ಎಲ್ಲ ಕಡೆಗೂ ಈ ರೀತಿಯ ಯೋಜನೆಗಳನ್ನು ರೂಪಿಸುತ್ತಿದ್ದು, ಕೈಗಾರಿಕಾ ಪ್ರದೇಶಗಳಿಗೆ ಪ್ರತ್ಯೇಕ ನೀರು ಸರಬರಾಜಿಗೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್