Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯುವಕ/ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹೊಲಿಗೆ ತರಬೇತಿ ಶಿಬಿರ 20 ದಿನಗಳಾಗಿದ್ದು, ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಫೇಲ್ ಅಥವಾ ಪಾಸ್ ಆಗಿರಬೇಕು. ನವೆಂಬರ್ 7 ರಿಂದ 26 ರವರೆಗೆ ತರಬೇತಿ ನೀಡಲಾಗುವುದು. ವಿಡಿಯೋಗ್ರಫಿ ತರಬೇತಿ ಶಿಬಿರ 12 ದಿನಗಳಾಗಿದ್ದು, ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಫೇಲ್ ಅಥವಾ ಪಾಸ್ ಆಗಿರಬೇಕು.

ತರಬೇತಿಯು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ನಡೆಯುತ್ತದೆ. ತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವಕ/ಯುವತಿಯರಿಗೆ ಲಘು ಉಪಹಾರ ಒದಗಿಸಲಾಗುವುದು. ಶಿಬಿರಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳ ವಯೋಮಾನ 18 ರಿಂದ 40 ವರ್ಷದೊಳಗಿನ ಯುವಕ/ಯುವತಿಯರು ಮಾತ್ರ ಭಾಗವಹಿಸಲು ಅರ್ಹರು. ಹೊರ ಜಿಲ್ಲೆಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಆಸಕ್ತ ಯುವಕ/ ಯುವತಿಯರು ತಮ್ಮ ಜನ್ಮ ದಿನಾಂಕದ ದಾಖಲೆಯೊಂದಿಗೆ (ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ) ಕಚೇರಿಯ ವಿಳಾಸದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ ಸಂಖ್ಯೆ : 155265 ಹಾಗೂ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-01, ಮೊಬೈಲ್ ಸಂಖ್ಯೆ: 9731251411 ಕಚೇರಿ ವೇಳೆಯಲ್ಲಿ ಸಂಪರ್ಕಿಸುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ