LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಗರಸಭೆ ಉಪಾಧ್ಯಕ್ಷೆ ಸ್ಥಾನಕ್ಕೆ ಶಕೀಲಾಬಾನು ಆಯ್ಕೆ

 

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ ಉಪಾಧ್ಯಕ್ಷೆಯಾಗಿ 12ನೇ ವಾರ್ಡ್ ಸದಸ್ಯೆ ಶಕೀಲಾಬಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶ್ರೀದೇವಿ ಜಿ.ಎಸ್ ಅವರ ರಾಜೀನಾಮೆಯಿಂದ ತೆರವಾದ ನಗರಸಭೆ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ಸೋಮವಾರ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಯಿತು.

ಶಕೀಲಾ ಬಾನು ಅವರು ನಗರಸಭೆ ಅಧ್ಯಕ್ಷೆ ಸಮಿತಾ ಬಿ.ಎನ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸುರುಲ್ಲಾ ಸೇರಿದಂತೆ ಇತರೆ ಸದಸ್ಯರೊಂದಿಗೆ ಆಗಮಿಸಿ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ನಾಮಪತ್ರ ಸಲ್ಲಿಸಿದರು. ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ನಾಮಪತ್ರ ಸ್ವೀಕರಿಸಿ, ನಾಮಪತ್ರದ ಪರಿಶೀಲನೆ ಕಾರ್ಯ ನಡೆಸಿದರು.

ನಿಗಧಿಪಡಿಸಿದ ಅವಧಿಯೊಳಗೆ ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಶಕೀಲಾ ಬಾನು ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ  ಮೆಹಬೂಬ್ ಜಿಲಾನಿ ಖುರೇಷಿ ಘೋಷಿಸಿದರು. ಈ ವೇಳೆ ನಗರ ಸಭೆ ಪೌರಾಯಕ್ತೆ ಎಂ.ರೇಣುಕಾ ಉಪಸ್ಥಿತರಿದ್ದರು.

35 ವಾರ್ಡ್‍ಗಳ ಚುನಾಯಿತ ಸದಸ್ಯರು ಹಾಗೂ ಸ್ಥಳೀಯ ವಿಧಾನಸಭೆ ಶಾಸಕ ಮತ್ತು ಲೋಕಸಭಾ ಸಂಸದರು ಸೇರಿ ಒಟ್ಟು 37 ಸದಸ್ಯರ ಸಂಖ್ಯಾ ಬಲವನ್ನು ಚಿತ್ರದುರ್ಗ ನಗರಸಭೆ ಹೊಂದಿದೆ. ಇದರಲ್ಲಿ ಒಟ್ಟು 9 ಸದಸ್ಯರು ಉಪಾಧ್ಯಕ್ಷರ ಚುನಾವಣೆ ಸಭೆಗೆ ಗೈರು ಹಾಜರಾಗಿದ್ದರು.

ನೂತನವಾಗಿ ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾದ ಶಕೀಲಾ ಬಾನು ಅವರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಗರಸಭೆ ಅಧ್ಯಕ್ಷೆ ಸಮಿತಾ ಬಿ.ಎನ್. ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸುರುಲ್ಲಾ ಸೇರಿದಂತೆ ಸದಸ್ಯರು ಅಭಿನಂದಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026