Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆ

ಬೆಂಗಳೂರು/ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ ಹಾಗೂ ಠೇವಣಿ ಹೆಸರಿನಲ್ಲಿ ಸಂಗ್ರಹಿಸಲಾದ ಹಣದಲ್ಲಿ ಸುಮಾರು ₹1,777 ಕೋಟಿ ಮೊತ್ತದ ನಿಧಿಯ ಲೆಕ್ಕ ಪತ್ತೆಯಾಗಿಲ್ಲ ಎಂಬುದು ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿ ಮೂಲದ ಹಣಕಾಸು ಸಂಸ್ಥೆ ಶಿವಂ ಅಸೋಸಿಯೇಟ್ಸ್‌ ವಿರುದ್ಧ ಈ ಕಾರ್ಯಾಚರಣೆ ನಡೆದಿದ್ದು, ಸಂಸ್ಥೆಯ ಪ್ರವರ್ತಕ ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು ಸಾರ್ವಜನಿಕರಿಗೆ ತಿಂಗಳಿಗೆ ಶೇ.3ರಷ್ಟು ಆದಾಯ ನೀಡುವುದಾಗಿ ಭರವಸೆ ನೀಡಿ ಹೂಡಿಕೆ ಹಾಗೂ ಠೇವಣಿ ಮಾಡಿಸಿಕೊಂಡಿದ್ದರು ಎಂದು ಇ.ಡಿ. ತಿಳಿಸಿದೆ.
ಇ.ಡಿ. ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು ಸಾರ್ವಜನಿಕರಿಂದ ಒಟ್ಟು ₹2,110.97 ಕೋಟಿ ಸಂಗ್ರಹಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಪೈಕಿ ಸುಮಾರು ₹333.89 ಕೋಟಿ ಮೊತ್ತವನ್ನು ಹೂಡಿಕೆದಾರರಿಗೆ ಮರುಪಾವತಿಸಿರುವುದು ಶೋಧದ ವೇಳೆ ದೊರೆತ ದಾಖಲೆಗಳ ಪರಿಶೀಲನೆಯಿಂದ ತಿಳಿದುಬಂದಿದೆ.
ಹೀಗಾಗಿ, ಸಾರ್ವಜನಿಕರಿಂದ ಸಂಗ್ರಹಿಸಿದ ಹಣದ ಮೂಲಕ ಸೃಷ್ಟಿಯಾಗಿರುವ ಅಪರಾಧದ ಆದಾಯದಲ್ಲಿ (Proceeds of Crime) ಸುಮಾರು ₹1,777 ಕೋಟಿ ಮೊತ್ತದ ಹಣದ ಪತ್ತೆಯಾಗಿಲ್ಲ ಎಂದು ಇ.ಡಿ. ಹೇಳಿದೆ. ಅಲ್ಲದೆ, ಸಾರ್ವಜನಿಕರನ್ನು ಹೂಡಿಕೆ ಮಾಡಲು ಪ್ರೇರೇಪಿಸಿದ ಲೀಡರ್‌ಗಳು ಹಾಗೂ ಕಮಿಷನ್ ಏಜೆಂಟ್‌ಗಳಿಗೆ ಶೇ.0.5ರಷ್ಟು ಕಮಿಷನ್ ನೀಡಲಾಗುತ್ತಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಮೂರು ಕಡೆ ಶೋಧ
ಆಗಸ್ಟ್‌ 7ರಂದು ಬೆಳಗಾವಿ ಜಿಲ್ಲೆಯ ಬೆಳಗಾವಿ, ಚಿಕ್ಕೋಡಿ ಮತ್ತು ನಿಪ್ಪಾಣಿ ಪ್ರದೇಶಗಳಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA), 2002ರ ಅಡಿಯಲ್ಲಿ ಇ.ಡಿ. ಶೋಧ ಕಾರ್ಯಾಚರಣೆ ನಡೆಸಿತು.
ಬೆಳಗಾವಿ ನಗರದ ಮಾಲಮಾರುತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಆಧರಿಸಿ ಇ.ಡಿ. ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತ್ತು. ನಿಯಂತ್ರಣರಹಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ (BUDS Act), 2019 ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆ (KPIDFE Act), 2004ರ ಅಡಿಯಲ್ಲಿ ಈ ಎಫ್‌ಐಆರ್ ದಾಖಲಾಗಿತ್ತು.
ಹೆಚ್ಚಿನ ಮತ್ತು ಖಚಿತ ಆದಾಯ ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರನ್ನು ಹೂಡಿಕೆ ಮಾಡಲು ಆಕರ್ಷಿಸಲಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.
ವಿವಿಧ ಖಾತೆಗಳ ಮೂಲಕ ಹಣ ವರ್ಗಾವಣೆ
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ನಡೆದ ತನಿಖೆಯಲ್ಲಿ, ಶಿವಂ ಅಸೋಸಿಯೇಟ್ಸ್‌ ಹಾಗೂ ಅದರೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳು ದೊಡ್ಡ ಸಂಖ್ಯೆಯ ಹೂಡಿಕೆದಾರರಿಂದ ಗಣನೀಯ ಪ್ರಮಾಣದ ಹಣ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ.
ಬ್ಯಾಂಕ್‌ಗಳು ಹಾಗೂ ಇತರ ಹಣಕಾಸು ದಾಖಲೆಗಳಿಂದ ಸಂಗ್ರಹಿಸಿದ ಮಾಹಿತಿಯ ಪ್ರಾಥಮಿಕ ವಿಶ್ಲೇಷಣೆಯಲ್ಲಿ, ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ವ್ಯವಹಾರಿಕ, ವೈಯಕ್ತಿಕ ಹಾಗೂ ಮಧ್ಯವರ್ತಿ ಖಾತೆಗಳ ಮೂಲಕ ವಿವಿಧೆಡೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪೈಕಿ ಕೆಲವು ಮೊತ್ತವನ್ನು ಷೇರು ದಲ್ಲಾಳಿಗಳು, ಸ್ಥಿರ ಠೇವಣಿ ಖಾತೆಗಳು, ಸಂಬಂಧಿತ ವ್ಯಕ್ತಿಗಳು ಹಾಗೂ ಇತರ ಫಲಾನುಭವಿಗಳಿಗೆ ವರ್ಗಾಯಿಸಿರುವುದು ಪತ್ತೆಯಾಗಿದೆ.
ಹಲವು ವ್ಯಕ್ತಿಗಳು, ಸಂಸ್ಥೆಗಳ ನಡುವೆ ಹಣಕಾಸು ನಂಟು
ತನಿಖೆಯಲ್ಲಿ ಶಿವಂ ಅಸೋಸಿಯೇಟ್ಸ್‌, ಶಿವಾನಂದ ಸಿದ್ದಪ್ಪ ನೀಲಣ್ಣವರ, ಸುಭಾಷ್‌ ರಾಮಗೌಡ ನಂದರ್ಗಿ, ಮಹೇಶ್‌ ಎಸ್‌. ನೀಲಣ್ಣವರ, ಶಿವಂ ಪ್ರೊಡಕ್ಷನ್ಸ್‌, ಶಿವಂ ಲೈಫ್‌ಲೈನ್‌ ಪ್ರೈವೇಟ್‌ ಲಿಮಿಟೆಡ್‌ ಹಾಗೂ ಶಿವಂ ಸೇವಾ (ಒಪಿಸಿ) ಪ್ರೈವೇಟ್‌ ಲಿಮಿಟೆಡ್‌ ಸೇರಿದಂತೆ ಇತರ ಸಂಬಂಧಿತ ವ್ಯಕ್ತಿಗಳು ಮತ್ತು ಸಂಸ್ಥೆಗಳ ನಡುವೆ ಹಣಕಾಸು ನಂಟು ಇರುವುದನ್ನು ಇ.ಡಿ. ಗುರುತಿಸಿದೆ.
ಈ ವ್ಯಕ್ತಿಗಳು ಮತ್ತು ಸಂಸ್ಥೆಗಳ ಬ್ಯಾಂಕ್‌ ಖಾತೆಗಳು ಹಾಗೂ ಹಣಕಾಸು ದಾಖಲೆಗಳ ವಿಶ್ಲೇಷಣೆಯಲ್ಲಿ, ಪರಸ್ಪರ ಸಂಪರ್ಕ ಹೊಂದಿರುವ ರೀತಿಯಲ್ಲಿ ಹಣದ ವ್ಯಾಪಕ ವರ್ಗಾವಣೆ ನಡೆದಿರುವುದು ಕಂಡುಬಂದಿದೆ ಎಂದು ಇ.ಡಿ. ತಿಳಿಸಿದೆ.
ದಾಖಲೆ, ಡಿಜಿಟಲ್‌ ಸಾಕ್ಷ್ಯ ವಶ
ಶೋಧ ಕಾರ್ಯಾಚರಣೆ ವೇಳೆ ಅಪರಾಧದ ಆದಾಯದ ಸೃಷ್ಟಿ, ವರ್ಗಾವಣೆ, ಪದರೀಕರಣ (Layering) ಹಾಗೂ ವಿವಿಧೆಡೆ ಹಣವನ್ನು ನಿಲ್ಲಿಸಿ ಇಡುವ (Parking) ಪ್ರಕ್ರಿಯೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಮತ್ತು ಡಿಜಿಟಲ್‌ ಸಾಕ್ಷ್ಯಗಳನ್ನು ಇ.ಡಿ. ವಶಪಡಿಸಿಕೊಂಡಿದೆ.
ಇದಲ್ಲದೆ, ಹಣಕಾಸು ವಹಿವಾಟುಗಳು, ಹಣದ ವರ್ಗಾವಣೆ ಮತ್ತು ಹಣ ನಿಲ್ಲಿಸಿ ಇಡುವಿಕೆ, ಸ್ಥಿರಾಸ್ತಿಗಳಲ್ಲಿನ ಹೂಡಿಕೆಗಳು ಹಾಗೂ ಆರೋಪಿಗಳೊಂದಿಗೆ ಸಂಬಂಧ ಹೊಂದಿರುವ ವಿವಿಧ ವ್ಯಕ್ತಿಗಳು ಮತ್ತು ಸಂಸ್ಥೆಗಳೊಂದಿಗಿನ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ವಶಪಡಿಸಿಕೊಳ್ಳಲಾಗಿದೆ.
ಶೋಧದ ವೇಳೆ ಪತ್ತೆಯಾದ ದಾಖಲೆಗಳು ಮತ್ತು ಡಿಜಿಟಲ್‌ ಸಾಕ್ಷ್ಯಗಳ ಪರಿಶೀಲನೆ ಪ್ರಸ್ತುತ ನಡೆಯುತ್ತಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ ಎಂದು ಇ.ಡಿ. ಪ್ರಕಟಣೆಯಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ