LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಪದ ಕಲಾ ಮೇಳ ಮೂಲಕ ಜನಪದ ಕಲೆಗೆ ಪ್ರೋತ್ಸಾಹ: ಶಿವಪ್ರಕಾಶ್

ಬೆಂಗಳೂರು: ಜನಪದ ಕಲೆಗಳಿಗೆ ಶಕ್ತಿ ತುಂಬುವ ಹಾಗೂ ಪ್ರೋತ್ಸಾಹ ನೀಡುವ ಸಲುವಾಗಿ ಅಧಿಕಾರಿಗಳ ಮಟ್ಟದಲ್ಲಿ ಜನಪದ ಕಲಾ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಯಿತು.

ರಾಜ್ಯದ್ಯಂತ ಜನಪದ ಬಗ್ಗೆ ಸಾಕಷ್ಟು ನಿರಾಶಕ್ತಿಗಳು ಇವೆ ಅದು ಸರ್ಕಾರದ ಸರ್ಕಾರದ ಮಟ್ಟದಲ್ಲಿಯೂ ಸಹ ಹೊರತಾಗಿಲ್ಲ. ರಾಜ್ಯದಲ್ಲಿ ಜನಪದ ಕಲೆಗಳಿಗೆ ಸಾಕಷ್ಟು ಮಹತ್ವ ಇದೆ ಅದೇ ರೀತಿ ರಾಜ್ಯದಲ್ಲಿ ಸುಮಾರು 160ಕ್ಕಿಂತ ಹೆಚ್ಚು ಜನಪದ ಕಲೆಗಳನ್ನು ಕಾಣಬಹುದಾಗಿದೆ ಆದರೆ ಜನಪದ ಕಲಾ ಮೇಳದಲ್ಲಿ ಕೇವಲ 18 ಕಲೆಗಳನ್ನು ಇಲ್ಲಿ ಕಾದರ್ಪಡಿಸಲಾಗುತ್ತದೆ ಎಂದು ಜನಪದ ಕಲಾವಿದರಾದ ಸಿಎನ್ ಶಿವಪ್ರಕಾಶ್ ಅವರು ತಿಳಿಸಿದರು.

ಜನಪದ ಕಲೆಗಳು ದಿನದಿಂದ ದಿನಕ್ಕೆ ನಶಿಸಿ ಹೋಗುತ್ತಿವೆ ಅವುಗಳನ್ನು ಹೇಗಾದರೂ ಮಾಡಿ ಉಡಿಸುವ ಬೆಳೆಸುವ ನಿಟ್ಟಿನಲ್ಲಿ ಸಾಕಷ್ಟು ಅವಿರತವಾದಂತ ಕ್ರಮಗಳನ್ನು ಕಲಾವಿದರೇ ಮಾಡುತ್ತಿದ್ದಾರೆ ಆದರೆ ಸರ್ಕಾರದ ಮಟ್ಟದಲ್ಲಿ ನಿರಾಕತ್ತಿ ತೋರುತ್ತಿರುವುದು ದುರ್ದೃಷ್ಟಕರ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಜನಪದ ಕಲಾವಿದರ ಒಂದು ಟ್ರಸ್ಟನ್ನು ಸಹ ಮಾಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

ಜನಪದ ಕಲಾ ಮೇಳದಲ್ಲಿ ಭೂತಾರಾಧನೆ ಸೋಮನ ಕುಣಿತ,ಡೊಳ್ಳು ಕುಣಿತ, ಕಂಸಾಳೆ, ಪೂಜಾ ಕುಣಿತ, ಸೇರಿದಂತೆ 18ಕ್ಕಿಂತ ಹೆಚ್ಚು ಜನಪದ ಕಲೆಗಳನ್ನು ವೇದಿಕೆ ಮೇಲೆ ವಿಶೇಷವಾಗಿ ಸಾದರಪಡಿಸಿದರು. ಇನ್ನು ಜನಪದ ಕಲಾ ಮೇಳಕ್ಕೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಮಲ್ಲೇಶ್ವರಂ ಶಾಸಕರಾದ ಅಶ್ವಥ್ ನಾರಾಯಣ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೇರಿದಂತೆ ಅನೇಕ ರಾಜಕೀಯ ಮುಖಂಡರುಗಳು ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ