Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕನಕಗಿರಿಯಲ್ಲಿ ಬಿಜೆಪಿಗೆ ಸೋಲುವ ಭೀತಿ - ಶಿವರಾಜ ತಂಗಡಗಿ

ಸುದ್ದಿಮೂಲವಾರ್ತೆ

ಕನಕಗಿರಿ,ಏ.೨- ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಆಡಳಿತ ವೈಫಲ್ಯ ಮತ್ತು ಸ್ಥಳೀಯ ಶಾಸಕರ ದುರಾಡಳಿತಕ್ಕೆ ಕನಕಗಿರಿ ವಿಧಾನ ಸಭಾ ಕ್ಷೇತ್ರದ ಜನರು ಮತ್ತು ಖುದ್ದು ಬಿಜೆಪಿಯಲ್ಲಿಯೇ ಅಪಸ್ವರ ಎದಿದ್ದು, ಈ ಪಕ್ಷದ ಅಪಾರ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುತ್ತಿರುವುದರಿಂದ ಈ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ ಕಾಡುತ್ತಿದೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಭಾನುವಾರ ತಾಲೂಕಿನ ಗೌರಿಪುರ ಮತ್ತು ಹುಲಿಹೈದರ್ ಗ್ರಾ.ಪಂ. ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ನಡೆಸಲಾದ ಕಾಂಗ್ರೆಸ್ ಮನ, ಮನೆ ತಲುಪೋಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಅನೇಕ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕೆ ಸೇರ್ಪಡೆ ಮಾಡಿಕೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು.

ಈಗಾಗಲೇ ಕ್ಷೇತ್ರದಾದ್ಯಂತ ಪ್ರತಿ ಹೋಬಳಿ ಮತ್ತು ಗ್ರಾಮ ಮಟ್ಟದ ಬಿಜೆಪಿ ಪಕ್ಷ ಅನೇಕ ಮುಖಂಡರು, ಅಪರ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಹಿಂದೆ ೧೦ ವರ್ಷಗಳ ಕಾಲ ನನ್ನೊಂದಿಗಿದ್ದು ಕಾರಣಾಂತರಗಳಿAದ ಬೇರೆ ಪಕ್ಷಕ್ಕೆ ಹೋದ ಅನೇಕರು ಪುನಃ ನನ್ನೊಂದಿಗರಲು ವಾಪಾಸ್ಸಾಗುತ್ತಿದ್ದಾರೆ. ಈ ಬೆಳವಣಿಗೆಯಿಂದ ಚುನಾವಣೆ ವೇಳೆಗೆ ಈ ಕ್ಷೇತ್ರದಲ್ಲಿ ಬಿಜೆಪಿ ಮನೆ ಖಾಲಿಯಾಗಲಿದೆ ಎಂದರು.

ಈಗಾಗಲೇ ಕ್ಷೇತ್ರದಾದ್ಯಂತ ಕಾಂಗ್ರೆಸ್ ಮನೆ, ಮನ ತಲುಪೋಣ ಕಾರ್ಯಕ್ರಮದೊಂದಿಗೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ಜನ, ರೈತ, ಕಾರ್ಮಿಕ, ಜನ ಸಾಮಾನ್ಯರ ವಿರುದ್ಧದ ನೀತಿಗಳು, ಯೋಜನೆಗಳ ಬಗ್ಗೆ ಮತ್ತು ಹಿಂದೆ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ಅಧಿಕಾರವಧಿಯಲ್ಲಿನ ಸಧನೆಗಳು ಹಾಗೂ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾರಗೊಳಿಸುವ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗಿದೆ. ಜ್ಯೊತೆಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಲಾಗಿದೆ. ನಾವು ಹದ ಕಡೆಗಳಲ್ಲಿ ಕಿಕ್ಕಿರಿದು ಸೇರುವ ಜನಸಂಖ್ಯೆ ನೋಡಿದರೆ ಈ ಚುನಾವಣೆಯಲ್ಲಿ ನೂರರಷ್ಟು ಕಾಂಗ್ರೆಸ್ ಗೆಲ್ಲಿಸುವ ವಿಶ್ವಾಸ ಮೂಡಿದೆ ಎಂದರು.

ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಗಂಗಧರಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಜಿ.ಪಂ. ಮಾಜಿ ಸದಸ್ಯರಾದ ವೀರೇಶ ಸಮಗಂಡಿ, ಅಮರೇಶ ಗೋನಾಳ, ತಾ.ಪಂ. ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನಗೌಡ, ಬಸವಂತಗೌಡ ಪಾಟೀಲ್, ಮುಖಂಡರಾದ ಸಿದ್ಧಪ್ಪ ನೀರ್ಲೂಟಿ, ದೇವಪ್ಪ ತೋಳದ್, ಕನಕಗಿರಿ ಪಟ್ಟಣ ಪಂಚಾಯ್ತಿ ಅನೇಕ ಸದಸ್ಯರು, ಕಾರ್ಯಕರ್ತರಿದ್ದರು.

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ