LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್ ಬಾಸ್ ನಿಂದ ಹೊರಬಂದು ಕಿಚ್ಚ ಸುದೀಪ್ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ

ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ’ ಎಂದು ಶೋಭಾ ಶೆಟ್ಟಿ ಪೋಸ್ಟ್ ಆರಂಭಿಸಿದ್ದಾರೆ.

ಶೋಭಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಎಲಿಮಿನೇಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಅವರು ಕೇವಲ ಎರಡು ವಾರಕ್ಕೆ ಹೊರಕ್ಕೆ ಬಂದಿದ್ದಾರೆ. ಇದಕ್ಕಾಗಿ ಅವರು ಅನಾರೋಗ್ಯದ ಕಾರಣ ನೀಡುತ್ತಿದ್ದಾರೆ. ಆಡಬೇಕು ಎಂದುಕೊಂಡರೂ ಆರೋಗ್ಯ ಸಹಕರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಬಿಗ್ ಬಾಸ್ನಿಂದ ಹೊರ ಬಂದ ಅವರು ಸುದೀರ್ಘ ಪೋಸ್ಟ್ ಹಾಕಿದ್ದಾರೆ. ಸುದೀಪ್ಗೆ ಧನ್ಯವಾದ ಹಾಕಿದ್ದಾರೆ.

‘ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ. ಜೀವನದ ಜವಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನಾನು ಈ ನಿರ್ಧಾರ ಮಾಡಿರುವೆ’ ಎಂದು ಪತ್ರ ಆರಂಭಿಸಿದ್ದಾರೆ ಶೋಭಾ ಶೆಟ್ಟಿ.

‘ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ. ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ ಹಾಗು ನಿನ್ನ ಪ್ರೀತಿಯ ಕಿಚ್ಚ ಸುದೀಪ್ ಸರ್ ನಿಮಗೆ ಧನ್ಯವಾದಗಳು’ ಎಂದಿದ್ದಾರೆ ಅವರು.

‘ಹೊಸ ಹುರುಪಿನೊಂದಿಗೆ ನಿಮ್ಮನ್ನು ರಂಜಿಸಲು, ನಿಮ್ಮ ಪ್ರೀತಿಯನ್ನು ಮತ್ತೆ ಪಡೆಯಲು ಮತ್ತೊಂದು ರೂಪದಲ್ಲಿ ಮತ್ತೆ ನಿಮ್ಮ ಮುಂದೆ ಖಂಡಿತಾ ನಾನು ಬರುವೆ’ ಎಂದು ಶೋಭಾ ಅವರು ಭರವಸೆ ನೀಡಿದ್ದಾರೆ. ಈ ಪೋಸ್ಟ್ಗೆ ‘ಪ್ರಯಾಣವು ಅನಿರೀಕ್ಷಿತ ತಿರುವು ಪಡೆಯಿತು. ಆದರೆ ಎಲ್ಲದಕ್ಕೂ ಒಂದು ಕಾರಣವಿದೆ’ ಎಂದು ಬರೆದುಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆ