
ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿ , ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ್ದಾರೆ. ದಾಸರ,ತತ್ವಪದಗಳ ಮೂಲಕ ಜನರಿಗೆ ತಿಳಿ ಹೇಳಿದರು. ಸಮಾಜದಲ್ಲಿರುವ ಎಲ್ಲಾ ಜಾತಿಗಳನ್ನು ಒಂದೇ ಎಂಬ ಭಾವನೆಯಲ್ಲಿ ನೋಡಿದ ಮಹಾನ್ ಜ್ಞಾನಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎನ್ ಎಸ್ ತೆಗ್ಗಿಹಳ್ಳಿ ಪ್ರಾಚಾರ್ಯರು ಅಧ್ಯಕ್ಷೀಯ ಭಾಷಣದಲ್ಲಿ ಶರಣರ ದಾಸ ಶ್ರೇಷ್ಠ ಜಯಂತಿಗಳನ್ನು ಆಚರಣೆ ಮಾಡುವುದು ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುತ್ತಾ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಆದರ್ಶ ಬದುಕನ್ನು ಕಟ್ಟಿಕೊಳ್ಳಲು ಮಾದರಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಕೀನಾ ಪಾಟೀಲ್, ಬಿ ಡಿ ಭೂಸನೂರ ಹಾಗೂ ಆದರ್ಶ ವಿದ್ಯಾಲಯ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪನ್ಯಾಸಕಿಯರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.