Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಸಾಮಾಜಿಕ ನ್ಯಾಯ ಸಿಗದವರ ಪರ ಅಂಬೇಡ್ಕರ್ ಹೋರಾಡಿದರು: ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂಬೇಡ್ಕರ್ ಅವರೊಬ್ಬ   ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ  ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ,   ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ.ಬಿ ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ  ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ.   ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.

ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು-ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು.

ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು  ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರ ನಾಯಕರು ಇದ್ದರು.


 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ