Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹೊಸ ಜಿಲ್ಲೆಗಳ ರಚನೆಗೆ ಸಿದ್ದರಾಮಯ್ಯ ಅತ್ಯಾಸಕ್ತಿ : ರಾಜ್ಯೋತ್ಸವಕ್ಕೆ ಕೈ ಕೊಡುಗೆ ?

 

ಬೆಂಗಳೂರು :
ರಾಜ್ಯದ ದೊಡ್ಡ ದೊಡ್ಡ ಪಟ್ಟಣಗಳನ್ನು ಕೇಂದ್ರವಾಗಿರಿಸಿಕೊಂಡು ಹೊಸ ಜಿಲ್ಲೆ ರಚಿಸಬೇಕು ಎಂಬ ಬೇಡಿಕೆ ಇಂದು ನಿನ್ನೆಯದಲ್ಲ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅತ್ಯಾಸಕ್ತಿ ವಹಿಸಿರುವುದು
ಸಂಚಲನಕ್ಕೆ ಕಾರಣವಾಗಿದ್ದು ಕರ್ನಾಟಕ ರಾಜ್ಯೋತ್ಸವ ವೇಳೆಗೆ ನೂತನ ಜಿಲ್ಲೆಗಳ ರಚನೆ ಬಹುತೇಕ ಖಚಿತ ಎನಿಸಿದೆ.

ರಾಜ್ಯದ ಕೆಲವು ನಗರಗಳು ಜಿಲ್ಲಾ ಕೇಂದ್ರವನ್ನು ಮೀರಿ ಬೆಳೆಯುತ್ತಿವೆ. ಅಂತಹ ನಗರಗಳನ್ನು ಜಿಲ್ಲೆ ಮಾಡಬೇಕು ಎಂಬ ಬೇಡಿಕೆ ಇದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಜಿಲ್ಲೆಗಳ ಸಂಖ್ಯೆ ತೀರಾ ಕಡಿಮೆ ಇದೆ. ಹೊಸದಾಗಿ ಉದಯಿಸಿರುವ ಪಕ್ಕದ ತೆಲಂಗಾಣದಲ್ಲಿ 30ಕ್ಕೂ ಹೆಚ್ಚು ಜಿಲ್ಲೆಗಳಿವೆ. ರಾಜಸ್ಥಾನದಲ್ಲಿ 50ಕ್ಕೂ ಹೆಚ್ಚು ಜಿಲ್ಲೆಗಳಿವೆ.
ಅದರಲ್ಲೂ ಕರ್ನಾಟಕದಲ್ಲಿ ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕದಲ್ಲಿ ಜಿಲ್ಲೆಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿವೆ. ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಉತ್ತರ ಕರ್ನಾಟಕಕ್ಕೆ ತೀರಾ ಅನ್ಯಾಯವಾಗುತ್ತಿದೆ. ಈ ಅಸಮತೋಲನ ಹೋಗಲಾಡಿಸಲು ರಾಜ್ಯ ಸರಕಾರ ಹೊಸ ಜಿಲ್ಲೆಗಳ ರಚನೆಗೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಚಿಕ್ಕೋಡಿ, ಗೋಕಾಕ, ಅಥಣಿ, ಬೈಲಹೊಂಗಲ, ಸಿರಸಿ, ಕುಂದಾಪುರ, ಪುತ್ತೂರು, ಸಾಗರ/ ಶಿಕಾರಿಪುರ, ಇಂಡಿ, ಹುಣಸೂರು, ಜಮಖಂಡಿ, ಸಿಂಧನೂರು, ಸೇಡಂ, ತಿಪಟೂರು, ಗಂಗಾವತಿ (ಕಿಷ್ಕಿಂದಾ) ಸೇರಿದಂತೆ ಹಲವು ಹೊಸ ಜಿಲ್ಲೆಗಳ ಬೇಡಿಕೆ ಆಗಾಗ ಮೊಳಗುತ್ತಿದೆ.

ಸಿದ್ದರಾಮಯ್ಯ ಒಲವು :
ಪಾವಗಡ, ಶಿರಾ, ಕೊರಟಗೆರೆ, ಮಧುಗಿರಿ ಸೇರಿ ಹೊಸ ಜಿಲ್ಲೆ ರಚಿಸಲು ಸರಕಾರ ಮುಂದಾಗಿದೆ ಎಂಬ ಮಾಹಿತಿ ಇದೆ.

ಈ ಮೊದಲು ಶಿರಾವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಜಿಲ್ಲೆ ಮಾಡಬೇಕು ಎಂಬ ಬೇಡಿಕೆ ಇತ್ತು. ಆದರೆ ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಧುಗಿರಿ ಜಿಲ್ಲೆ ರಚನೆ ಬಗ್ಗೆ ಮಾತನಾಡಿರುವುದು ಹೊಸ ಜಿಲ್ಲೆಗಳ ಬಗ್ಗೆ ಸರಕಾರ ಮುತುವರ್ಜಿ ವಹಿಸಿರುವ ಸಂಕೇತವಾಗಿದೆ.
ಮಧುಗಿರಿ ಉಪವಿಭಾಗದ ನಾಲ್ಕು ತಾಲೂಕುಗಳನ್ನು ಒಳಗೊಂಡು ಮಧುಗಿರಿ ಜಿಲ್ಲೆ ರಚಿಸುವಂತೆ ಸಚಿವ ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ