Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು-ಸಿದ್ದರಾಮಯ್ಯ ಭರವಸೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೌರಕಾರ್ಮಿಕರು ಪ್ರಸ್ತುತ  ಖಾಯಂ ಮಾಡಲಾಗಿದ್ದು
, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ಮುಕ್ತ-
ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು  ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ  ವ್ಯವಸ್ಥೆ ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪೌರಕಾರ್ಮಿಕರ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ-
ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿ ಬೆಂಬಲಿಸಿ
, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪೌರ ಕಾರ್ಮಿಕರ ಈ ಬೇಡಿಕೆಯನ್ನು ಪೂರೈಸುವುದಾಗಿ ನೀಡಲಾಗಿದ್ದ ಭರವಸೆಯನ್ನು ಇಂದು ಈಡೇರಿಸಲಾಗಿದೆ. ಇದರಿಂದ 4ನೇ ದರ್ಜೆಯ ಪೌರಕಾರ್ಮಿಕನ ವೇತನ, ಅವರ ಖಾತೆಗೆ ನೇರವಾಗಿ 39000 ರೂ.ಗಳು ಪಾವತಿಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಾಯಕದಲ್ಲಿ ಮೇಲು-ಕೀಳು ಇಲ್ಲ-
ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮಾಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆ ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು
, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದು ಅವರು ತಿಳಿಸಿದರು.



ಪೌರಕಾರ್ಮಿಕರ ಮಕ್ಕಳು ಮುಖ್ಯವಾಹಿನಿಗೆ ಬರುವಂತಾಬೇಕು-
1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಅವರ ಕುಟುಂಬದವರೂ  ಮುಖ್ಯವಾಹಿನಿಗೆ ಬರಬೇಕು. ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ. ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ