Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿರಸಂಗಿ ಲಿಂಗರಾಜರು ಶಿಕ್ಷಣಕ್ಕಾಗಿ ಮಾಡಿದ ತ್ಯಾಗ ಚಿರಸ್ಥಾಯಿಯಾಗಿದೆ: ಡಾ.ಡಿ.ಕೆ.ಗಾಂವಕರ

ಬೆಳಗಾವಿ : ಸಮಾಜದ ಕಲ್ಯಾಣಕ್ಕೆ ಶಿಕ್ಷಣವೇ ಮೂಲವೆಂದು ತಿಳಿದ ಲಿಂಗರಾಜರು ತಮ್ಮ ಇಡೀ ಸಂಪತ್ತನ್ನು ಶಿಕ್ಷಣಕ್ಕೆ ಮೀಸಲಾಗಿಟ್ಟಿದ್ದು ಭಾರತದ ಚರಿತ್ರೆಯಲ್ಲಿಯೇ ಅಪರೂಪವೆನಿಸಿದೆ. ಸಮಾಜದ ಸುಖವೇ ತನ್ನ ಸುಖವೆಂದು ಎಲ್ಲವನ್ನೂ ಧಾರೆ ಎರೆದ ಲಿಂಗರಾಜರು ಇಂದಿಗೂ ಅಮರರೆನಿಸಿದ್ದಾರೆ ಎಂದು ಯಲ್ಲಾಪುರ ವಿಶ್ವದರ್ಶನ ಪಪೂ ಕಾಲೇಜಿನ ಪ್ರಾಚಾರ್ಯ ಡಾ.ಡಿ.ಕೆ.ಗಾಂವಕರ ಹೇಳಿದರು.

ಅವರು ಲಿಂಗರಾಜ ಕಾಲೇಜಿನಲ್ಲಿ ಬೆಳಗಾವಿಯ ಎಲ್ಲ ಕೆಎಲ್‌ಇ ಅಂಗಸಂಸ್ಥೆಯ ಆಶ್ರಯದಲ್ಲಿ ಜರುಗಿದ ಸಿರಸಂಗಿ ಲಿಂಗರಾಜರ 165ನೇ ಜಯಂತಿ ಉತ್ಸವದಲ್ಲಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ಹಾಗೂ ಲಿಂಗರಾಜರು ಅಲ್ಪಾವಧಿಯಲ್ಲಿ ನಮ್ಮನ್ನಗಲಿದರೂ ಲೋಕದಲ್ಲಿ ಅಮರವಾಗಿ ಉಳಿಯುವಂತ ಕಾರ್ಯಮಾಡಿದರು. ಲಿಂಗರಾಜರು ಸಮಾಜದ ಉದಾತ್ತ ಉದ್ದೇಶಕ್ಕಾಗಿ ಮಹಾದಾನ ನೀಡಿ ಔದಾರ‍್ಯವನ್ನು ಮೆರೆದಿದ್ದಾರೆ. ಅವರ ಬದುಕು ಸುಖದ ಸುಪತ್ತಿಕೆಯಾಗಿರಲಿಲ್ಲ. ಕೌಟುಂಬಿಕವಾಗಿ ಬವಣೆಗಳಿಂದ ನೊಂದುಕೊಂಡರು. ನೂರೆಂಟು ಕಷ್ಟಗಳನ್ನು ಎದುರಿಸಿದರು. ಜೀವನದ ಕೊನೆಗೆ ತಮ್ಮ ಸಮಸ್ತ ಚಿರಾಸ್ಥಿಯನ್ನು ಸಮಾಜದ ಮಕ್ಕಳ ಕಲ್ಯಾಣಕ್ಕಾಗಿ ಸಮರ್ಪಿಸಿದರು. ಕೃಷಿ, ನೀರಾವರಿ ಮೊದಲ್ಗೊಂಡು ಹಲವಾರು ಮೌಲಿಕ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಅಂತಹ ಪ್ರಾತಃ ಸ್ಮರಣೀಯರು ಇಂದಿನ ಯುವ ಪೀಳಿಗೆಗೆ ಅನುಕರಣೀಯರು. ಇಂದು ಕೆಎಲ್‌ಇಯ ಎಲ್ಲ ಅಂಗ ಸಂಸ್ಥೆಗಳಲ್ಲಿ ಅವರ ಜಯಂತಿಯನ್ನು ಆಚರಿಸಿ ಮಕ್ಕಳಲ್ಲಿ ಅವರ ದಾನದ, ತ್ಯಾಗದ ಕುರಿತು ಹೇಳುತ್ತಿರುವುದು ಅಭಿನಂದನೀಯವೆನಿಸಿದೆ ಎಂದರು.

ದಿವ್ಯ ಸಾನ್ನಿಧ್ಯವಹಿಸಿದ್ದ ಶೇಗುಣಸಿ ವಿರಕ್ತಮಠದ ಪೂಜ್ಯ ಮಹಾಂತಪ್ರಭು ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ, ಲಿಂಗರಾಜರಂತಹ ಪುಣ್ಯಾತ್ಮರನ್ನು ಸ್ಮರಿಸುವುದು ನಿಜಮುಕ್ತಿ ಇದ್ದಂತೆ. ಲಿಂಗರಾಜರು ತಮ್ಮ ಜನಮುಖಿಯಾದ ಸೇವೆಗಳಿಂದ ಅಮರತ್ವವನ್ನು ಪಡೆದರು. ಸಮಸ್ತ ನಾಡಿಗೆ ಅವರು ನೀಡಿದ ಕೊಡುಗೆ ಅನನ್ಯ ಅನುಪಮ. ಅವರಂತಹ ದಾನಿಗಳು ಯುಗಯುಗಳು ಕಳೆದರೂ ಬರುವುದು ದುರ್ಲಭ. ಲಿಂಗರಾಜರು ದಾನ ಅಷ್ಟೇ ಅಲ್ಲದೆ ಬದುಕಿನುದ್ದಕ್ಕೂ ಅನೇಕ ಜನೋಪಯೋಗಿ ಕಾರ್ಯಗಳನ್ನು ನಿರ್ವಹಿಸಿದರು. ಲಿಂಗರಾಜರ ತ್ಯಾಗದಲ್ಲಿ ಒಂದು ವೈಶಿಷ್ಟ್ಯವುಂಟು, ಅವರು ಸ್ವಾರ್ಥವನ್ನು ಸಂಪೂರ್ಣವಾಗಿ ಮರೆತು ತಮ್ಮ ಇಡಿಯ ಆಸ್ತಿಯನ್ನು ಸಮಾಜದ ಶಿಕ್ಷಣಕ್ಕಾಗಿ ಧಾರೆಯೆರೆದರು. ಅಂತಹ ಮಹಾತ್ಮರನ್ನು ಇಂದಿನ ಯುವಪೀಳಿಗೆ ತಿಳಿದುಕೊಳ್ಳುವುದು ಅಗತ್ಯವಿದೆ. ಇಂದು ಎಐ ಯುಗ, ಕ್ರಿಯೆಟಿವ್ಹಿಡಿ ಬಹುಮುಖ್ಯ. ನಮ್ಮ ಬದುಕನ್ನು ಹೊಸತನಕ್ಕೆ ತೆರೆದುಕೊಳ್ಳಬೇಕು. ಕ್ರಿಯಾತ್ಮಕವಾದ ಬದುಕು ಹೊಸತನವನ್ನು ಕಲಿಸುತ್ತದೆ ಎಂದು ಹೇಳಿದರು.

ಕೆಎಲ್‌ಇ ಅಧ್ಯಕ್ಷ ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿಯವರು ಅಧ್ಯಕ್ಷೀಯ ನುಡಿಗಳನ್ನಾಡಿ ಜನತೆಯ ಹಿತಕ್ಕಾಗಿ ಬದುಕಿದ ಮಹಾಚೇತನ ಸಿರಸಂಗಿ ಲಿಂಗರಾಜರು. ಸಮಾಜದ ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು, ಮುಂದೆ ಬರಬೇಕು, ಬದುಕಿನ ಕಷ್ಟಗಳನ್ನು ತೊಡೆದುಹಾಕಬೇಕೆಂಬ ಸಂಕಲ್ಪದೊಂದಿಗೆ ಶಿಕ್ಷಣ ರಂಗಕ್ಕೆ ಆರ್ಥಿಕ ಮತ್ತು ಜ್ಞಾನದ ಶಕ್ತಿಯನ್ನು ತುಂಬಿದರು. ವ್ಯಕ್ತಿಯೊಬ್ಬನಿಗೆ ಕೊಡುವ ದಾನಕ್ಕಿಂತಲೂ ಶಿಕ್ಷಣ ಸಂಘ ಸಂಸ್ಥೆಗಳಿಗೆ ಕೊಡುವ ದಾನ ಶ್ರೇಷ್ಠವೆಂದು ತಿಳಿದರು. ಸಮಾಜಕ್ಕೆ ಪ್ರೇರಕರಾದರು. ಅವರ ಇಚ್ಛೆಯಂತೆ ಪ್ರಾರಂಭವಾದ `ಸಿರಸಂಗಿ ನವಲಗುಂದ ಟ್ರಸ್ಟ್’ ಸಾವಿರಾರೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ ಇಂದಿಗೂ ನೀಡುತ್ತಿದೆ. ಇಂತಹ ತ್ಯಾಗವೀರ ಸಿರಸಂಗಿ ಲಿಂಗರಾಜರ ವ್ಯಕ್ತಿತ್ವಕ್ಕೆ ಮಾರುಹೋದ ನಮ್ಮ ಕೆಎಲ್‌ಇ ಸಂಸ್ಥೆಯ ಏಳು ಜನ ಶಿಕ್ಷಕರು ಅವರ ಆದರ್ಶವನ್ನೇ ಇಟ್ಟುಕೊಂಡು 1916 ರಲ್ಲಿ ಕೆಎಲ್‌ಇ ಸಂಸ್ಥೆಯನ್ನು ಹುಟ್ಟುಹಾಕಿದರು. 1933ರಲ್ಲಿ ಪ್ರಥಮ ಪದವಿ ಕಾಲೇಜಿಗೆ ಲಿಂಗರಾಜರ ಮೇಲಿನ ಅಭಿಮಾನದಿಂದಾಗಿ ‘ಲಿಂಗರಾಜ ಮಹಾವಿದ್ಯಾಲಯ’ವೆಂದು ನಾಮಕರಣ ಮಾಡಿದರು ಎಂದು ಹೇಳಿದರು.

ಕೆಎಲ್‌ಇ ಉಪಾಧ್ಯಕ್ಷ ಬಸವರಾಜ ತಟವಟಿಯವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಎಚ್.ಎಂ. ಚೆನ್ನಪ್ಪಗೋಳ ವಂದಿಸಿದರು. ಡಾ.ಮಹೇಶ ಗುರನಗೌಡರ ಹಾಗೂ ಪ್ರೊ.ಸಿದ್ಧನಗೌಡ ಪಾಟೀಲ ನಿರೂಪಿಸಿದರು. ಪ್ರಾಚಾರ್ಯ ಡಾ.ಎಚ್.ಎಸ್. ಮೇಲಿನಮನಿ ಉಪಸ್ಥಿತರಿದ್ದರು. ಮಾಹೇಶ್ವರ ಅಂಧ ಮಕ್ಕಳ ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಜಯಂತಿ ಉತ್ಸವದ ನಿಮಿತ್ತ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರಕ್ತಭಂಡಾರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ಯುನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. ಡಾ.ಎಚ್.ಬಿ.ರಾಜಶೇಖರ, ಡಾ.ಮಹಾಂತೇಶ ರಾಮಣ್ಣವರ, ಪ್ರೊ.ಕರಡಿಗುದ್ದಿ, ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷೆ ಸುಧಾ ಉಪ್ಪಿನ, ಸದಸ್ಯರಾದ ರಾಜೇಶ್ವರಿ ಸಂಬರಗಿಮಠ, ಶ್ರೀಮತಿ ಎಫ್.ಎಂ.ಮಹಾಂತಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಲಿಂಗರಾಜ ಜಯಂತಿ ಉತ್ಸವದ ಅಂಗವಾಗಿ ಜರುಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ, ಮಾಧ್ಯಮಿಕ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪಾರಿತೋಷಕಗಳನ್ನು ವಿತರಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ