Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೆಲವು ಶ್ರೀಮಂತರ ಶೋಕಿ, ಮೌಢ್ಯ, ದುರಹಂಕಾರ........

ಬಿಗ್ ಬಾಸ್ ಮನೆಯಿಂದ ಸಂತೋಷ ವರ್ತೂರು ಅವರನ್ನು ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಆ ಘಟನೆ ನಂತರ ರಾಜ್ಯಾದ್ಯಂತ ಹುಲಿ ಉಗುರು ಧರಿಸಿದವರ ದೊಡ್ಡಪಟ್ಟಿಯೇ ನಮ್ಮ ಕಣ್ಣ ಮುಂದೆ ಬರುತ್ತಿದೆ. ಹುಲಿ ಉಗುರು ಧರಿಸುವುದು ಕಾನೂನುಬಾಹಿರ ಎಂಬ ಬಗ್ಗೆ ಬಹುದೊಡ್ಡ ಚರ್ಚೆ ಇದೀಗ ನಡೆದಿದೆ. ಈ ನಿಟ್ಟಿನಲ್ಲಿ ಖ್ಯಾತ ಲೇಖಕ ವಿವೇಕಾನಂದ ಅವರ ಬರಹ ಅತ್ಯಂತ ಮಾರ್ಮಿಕವಾಗಿ ಮೂಡಿ ಬಂದಿದೆ. ಸದಾ ಒಂದಲ್ಲ ಒಂದು ವಿಷಯವಾಗಿ ತಮ್ಮ ಯೋಚನಾ ಲಹರಿಯಿಂದ ಅಪೂರ್ವವಾಗಿ ಬರೆದು ಗಮನಸೆಳೆಯುವ ಲೇಖಕರ ಬರಹ ಪ್ರಸ್ತುತ ಅತ್ಯಂತ ಆಪ್ತವಾಗಿದೆ. ನಮ್ಮ ಕಷ್ಟ ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ. ಆದರೆ ಯಾವುದೋ ಪ್ರಾಣಿಯ ಉಗುರು ಧರಿಸುವುದರಿಂದ ನಮಗೆ ಯಶಸ್ಸು ಸಿಗದು ಎಂಬ ಅತ್ಯಂತ ಉತ್ತಮ ಸಂದೇಶವನ್ನು ಅವರು ಈ ಬರಹದ ಮೂಲಕ ವ್ಯಕ್ತಪಡಿಸಿರುವುದು ಗಮನಾರ್ಹ. ಇನ್ನೊಂದೆಡೆ ಇದುವರೆಗೂ ಮೌನ ಧೋರಣೆ ಅನುಸರಿಸಿದ ಅರಣ್ಯ ಇಲಾಖೆ ವರ್ತನೆಗೆ ಕಟು ಟೀಕೆ ವ್ಯಕ್ತಪಡಿಸಿರುವ ಅವರು ಇಲಾಖೆ ಇದುವರೆಗೆ ಈ ಬಗ್ಗೆ ಕಾಯ್ದೆಯ ಕಟ್ಟುಕಟ್ಟಳೆಯನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡದೆ ಇರುವ ಬಗ್ಗೆ ಲೇಖನದಲ್ಲಿ ಗಮನ ಸೆಳೆದಿದ್ದಾರೆ.

 

 

ಹುಲಿ ಉಗುರು, ಆನೆ ದಂತ, ನವಿಲು ಗರಿ, ಜಿಂಕೆ - ಹುಲಿಯ ಚರ್ಮ, ಮೀನಿನ ವಾಸ್ತು, ಹಾವಿನ ವಿಷ, ಸಾರಂಗದ ಕೊಂಬು, ಆನೆ - ಕರಡಿಯ ಕೂದಲು ಹೀಗೆ ಕೆಲವು ಸಂರಕ್ಷಿತ ಪ್ರಾಣಿಗಳ ವಸ್ತುಗಳನ್ನು ಉಪಯೋಗಿಸುವ ಖಯಾಲಿ.......

ಪ್ರಕೃತಿಯ ಮಡಿಲಿನ ರಾಷ್ಟ್ರಕವಿ ಕುವೆಂಪು ಒಂದು ಕಡೆ ಹೇಳುತ್ತಾರೆ " ಹೂವು ಬಳ್ಳಿಗೆ ಅಲಂಕಾರವೇ ಹೊರತು ವಿಗ್ರಹಕ್ಕಲ್ಲ ". ಹಾಗೆಯೇ ವಚನಕಾರ ಅಂಬಿಗರ ಚೌಡಯ್ಯ ಒಂದು ವಚನದಲ್ಲಿ ಹೇಳುವ ಸಾರಾಂಶ ಹೀಗಿದೆ..

" ಆರೈಕೆಗೆ ಬಿತ್ತಿದ ಗಿಡದ ಹೂವನ್ನು ಕೊಯ್ದು, ಊರಿನವರು ಬಾಯಾರಿಕೆಗಾಗಿ ಕಟ್ಟಿಸಿದ ಕೆರೆಯ ನೀರನ್ನು ತಂದು, ನಾಡಿನ ಜನರೆಲ್ಲ ನೋಡಲಿ ಎಂದು ಆಡಂಬರಕ್ಕಾಗಿ, ಬಹಿರಂಗವಾಗಿ ಪೂಜೆ ಮಾಡುವುದು ತಪ್ಪು. ಹಾಗೆ ಪೂಜೆ ಮಾಡುವುದರಿಂದ ಅದರ ಪುಣ್ಯ ಹೂವಿಗೋ, ನೀರಿಗೋ ಅಥವಾ ಪೂಜಿಸಿದ ಮನುಷ್ಯನಿಗೋ ನನಗಂತೂ ಗೊತ್ತಿಲ್ಲ. ನಿನಗಾದರೂ ಗೊತ್ತಿದ್ದರೆ ಹೇಳು ಎಂದು ಅಂಬಿಗರ ಚೌಡಯ್ಯ ತನ್ನ ಇಷ್ಟ ದೈವವನ್ನು ಕೇಳುತ್ತಾರೆ "

ಆದರೆ ಈ ಮೂರ್ಖ - ಅಮಾನವೀಯ ಕೆಲವು ಜ್ಯೋತಿಷ್ಯ ಶಾಸ್ತ್ರಕಾರರು ಮೇಲೆ ಹೇಳಿದ ಪ್ರಾಣಿಗಳ ಅಂಗಾಂಗಗಳು ಧರಿಸಿದರೆ ಮನುಷ್ಯರಿಗೆ ಲಾಭವಾಗುತ್ತದೆ ಎಂದು ಬಹಿರಂಗವಾಗಿ ಹೇಳುತ್ತಾರೆ. ತಪ್ಪು ಕಲ್ಪನೆಯ ಪರಮಾವಧಿ. ಮಾಧ್ಯಮಗಳಿಗೆ ಅವರೇ ಮಹತ್ವದ ವ್ಯಕ್ತಿಗಳು....

ಮನುಷ್ಯನ ಆಸೆಗಳಿಗೆ ಮಿತಿಯೇ ಇಲ್ಲ. ಸಣ್ಣ ಮಟ್ಟದ ನಟರುಗಳು ದೊಡ್ಡ ಸ್ಟಾರ್ ಗಳಾಗುವುದು, ಸಾಮಾನ್ಯ ವ್ಯಕ್ತಿಗಳು ಜನಪ್ರಿಯ ಸ್ವಾಮೀಜಿಗಳಾಗಿ ಖ್ಯಾತಿ ಪಡೆಯುವುದು, ಬಡ ಕಾರ್ಮಿಕ ಶ್ರೀಮಂತ ಉದ್ಯಮಿಯಾಗುವುದು, ಒಬ್ಬ ಪಕ್ಷದ ಕಾರ್ಯಕರ್ತ ಮಂತ್ರಿಯಂತ ಉನ್ನತ ಹುದ್ದೆಗೇರುವುದು ಈ ಸಮಾಜದಲ್ಲಿ ಸಹಜವಾಗಿ ನಡೆಯುತ್ತದೆ.......



ಇದಕ್ಕಾಗಿ ಅವರ ಶ್ರಮ, ಪ್ರತಿಭೆ, ಪರಿಸ್ಥಿತಿ ಎಲ್ಲವೂ ಕಾರಣವಾಗಿರುತ್ತದೆ. ಆದರೆ ಅದನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ, ಯಶಸ್ಸಿನ ನಂತರ ಅಷ್ಟಕ್ಕೇ ತೃಪ್ತಿಯಾಗಿ ಆ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುತ್ತಾ, ಯಶಸ್ಸು ನೀಡಿದ ಸಮಾಜಕ್ಕೆ ನಿಷ್ಕಲ್ಮಶವಾಗಿ ಒಂದಷ್ಟು ಸಹಾಯ ಮಾಡುವುದನ್ನು ಮರೆತು ಮತ್ತಷ್ಟು ಸುಖ ಸಂತೋಷ ಹಣ ಅಧಿಕಾರದ ವ್ಯಾಮೋಹಕ್ಕೆ ಬಲಿಯಾಗಿ ಈ ರೀತಿಯ ಮೂಢನಂಬಿಕೆಗಳಿಂದ ಕಾನೂನು ಬಾಹಿರ, ಧರ್ಮ ಬಾಹಿರ ಕೆಲಸಗಳಲ್ಲಿ ತೊಡಗುವ ಇವರ ವರ್ತನೆಗೆ ಏನು ಹೇಳುವುದು........

ಇಷ್ಟು ದಿನ ಈ ಬಗ್ಗೆ ಸರಿಯಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗೃತ ಗೊಳಿಸದ ಅರಣ್ಯ ಇಲಾಖೆಯವರ ಬೇಜವಾಬ್ದಾರಿ ಸಹ ಇಲ್ಲಿ ಎದ್ದು ಕಾಣುತ್ತದೆ...

ಮನುಷ್ಯನು ಸಹ ಒಂದು ಪ್ರಾಣಿ. ಆತನ ಯಾವ ಅಂಗಗಳೂ ಶ್ರೇಷ್ಠವೂ ಅಲ್ಲ ಕನಿಷ್ಠವೂ ಅಲ್ಲ. ಅದೊಂದು ಸಹಜ ಸೃಷ್ಟಿಯ ಕೊಡುಗೆ. ಅಷ್ಟು ಮಾತ್ರದ ಸಾಮಾನ್ಯ ಜ್ಞಾನವೂ ಇಲ್ಲದಾಯಿತೇ ಅಥವಾ ತನ್ನ ಅಂತಸ್ತಿನ ಪ್ರದರ್ಶನದ ದುರಹಂಕಾರವೇ......

ಈ‌ ಸಂದರ್ಭದಲ್ಲಿ ಈ ಸಮಾಜದಲ್ಲಿ ಪ್ರತಿನಿತ್ಯ ಅನರ್ಹ ಅಪಾಯಕಾರಿ ಶಾಸ್ತ್ರ ಹೇಳುವವರಿಂದ ಮೌಡ್ಯ ಬಿತ್ತಿ ಈ ರೀತಿಯ ಘಟನೆಗಳಿಗೆ ಪ್ರಚೋದನೆ ನೀಡುತ್ತಿರುವ ಮಾಧ್ಯಮಗಳ ಮೇಲೆ ಸಹ ಕ್ರಮ ಕೈಗೊಳ್ಳಬೇಕು. ಆಗ ಇದನ್ನು ಬುಡ ಸಮೇತ ಕಿತ್ತು ಹಾಕಬಹುದು.

ನೆನಪಿಡಿ, ಈ‌ ಸೃಷ್ಟಿಯಲ್ಲಿ ಎಲ್ಲರೂ ಸಹಜ ಆರೋಗ್ಯವಾಗಿ ಜೀವಿಸಬೇಕೆಂದರೆ ಪ್ರಕೃತಿಯ ಸಸ್ಯಗಳು, ಜೀವರಾಶಿಗಳು, ಬೆಟ್ಟ, ಗುಡ್ಡ, ಕಾಡು, ನದಿ, ಸಮುದ್ರ, ಸರೋವರ, ಹಿಮ ಪರ್ವತಗಳು, ಮರುಭೂಮಿಗಳು ಎಲ್ಲವೂ ತನ್ನ ಮೂಲ ಸ್ವರೂಪದಲ್ಲಿ ಅಸ್ತಿತ್ವದಲ್ಲಿ ಇರಬೇಕು. ಇಲ್ಲದಿದ್ದರೆ ಪ್ರಕೃತಿ ತನ್ನ ನಿಯಂತ್ರಣ ಮೀರುತ್ತದೆ. ಆಗ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಿ ಎಲ್ಲಕ್ಕೂ ತೊಂದರೆಯಾಗುತ್ತದೆ. ಈಗ ಆಗುತ್ತಿರುವುದು ಸಹ ಅದೇ. ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಇದೆ. ದಯವಿಟ್ಟು ಸ್ವಲ್ಪ ಎಚ್ಚರಿಕೆ ವಹಿಸಿ‌‌.........

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ - ಮನೆಗಳಲ್ಲಿ - ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,

*ವಿವೇಕಾನಂದ ಎಚ್ ಕೆ*

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ