Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪ್ರೇಕ್ಷಣೀಯ/ಧಾರ್ಮಿಕ ಸ್ಥಳಗಳ ವೀಕ್ಷಣೆಗೆ ಹೋಗುವ ಪ್ರಯಾಣಿಕರಿಗೆ ವಿಶೇಷ ಪ್ರವಾಸ ಪ್ಯಾಕೇಜ್ ಸೌಲಭ್ಯ

 

ಬೆಳಗಾವಿ :
ಬೆಳಗಾವಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿವಿಧ ಐತಿಹಾಸಿಕ/ಧಾರ್ಮಿಕ ಪ್ರವಾಸಿ ತಾಣಗಳಿಗೆ ಮೊದಲ ಬಾರಿಗೆ ಏಕ ಕಾಲಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಏಕದಿನ ಪ್ರವಾಸ ಪ್ಯಾಕೇಜ್‌ಗಳನ್ನು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದಿಂದ ಪ್ರಾರಂಭಿಸಲಾಗಿದೆ.
ಈಗಾಗಲೇ ಚಾಲನೆಯಲ್ಲಿರುವ ಪ್ರವಾಸಿ ಪ್ಯಾಕೇಜ್ 1 & 2 ಗಳನ್ನು ಹೊರತುಪಡಿಸಿ ನೂತನವಾಗಿ ಏಳು (7) ಏಕದಿನ ಪ್ರವಾಸ ಪ್ಯಾಕೇಜ್‌ಗಳನ್ನು ಸೇರಿದಂತೆ ಪ್ರಾಯೋಗಿಕ ಪ್ರಾರಂಭಿಸಲಾಗಿದೆ. ಇದರಂತೆ ಒಟ್ಟು 9 ಪ್ಯಾಕೇಜ್‌ಗಳನ್ನು ಪ್ರತಿ 2 ಮತ್ತು 4 ನೇ ಶನಿವಾರ ಹಾಗೂ ಪ್ರತಿ ಭಾನುವಾರಗಳಂದು ಅಗಸ್ಟ್.12 ರಿಂದ ಜಾರಿಗೆ ಬರುವಂತೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣ & ಬೈಲಹೊಂಗಲ ಬಸ್ ನಿಲ್ದಾಣಗಳಿಂದ ಕಾರ್ಯಾಚರಿಸಲಾಗುವುದು.

ಸದರಿ ಸಾರಿಗೆಗಳಿಗೆ ಇ-ಟಿಕೇಟನ್ನು ಆನ್‌ಲೈನ್ ಮೊಬೈಲ್ ಮುಖಾಂತರ ಕಾಯ್ದಿರಿಸಬಹುದಾಗಿದೆ. ಅಲ್ಲದೇ ಸಂಸ್ಥೆಯ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಮುಂಗಡ ಟಿಕೇಟ್ ಕೌಂಟರ್ ಹಾಗೂ ಸಂಸ್ಥೆಯಿಂದ ನಿಗದಿಪಡಿಸಿರುವ ಬೆಳಗಾವಿಯ ವಿವಿಧ ಸ್ಥಳದಲ್ಲಿರುವ ಸಂಸ್ಥೆಯ ಅವತಾರ ಬುಕ್ಕಿಂಗ್ ಏಜಂಟರಲ್ಲಿಯೂ ಸಹ ಮುಂಗಡ ಟಿಕೇಟ್ ಕಾಯ್ದಿರಿಸಿಕೊಳ್ಳಬಹುದಾಗಿದೆ.

ವೀಕ್ಷಣಾ ಸ್ಥಳಗಳ ವಿವರ:
ಬೆಳಗಾವಿ-ಹಿಡಕಲ್ ಡ್ಯಾಂ-ಗೊಡಚಿನಮಲ್ಕಿ ಜಲಪಾತ-ಗೋಕಾಕ ಜಲಪಾತ, ಬೆಳಗಾವಿ-ನಾಗರತಾಸ ಜಲಪಾತ-ಅಂಬೋಲಿ ಜಲಪಾತ, ಬೆಳಗಾವಿ-ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕೊಲ್ಹಾಪುರ-ಶ್ರೀ ಕ್ಷೇತ್ರ ಕನ್ಹೇರಿ ಮಠ (ಮಹಾರಾಷ್ಟ್ರ), ಬೆಳಗಾವಿ-ಕಕ್ಕೇರಿ (ಬಿಷ್ಟಾದೇವಿ ದೇವಸ್ಥಾನ)-ದಾಂಡೇಲಿ ಮೊಸಳೆ ಪಾರ್ಕ-ಮೌಳಂಗಿ ಫಾಲ್ಸ್- ಕೂಳಗಿ ನೇಚರ್ ಪಾರ್ಕ್, ಬೆಳಗಾವಿ-ರಾಜಹಂಸಗಡ-ಮಿಲಿಟರಿ ಶ್ರೀ ಮಹಾದೇವ ದೇವಸ್ಥಾನ-ಕಿ.ರಾ.ಚ. ಮೃಗಾಲಯ-ಶ್ರೀ ರೇವಣ ಸಿದ್ದೇಶ್ವರ ಮಂದಿರ ಹುಂಚೆವಾರಿ ಮಠ, ಬೆಳಗಾವಿ-ಗಂಗಾಬಿಕಾ ಐಕ್ಯಸ್ಥಳ/ಶ್ರೀ ಅಶ್ವಥ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ (ಎಂ.ಕೆ ಹುಬ್ಬಳ್ಳಿ)- ಕಿತ್ತೂರು ಕೋಟೆ -ಶ್ರೀ ಸೋಮೇಶ್ವರ ದೇವಸ್ಥಾನ ಸೊಗಲ- ನವಿಲುತೀರ್ಥ ಡ್ಯಾಂ (ಮುನವಳ್ಳಿ), ಬೆಳಗಾವಿ- ರಾಜಹಂಸಗಡ- ಶ್ರೀ ಸಿದ್ಧೇಶ್ವರ ಸ್ವಾಮಿ ವಿಶ್ರಾಂತ ಆಶ್ರಮ ಬೆಳಗುಂದಿ-ರಕ್ಕಸಕೊಪ್ಪ ಡ್ಯಾಮ್-ಧಾಮಣೆ ಫಾಲ್ಸ್/ನೇಚರ ಕ್ಯಾಂಪ್-ಶ್ರೀವೈಜನಾಥ ದೇವಸ್ಥಾನ ಮಹಿಪಾಲಗಡ, ಬೈಲಹೊಂಗಲ-ಶ್ರೀ ವೀರಭದ್ರೇಶ್ವರ ದೇವಸ್ಥಾನ ಗೊಡಚಿ-ಮೇಣ ಬಸದಿ ಬದಾಮಿ ಗುಹೆಗಳು-ಶ್ರೀ ಬನಶಂಕರಿ ದೇವಸ್ಥಾನ-ಶ್ರೀ ಶಿವಯೋಗಿ ಮಂದಿರ, ಬೆಳಗಾವಿ-ರಾಜಹಂಸಗಡ-ಅಸೋಗಾ ಹೊಳೆ ದಂಡೆ-ನಂದಗಡ ಸಂಗೊಳ್ಳಿ ರಾಯಣ್ಣ ಸಮಾಧಿ-ಹಲಸಿ ಶ್ರೀ ಕದಂಬೇಶ್ವರ ದೇವಸ್ಥಾನ-ಕಕ್ಕೇರಿ ಶ್ರೀ ಬಿಷ್ಠಾದೇವಿ ದೇವಸ್ಥಾನ.
ಹೆಚ್ಚಿನ ಮಾಹಿತಿಗಾಗಿ ನಿಲ್ದಾಣ ಮೇಲ್ವಿಚಾರಕರು ಕೇ.ಬ.ನಿ ಬೆಳಗಾವಿ ಮೋ.ಸಂ-೭೭೬೦೯೯೧೬೧೨, ೭೭೬೦೯೯೧೬೧೩ ಹಾಗೂ ಘಟಕ ವ್ಯವಸ್ಥಾಪಕರು ಬೆಳಗಾವಿ-೧ ಮೊ.ಸಂ-೭೭೬೦೯೯೧೬೨೫, ಘಟಕ ವ್ಯವಸ್ಥಾಪಕರು ಬೆಳಗಾವಿ-೨ ಮೊ.ಸಂ-೭೭೬೦೯೯೧೬೨೬, ಘಟಕ ವ್ಯವಸ್ಥಾಪಕರು ಬೆಳಗಾವಿ-೩ ಮೊ.ಸಂ-೭೭೬೦೯೯೧೬೨೭, ಘಟಕ ವ್ಯವಸ್ಥಾಪಕರು ಬೆಳಗಾವಿ-೪ ಮೊ.ಸಂ-೭೬೧೮೭೬೫೯೦೪, ಘಟಕ ವ್ಯವಸ್ಥಾಪಕರು ಬೈಲಹೊಂಗಲ ಘಟಕ ಮೊ.ಸಂ-೭೭೬೦೯೯೧೬೨೮ & ಘಟಕ ವ್ಯವಸ್ಥಾಪಕರು ಖಾನಾಪುರ ಮೊ.ಸಂ-೭೭೬೦೯೯೧೬೩೧ ಇವರನ್ನು ಸಂಪರ್ಕಿಸಬಹುದು ಎಂದು ವಾಕರಸಾ ಸಂಸ್ಥೆಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ