ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನ: 26ನೇ ವರ್ಷದ ಅನ್ನದಾನದ.!
ಚಿತ್ರದುರ್ಗ : ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 26ನೇ ವರ್ಷದ ಅನ್ನದಾನದ ಕಾರ್ಯಕ್ರಮದ ಉದ್ಘಾಟನೆಯನ್ನು ಭಾನುವಾರ ಸಂಸದರಾದ ಗೋವಿಂದ ಕಾರಜೋಳ ರವರು ನೇರವೇರಿಸಿದರು.
ಲಿಂಗಾರೆಡ್ಡಿ, ಮೆದೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಿರಂಜನ್ ವಕೀಲರ ಫಾತ್ಯರಾಜನ್ ಅಯ್ಯಪ್ಪಸ್ವಾಮಿ ದೇವಸ್ಥಾನದ ಅಧ್ಯಕ್ಷರು ಶರಣ್ಕುಮಾರ್ ,ಬಿಜೆಪಿಯ ಮಾಜಿ ಅಧ್ಯಕ್ಷರಾದ ಮುರಳಿ ,ಹೊಸದುರ್ಗ ಅಯ್ಯಪ್ಪ ಸ್ವಾಮಿ ಗುರುಗಳಾದ ಸೈಯದ್, ಮಾತಾ ಇಂಡಸ್ಟ್ರೀಸ್ ಮಾಲೀಕರಾದಂತ ಮಹಾಂತೇಶ್ ಐಶ್ವರ್ಯ ಗ್ರೂಪ್ ಆಫ್ ಹೋಟೆಲ್ನ ಅರುಣ್ ಕುಮಾರ್ ಉಪಸ್ಥಿತರಿದ್ದರು. ಗಣ ಹೋಮ, ನವ ಗ್ರಹ ಹೋಮ ,ರುದ್ರ ಹೋಮ ಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರದ ಸಾವಿರಾರು ಭಕ್ತರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು
ಪ್ರತಿ ವರ್ಷದಂತೆ ಮಾಲೆ ಧರಿಸಿದ ಅಯ್ಯಪ್ಪ ಸ್ವಾಮಿಗಳಿಗೆ ದಿನಾಂಕ 16-11-2025 ರಿಂದ 13-1- 2026 ವರೆಗೆ 60 ದಿನಗಳ ಕಾಲ ಪ್ರತಿನಿತ್ಯ ಅನ್ನದಾನ ಕಾರ್ಯಕ್ರಮವನ್ನು ನೆರವೇರಿಸಲಾಗುವುದು. 16-12-2025 ರಿಂದ 21-12-2025 ರವರೆಗೆ 26ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ. 20-.12-2025 ಶನಿವಾರ ಸಂಜೆ 7:ಕ್ಕೆ ಅಯ್ಯಪ್ಪ ಸ್ವಾಮಿ ಪಡಿಪೂಜೆ ಕಾರ್ಯಕ್ರಮ 28- 12-2025 ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ಮಹಾ ಅನ್ನದಾನ ಕಾರ್ಯಕ್ರಮ 13-01-2026 ಮಂಗಳವಾರ ಸಂಜೆ 6 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಆಭರಣ ಮೆರವಣಿಗೆ 14-1-2026 ಬುಧವಾರ ಸಂಜೆ 6 ಗಂಟೆಗೆ ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ಇರುತ್ತದೆ .
ಈ ಸಂದರ್ಭದಲ್ಲಿ .ಕಾರ್ಯದರ್ಶಿಗಳಾದ ಎಂ ಪಿ ವೆಂಕಟೇಶ್ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್. ಹಾಗೂ ದೇವಸ್ಥಾನದ ನಿರ್ದೇಶಕರು ಉಪಸ್ಥಿತರಿದ್ದರು
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.