LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 430ನೇ ಜನ್ಮದಿನೋತ್ಸವ "ಲಕ್ಷ ಪುಷ್ಪಾರ್ಚನೆ

ಬೆಂಗಳೂರು : ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಉತ್ಸವದ (ಜನ್ಮದಿನೋತ್ಸವ) ಅಂಗವಾಗಿ ಶ್ರೀ ಗುರುರಾಯರ ಬೃಂದಾವನಕ್ಕೆ ಫಲ ಪಂಚಾಮೃತ ಅಭಿಷೇಕ ಮತ್ತು ವಿಶೇಷವಾಗಿ "ಲಕ್ಷ ಪುಷ್ಪಾರ್ಚನೆ"ಯನ್ನು ಅಷ್ಟೋತ್ತರ ಸಹಿತ ಪಾರಾಯಣದೊಂದಿಗೆ, ಮಠದ ಧರ್ಮಾಧಿಕಾರಿಗಳಾದ ಶ್ರೀ ಕೃಷ್ಣ ಗುಂಡಾಚಾರ್ಯರು ಮತ್ತು ಅರ್ಚಕರಾದ ರಾಮಚಂದ್ರಾಚಾರ್ಯ, ಕೃಷ್ಣಾಚಾರ್ಯ ವೃಂದದಿಂದ "ಪುಷ್ಪಾರ್ಚನೆ" ನೆರವೇರಿತು.

ಈ  ಬಗ್ಗೆ ಮಠದ ಪುರೋಹಿತರಾದ  ನಂದಕಿಶೋರಾಚಾರ್ಯರು ಮಾತನಾಡಿ, ತದನಂತರ ಡಾ.ವೆಂಕಟನರಸಿಂಹಾಚಾರ್ಯರಿಂದ "ಶ್ರೀ ರಾಘವೇಂದ್ರ ವಿಜಯ" ಪ್ರವಚನದ ಮಂಗಳ ಕಾರ್ಯಕ್ರಮದೊಂದಿಗೆ ಸ್ವರ್ಣ ಸಿಂಹಾಸನದಲ್ಲಿ ಶ್ರೀ ಪ್ರಹ್ಲಾದರಾಜರ ಮೂರ್ತಿಯನ್ನು ಇರಿಸಿ ಶ್ರೀಮಠದಿಂದ ಗುರು ಪಾದಪೂಜೆ, ಕನಕಾಭಿಷೇಕ ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ಯಕ್ರಮವು ನೆರವೇರಿತು.

ಸೇವಾ ಕರ್ತೃಗಳಿಗೆ ಮತ್ತು ಭಕ್ತರಿಗೆ ಸಂಕಲ್ಪವನ್ನು ಮಾಡಿಸಿ ಶೇಷವಸ್ತ್ರ ಶ್ರೀ ಗುರು ರಾಯರ ಪಾದುಕೆ, ಫಲ ಮಂತ್ರಾಕ್ಷತೆ ಪ್ರಸಾದ ರೂಪವಾಗಿ ಕೊಡಲಾಯಿತು. ಇದೇ ಸಂದರ್ಭದಲ್ಲಿ ರಾಯರ ಸನ್ನಿಧಿಗೆ ಆಗಮಿಸಿದ ಸುಮಾರು 20,000ಕ್ಕೂ ಮಿಗಿಲಾಗಿ ಭಕ್ತರಿಗೆ ವಿಶೇಷವಾಗಿ ಅನ್ನಸಂತರ್ಪಣೆಯ ಪ್ರಸಾದ ಕಾರ್ಯಕ್ರಮವು ಸ್ವಯಂಸೇವಕರ ಮತ್ತು ಸಿಬ್ಬಂದಿಗಳ ಸಹಕಾರದಿಂದ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ನೆರವೇರಿತು. ಸೇವಾ ಕರ್ತೃಗಳು, ಭಕ್ತರು, ಗಣ್ಯರು, ತೀರ್ಥ ಪ್ರಸಾದ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ