LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಧ್ಯಾತ್ಮದ ಅರಿವು-ಸಾಧನೆಯಿಂದ ಬದುಕಿನಲ್ಲಿ ಉನ್ನತಿ ಸಾಧ್ಯ - ಶ್ರೀ ರಂಭಾಪುರಿ ಜಗದ್ಗುರುಗಳು

ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)- ಡಿಶಂಬರ್-4.

ಮಣ್ಣಿನಿಂದಾದ ಮಡಿಕೆ ಒಂದು ದಿನ ನಾಶವಾಗುತ್ತದೆ. ಆದರೆ ಮಣ್ಣು ನಾಶವಾಗುವುದಿಲ್ಲ. ಪ್ರಪಂಚದ ತುಂಬೆಲ್ಲ ತುಂಬಿದ್ದಾನೆ ಪರಮಾತ್ಮ. ಆದರೆ ಕಣ್ಣಿಗೆ ಕಾಣುವುದಿಲ್ಲ. ಆಧ್ಯಾತ್ಮದ ಅರಿವು ಮತ್ತು ಸಾಧನೆಯಿಂದ ಬದುಕಿನಲ್ಲಿ ಉನ್ನತಿ ಸಾಧಿಸಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.   ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಹುಣ್ಣಿಮೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಎಲ್ಲಿ ಹುಟ್ಟಬೇಕು ಅನ್ನುವುದು ನಮ್ಮ ಕೈಯಲ್ಲಿಲ್ಲ. ಆದರೆ ಎಲ್ಲಿ ಮುಟ್ಟಬೇಕು ಅನ್ನುವುದು ನಮ್ಮ ಕೈಯಲ್ಲಿದೆ. ಗುರಿ ಮುಟ್ಟುವ ತನಕ ಮನುಷ್ಯನ ಹೆಜ್ಜೆಯಿರಬೇಕು. ಸೂರ್ಯ ಆರಂಭದಲ್ಲಿ ಕೆಂಪಾಗಿ ಉದಯಿಸಿ, ಕೆಂಪಾಗಿಯೇ ಅಸ್ತನಾಗುತ್ತಾನೆ. ಅದೇ ರೀತಿ ಮಹಾತ್ಮರು ಸಂಪತ್ತಿರಲಿ ವಿಪತ್ತಿರಲಿ, ಸುಖವಿರಲಿ ದುಃಖವಿರಲಿ ಯಾವಾಗಲೂ ಒಂದೇ ರೀತಿ ಬಾಳುತ್ತಾರೆ. ಸಹನೆಯಿಲ್ಲದ ಹೆಂಡತಿ, ಸಂಪಾದನೆಯಿಲ್ಲದ ಗಂಡ, ಮಾತು ಕೇಳದ ಮಕ್ಕಳು ಸುಖ ಸಂಸಾರದ ಶತ್ರುಗಳು. ಜ್ಞಾನದಿಂದ ಅಧಿಕಾರ ದೊರೆಯಬಹುದು. ಆದರೆ ಗೌರವ ಸಿಗಬೇಕಾದರೆ ವ್ಯಕ್ತಿತ್ವ ಸಂಪಾದಿಸಿಕೊಳ್ಳಬೇಕಾಗುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬದುಕಿನ ಉನ್ನತಿ ಮತ್ತು ಶ್ರೇಯಸ್ಸಿಗಾಗಿ ಬೋಧಿಸಿದ ಶಿವಾದ್ವೆöÊತ ಜ್ಞಾನ ಸಂಪತ್ತು ಸಕಲರನ್ನು ಉದ್ಧರಿಸುತ್ತದೆ ಎಂದರು.

ಕಲ್ಲುಬಾಳುಮಠದ ಶಿವಾನಂದ ಶಿವಾಚಾರ್ಯರು, ಹುಡುಗಿ ಹಿರೇಮಠ ಸೋಮೇಶ್ವರ ಶಿವಾಚಾರ್ಯರು, ಬಿಡದಿಮಠದ ಶ್ರೀಗಳು, ಕಲ್ಲಹಳ್ಳಿ ಶ್ರೀಗಳು ಸಮಾರಂಭದಲ್ಲಿ ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಪ್ರಭುದೇವ ಕಲ್ಮಠ, ಎಂ. ಕೊಟ್ರೇಶಪ್ಪ, ಬಾಸಾಪುರದ ಬಿ. ಎಂ. ಬೋಜೇಗೌಡರು, ಕಡವಂತಿ ಅಣ್ಣೇಗೌಡರು, ಶಿರವಾಸೆ ವಿಶ್ವನಾಥ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಆಗಮಿಸಿದ ಭಕ್ತರು ಜಗದ್ಗುರುಗಳ ದರ್ಶನಾಶೀರ್ವಾದ ಪಡೆದರು. ಹುಣ್ಣಿಮೆ ನಿಮಿತ್ಯ ಶ್ರೀಪೀಠದ ಎಲ್ಲ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಆಗಮಿಸಿದ ಸಕಲ ಸದ್ಭಕ್ತರಿಗೆ ಪ್ರಸಾದ ವಿನಿಯೋಗ ಜರುಗಿತು.

ಸಿ.ಎಚ್. ಬಾಳನಗೌಡ್ರ

ವಾರ್ತಾ ಸಂಯೋಜನಾಧಿಕಾರಿ,

ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ, ಬಾಳೆಹೊನ್ನೂರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು