Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

SSLC ಫಲಿತಾಂಶ ಗುರುವಾರ ..?

ಬೆಂಗಳೂರು :ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬಹುನಿರೀಕ್ಷಿತ ಈ ಬಾರಿಯ ಪರೀಕ್ಷಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ನಿರೀಕ್ಷಿಸಿದ್ದ ಫಲಿತಾಂಶ ಸದ್ಯವೇ ಪ್ರಕಟವಾಗುವ ಸಾಧ್ಯತೆ ಇದೆ. ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ತಿಂಗಳ 4 ರಂದು ಪ್ರಕಟವಾಗಲಿದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ಶಿಕ್ಷಣ ಇಲಾಖೆ ನೀಡಿರುವ ಕೆಲವು ಅಂಕಿಅಂಶ ಹಾಗೂ ಮಾಹಿತಿ ಆಧರಿಸಿ ಮೇ 4 ರಂದು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೊರಬೀಳಲಿದೆ ಎಂದು ಅಂದಾಜಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕರ್ನಾಟಕ SSLC ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಪರಿಶೀಲಿಸಬಹುದು.ಈ ವರ್ಷ SSLC ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11, 2023 ರವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆದವು. ಇದಲ್ಲದೆ, ಕರ್ನಾಟಕ SSLC 2023 ಉತ್ತರ ಕೀಗಳನ್ನು ಏಪ್ರಿಲ್ 17, 2023 ರಂದು ಬಿಡುಗಡೆ ಮಾಡಲಾಗಿದೆ.        SSLC ಫಲಿತಾಂಶಗಳನ್ನು 2023 ಪರಿಶೀಲಿಸುವುದು ಹೇಗೆ: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2023 ಅನ್ನು ಪರಿಶೀಲಿಸಲು, ಎಲ್ಲಾ ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸಬೇಕು: ಮೊದಲಿಗೆ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ ಆದ karresults.nic.in ಗೆ ಲಾಗ್ ಇನ್ ಆಗಬೇಕು.ಮುಖಪುಟದಲ್ಲಿ, ಇರುವ ಕರ್ನಾಟಕ SSLC 10 ನೇ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.ನಂತರ ನಿಮ್ಮ ಅರ್ಜಿ ಸಂಖ್ಯೆ, ಹುಟ್ಟಿದ ದಿನಾಂಕ ಮತ್ತು ಇತರ ವಿವರಗಳನ್ನು ನಮೂದಿಸಬೇಕು. ಸಲ್ಲಿಸು ಬಟನ್‌ ಮೇಲೆ ಕ್ಲಿಕ್ ಮಾಡಬೇಕು. ಕರ್ನಾಟಕ SSLC 2023 ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಅದನ್ನೇ ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯಕ್ಕಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ