LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ ಮನುಷ್ಯನ ಮುಪ್ಪು ತಡೆಗಟ್ಟುವಿಕೆಗೆ ‘ಕುಟಿ ಪ್ರಾವೇಶಿಕ ರಸಾಯನ ಚಿಕಿತ್ಸೆ’-ಡಾ.ಅದ್ರಿಜಾ



ಬಳ್ಳಾರಿ,ಡಿ.12



‘ಕುಟಿ ಪ್ರಾವೇಶಿಕ ರಸಾಯನ ಚಿಕಿತ್ಸೆ’ಯು ಮನುಷ್ಯನ ವಯೋಸಹಜ ಮುಪ್ಪು ಮತ್ತು ಅಕಾಲ ಮುಪ್ಪಾಗುವುದನ್ನು ತಡೆಗಟ್ಟುತ್ತದೆ. ವೃದ್ಧ ವ್ಯಕ್ತಿಯು ರಸಾಯನ ಚಿಕಿತ್ಸೆ ಪಡೆದು, ವಯಸ್ಸಿನ ಅನಿಯಮಿತ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು ಎಂದು ಕೇರಳ ರಾಜ್ಯದ ಪಾಲಕ್ಕಾಡ್‌ನ ಪರಿಣಿತ ವೈದ್ಯರಾದ ಡಾ.ಅದ್ರಿಜಾ ಅವರು ಹೇಳಿದರು.

ನಗರದ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಒಂದು ದಿನದ ವೈಜ್ಞಾನಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಯಕಲ್ಪ ಚಿಕಿತ್ಸೆಯಿಂದ ಯೌವ್ವನ ಪಡೆಯಬಹುದು. ದೇಶ ವಿದೇಶಗಳಿಂದ ಈ ಚಿಕಿತ್ಸೆ ಪಡೆಯಲು ಕೇರಳಕ್ಕೆ ಜನರು ಬರುತ್ತಿದ್ದಾರೆ. ಈ ಕುರಿತು ಅನೇಕ ವೈಜ್ಞಾನಿಕ ದಾಖಲೆಗಳನ್ನು ಪ್ರಸ್ತುತ ಪಡಿಸಿದರು.

ಇದೇ ಸಂದರ್ಭದಲ್ಲಿ ತಂತ್ರಶಾಸ್ತç, ಆಗಮ ಶಾಸ್ತç, ವಾಸ್ತು ಮತ್ತು ಆಯುರ್ವೇದದ ಪ್ರಕಾರ ಚಿಕಿತ್ಸೆಗಾಗಿ “ವಿಶೇಷ ತ್ರಿಗರ್ಭಾ ಕುಟಿ” ನಿರ್ಮಾಣದ ಮಹತ್ವ ತಿಳಿಸಿದರು.

ಕಾರ್ಯಾಗಾರದಲ್ಲಿ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಮಾಧವ ದಿಗ್ಗಾವಿ, ಬೆಂಗಳೂರು ಆಯುಷ್ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ.ಎನ್.ಎ.ಮೂರ್ತಿ, ವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ.ಜಿ.ಆರ್.ವಸ್ತçದ, ಖ್ಯಾತ ರಸ ಚಿಕಿತ್ಸಕ ಡಾ.ಎಲ್.ನಾಗಿರೆಡ್ಡಿ, ಕಟ್ಟಡ ನಿರ್ಮಾಣ ಅಭಿಯಂತರ ಸಂಜೀವ ಪ್ರಸಾದ್ ಸೇರಿದಂತೆ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ, ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು