LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒತ್ತಡ ನಿರ್ವಹಣೆ ಮತ್ತು ವೃತ್ತಿ ತರಬೇತಿ ಕಾರ್ಯಾಗಾರ

ಚಿತ್ರದುರ್ಗಡಿ.10:

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಲ್ತಾನಿಪುರ ಪಿಚ್ಚಾರಹಟ್ಟಿ ಸಮುದಾಯ ಭವನದಲ್ಲಿ ಮಂಗಳವಾರ ಜನ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಒತ್ತಡ ನಿರ್ವಹಣೆ ಮತ್ತು ವೃತ್ತಿ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪಿ.ಶರೀಫ್ ಅವರು, ಒತ್ತಡ ನಿರ್ವಹಣೆಯ ಬಗ್ಗೆ ಕುಟುಂಬದಲ್ಲಿ ತಾಳ್ಮೆ ತುಂಬಾ ಮುಖ್ಯ. ಯಾವುದೇ ಒಂದು ವಿಷಯದಲ್ಲೂ ಜವಾಬ್ದಾರಿ ತೆಗೆದುಕೊಳ್ಳುವ ಮೊದಲು ಹಿಡಿ ಕುಟುಂಬದವರು ಕುಳಿತು ಚರ್ಚಿಸಿ, ನಂತರದಲ್ಲಿ ಒಳ್ಳೆಯ ವಿಷಯ ಅಥವಾ ಅಭಿಪ್ರಾಯ ತಿಳಿಸಬೇಕು ಎಂದರು.

ಕುಟುಂಬದಲ್ಲಿ ಸರ್ವರು ಸಮಾನರಾಗಿರಬೇಕು. ಸಣ್ಣ ಸಣ್ಣ ವಿಷಯಗಳಿಗೆ ಜಗಳವಾದದಂತೆ ಸಮಾಧಾನದಿಂದ ವಿಷಯ ಮನ್ನಣೆ ಮಾಡಬೇಕು ಎಂದು ಹೇಳಿದರು.

ವಕೀಲೆ ಶಕೀಲಾ ಬಾನು ಅವರು, ಸಖಿ ಒನ್ ಸ್ಟಾಪ್ ಸೆಂಟರ್ನ ಕಾರ್ಯವೈಖರಿ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಜನ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮ ಸಂಯೋಜಕಿ ಶೃತಿ ಮಾತನಾಡಿ, ಕೌಶಲ್ಯ ತರಬೇತಿ ಮತ್ತು ವೃತ್ತಿ ತರಬೇತಿ ಪಡೆಯುವುದು ತುಂಬಾ ಮುಖ್ಯವಾಗಿದೆ. ಸರ್ಕಾರದಿಂದ ತರಬೇತಿ ಪಡೆದ ನಂತರ ಸರ್ಟಿಫಿಕೇಟ್ ಅನ್ನು ವಿತರಿಸಲಾಗುವುದು. ಇದರಿಂದ ಮುಂದಿನ ದಿನಗಳಲ್ಲಿ ಇಲಾಖೆಗಳಿಂದ ಸಬ್ಸಿಡಿ ಅಥವಾ ಸಹಾಯಧನ ಪಡೆದು ವೃತ್ತಿಯನ್ನು ನಿರ್ವಹಿಸಿಕೊಂಡು ಹೋಗಬಹುದು ಎಂದು ತಿಳಿಸಿದರು.

ಮಹಿಳಾ ಸಬಲೀಕರಣ ಘಟಕದ ಜಂಡರ್ ಸ್ಪೆಷಲಿಸ್ಟ್ ಟಿ.ಗೀತಾ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ,ಪೋಕ್ಸೋ ಕಾಯ್ದೆ ಮತ್ತು ಜಿಲ್ಲೆಯಲ್ಲಿ ಶಕ್ತಿ ಸದನ ಸಖಿನಿವಾಸ್ ಇವುಗಳ ಕಾರ್ಯವೈಖರಿಗಳ ಬಗ್ಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಇರುವ ಮಹಿಳಾಧಾರಿತ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ನಂತರದಲ್ಲಿ ವೃತ್ತಿ ತರಬೇತಿಯನ್ನು ಪಡೆದ ಅಭ್ಯರ್ಥಿಗಳಿಗೆ ಸರ್ಟಿಫಿಕೇಟ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ರುದ್ರಮ್ಮ, ಗ್ರಾಮಸ್ಥರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು