ಕತಾರ್ :
ಕನ್ನಡದ ಕಣ್ಮಣಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರನ್ನು ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾಗಿ ಎರಡನೇ ಬಾರಿಗೆ ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿದೆ ಇವರು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ನೊಂದಾಯಿಸಿಕೊಂಡಿರುವ ಸಂಸ್ಥೆಗಳ ಪ್ರತಿನಿಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಮುಂದಿನ ಎರಡು ವರ್ಷಗಳಿಗೆ ಇವರ ಆಡಳಿತ ಸಮಿತಿಯು ಜನಪರ ಸೇವೆಗಾಗಿ ನಿರತವಾಗಿರುತ್ತದೆ.
ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಕಳೆದ ಒಂದುವರೆ ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಅಭಿವೃದ್ಧಿಗೆ ಬೆಳವಣಿಗೆಗೆ ಹಾಗೂ ಕ್ಷೇಮಕ್ಕಾಗಿ ಸತತವಾಗಿ ತಮ್ಮ ಶಕ್ತಿ ಸಮಯ ಹಾಗೂ ತಮಗೆ ಲಭ್ಯವಿರುವ ಸಮಸ್ತ ಸಂಪನ್ಮೂಲಗಳನ್ನು ಮುಡುಪಾಗಿಟ್ಟಿರುತ್ತಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.