LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡ್ರ್ಯಾಗನ್ ಕ್ಯಾಪ್ಸೂಲ್’ ಯಶಸ್ವಿ ಲ್ಯಾಂಡಿಂಗ್ – ಸುರಕ್ಷಿತವಾಗಿ ಹಿಂತಿರುಗಿದ ಶುಭಾಂಶು ಶುಕ್ಲಾ

ನವದೆಹಲಿ : ಭಾರತದ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ, ಬಾಹ್ಯಾಕಾಶಕ್ಕೆ ಪ್ರಯಾಣಿಸಿ, ಭೂಮಿಗೆ ಮರಳಿದ್ದಾರೆ. ಇವರು ಭಾಗವಹಿಸಿದ್ದ ಆಕ್ಸಿಯಮ್-4 ಮಿಷನ್‌ ಇದೀಗ ಯಶಸ್ವಿಯಾಗಿ ಭೂಮಿಗೆ ಮರಳಿದ್ದು, ಡ್ರ್ಯಾಗನ್ ಕ್ಯಾಪ್ಸೂಲ್ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಸುರಕ್ಷಿತವಾಗಿ ಇಳಿದಿದೆ ಎಂದು ವರದಿಯಾಗಿದೆ.

ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದು ವೈದ್ಯಕೀಯ ಪರೀಕ್ಷೆಗಳು ಕೂಡಾ ನಡೆಸಲಾಗಿದೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದ ಇತಿಹಾಸದಲ್ಲಿ ಮಹತ್ತರವಾದ ಘಟ್ಟವಾಗಿದೆ. ಸ್ಪೇಸ್‌ ಎಕ್ಸ್‌ನ ಡ್ರ್ಯಾಗನ್ ಕ್ಯಾಪ್ಸೂಲ್‌ ಮೂಲಕ ಇವರನ್ನು ಬಾಹ್ಯಾಕಾಶಕ್ಕೆ ಕಳಿಸಲಾಗಿದ್ದು, ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಕಾಲದಲ್ಲಿ ತಲುಪಿ, 18 ದಿನಗಳ ಕಾಲ ನಿಲ್ದಾಣದಲ್ಲಿ ವಾಸ್ತವ್ಯ ಹೂಡಿ ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಕೈಗೊಂಡಿದ್ದಾರೆ. 43 ವರ್ಷಗಳ ನಂತರ ಬಾಹ್ಯಾಕಾಶ ತಲುಪಿದ ಭಾರತೀಯ ಎಂಬ ಗೌರವ ಶುಭಾಂಶು ಶುಕ್ಲಾಗೆ ದೊರಕಿದೆ. ಈ ಹಿಂದೆ 1980ರಲ್ಲಿ ರಾಕೇಶ್ ಶರ್ಮಾ ಬಾಹ್ಯಾಕಾಶಕ್ಕೆ ತೆರಳಿದ್ದರೆ, ಇದೀಗ 2025ರಲ್ಲಿ ಶುಕ್ಲಾ ಅವರು ಐಎಸ್‌ಎಸ್ ತಲುಪಿದ ಮೊದಲ ಭಾರತೀಯರಾಗಿದ್ದಾರೆ.

ಐಎಸ್‌ಎಸ್, ಇದುವರೆಗೆ ಸುಮಾರು 150 ಬಿಲಿಯನ್ ಅಮೆರಿಕನ್ ಡಾಲರ್‌ನಷ್ಟು ಖರ್ಚಿನಿಂದ ನಿರ್ಮಾಣಗೊಂಡಿರುವ ಅತ್ಯಂತ ಪ್ರಬಲ ಬಾಹ್ಯಾಕಾಶ ಲ್ಯಾಬ್ ಆಗಿದ್ದು, ಈ ಪ್ರಯಾಣಕ್ಕೆ ಭಾರತವು 70 ಮಿಲಿಯನ್ ಅಮೆರಿಕನ್‌ ಡಾಲರ್ ವೆಚ್ಚ‌ ಮಾಡಿದೆ. ಈ ಸಮಯದಲ್ಲಿ ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನಡೆಸಿದ ಸಂಶೋಧನೆಗಳಲ್ಲಿ ಜೀವಶಾಸ್ತ್ರ, ದ್ರವ ಗತಿಶಾಸ್ತ್ರ, ಹಾಗೂ ಕ್ಷುದ್ರ ಗುರುತ್ವಾಕರ್ಷಣೆಯಲ್ಲಿನ ಜೀವಕೋಶಗಳ ವ್ಯವಹಾರ ಇತ್ಯಾದಿಗಳ ಮೇಲೆ ಒತ್ತು ನೀಡಲಾಯಿತು ಎಂದು ಹೇಳಲಾಗಿದೆ.

ಈ ಬಾಹ್ಯಾಕಾಶ ಪ್ರಯಾಣದಲ್ಲಿ ಅಂದಾಜು 12.2 ಮಿಲಿಯನ್ ಕಿಲೋಮೀಟರ್ ದೂರವನ್ನು ಅವರು ಪೂರೈಸಿದ್ದು, ಭೂಮಿಯ ಸುತ್ತ ಸುಮಾರು 288 ಬಾರಿ ತಿರುಗಿದ್ದಾರೆ. ಒಟ್ಟು 433 ಗಂಟೆಗಳ ಕಾಲ ಅವರು ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ ಎಂದು ಹೇಳಲಾಗಿದೆ. ಇವರ ಆಗಮನದಿಂದ ಶುಭಾಂಶು ಶುಕ್ಲಾ ಅವರ ಹೆತ್ತವರು ಸಂತಸ ವ್ಯಕ್ತ ಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026