Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಂಡಾಶಯದ ಗಂಟಿನ ಸಫಲ ಶಸ್ತ್ರ ಚಿಕಿತ್ಸೆ

 

ಸತತ ನಾಲ್ಕು ವರ್ಷಗಳಿಂದ ಕಿಬ್ಬೊಟ್ಟೆಯ ನೋವಿನಿಂದ ಬಳಲುತ್ತಿದ್ದ 6೦ ವರ್ಷದ ಮಹಿಳೆಗೆ ಯಶಸ್ವಿಯಾಗಿ ಅಂಡಾಶಯದ ಗಂಟಿನ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ರೋಗಿಯ ಸುಖಕರ ಜೀವನಕ್ಕೆ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಹೆಸರಾಂತ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ. ದರ್ಶಿತ ಶೆಟ್ಟಿ ಅವರ ನೇತ್ರತ್ವದಲ್ಲಿ ಸಫಲವಾಗಿ ಮಾಡಲಾಗಿದೆ.

ಈ ಶಸ್ತ್ರಚಿಕಿತ್ಸೆಯ ಮೂಲಕ ಸುಮಾರು 65 ಸೆಮಿ ಸುತ್ತಳತೆಯ, 3 ಕೆಜಿ ಗಿಂತಲೂ ಅಧಿಕ ತೂಕದ ಗಂಟನ್ನು 1 ಘಂಟೆಯವರೆಗೆ ಶಸ್ತ್ರ ಚಿಕಿತ್ಸೆಯನ್ನು ಮಾಡುವ ಮೂಲಕ ಹೊರ ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಾ. ದರ್ಶಿತ ಶೆಟ್ಟಿ ಅವರು “ಗರ್ಭಾಶಯ, ಅಂಡಾಶಯ ಹಾಗೂ ಅದರ ಆಂತರಿಕ ಪರಿಸರದಲ್ಲಾಗುವ ರಾಸಾಯನಿಕ ಬದಲಾವಣೆಗಳು, ಅನುವಂಶೀಯತೆ, ಹಾರ್ಮೋನುಗಳಲ್ಲಾಗುವ ಬದಲಾವಣೆ, ಆಹಾರ ಕ್ರಮದಲ್ಲಾಗುವ ಏರಿಳಿತಗಳು, ಆರೋಗ್ಯದ ಅಲಕ್ಷ್ಯತೆ ಮುಂತಾದ ಕಾರಣಗಳಿಂದ ಈ ತೆರನಾದ ಗಂಟುಗಳಿಂದ ಮಹಿಳೆಯರು ಸಮಸ್ಯೆಗೆ ಗುರಿಯಾಗುತ್ತಾರೆ. ಕಾಲಕಾಲಕ್ಕೆ ವೈದ್ಯರ ತಪಾಸಣೆ ಸಮಸ್ಯೆಗಳು ಉಲ್ಭಣಗೊಳ್ಳುವುದಕ್ಕಿಂತ ಮುಂಚೆಯೇ ತಪಾಸಣೆಗೊಳಪಟ್ಟು ತಕ್ಕ ಚಿಕಿತ್ಸೆಯನ್ನು ಹೊಂದಿದರೆ ಆರೋಗ್ಯಯುತ ಜೀವನ ನಡೆಸಬಹುದಾಗಿದೆ” ಎಂದು ಹೇಳಿದರು.

ವೈದ್ಯರ ತಂಡ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸುತ್ತ ಮಾತನಾಡಿದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕ ಡಾ. ಎಸ್. ಸಿ.ಧಾರವಾಡ ಅವರು “ಇಂತಹ ಸಮಸ್ಯೆ ಗಳು ಪ್ರತಿ 1೦೦೦ ಮಹಿಳೆಯರಲ್ಲಿ 2೦ ರಿಂದ 3೦ ಜನ ಮಹಿಳೆಯರಲ್ಲಿ ಇಂತಹ ಸಮಸ್ಯೆಗಳನ್ನು ಕಾಣಬಹುದಾಗಿದೆ. ಆದರೆ ಇಷ್ಟುದೊಡ್ಡ ಗಂಟುಇರುವದು ಅಪರೂಪವಾಗಿದೆ. ಆದರೆ ಸಕಾಲಕ್ಕೆ ವೈದ್ಯರನ್ನು ಕಂಡು ತಪಾಸಣೆಗೊಳಪಟ್ಟಲ್ಲಿ ಇಂತಹ ಸಮಸ್ಯೆಗಳಿಂದ ದೂರವಿರಬಹುದಾಗಿದೆ” ಎಂದು ತಿಳುವಳಿಕೆ ನೀಡಿದರು.
ಈ ಶಸ್ತ್ರ ಚಿಕಿತ್ಸೆಯನ್ನು ಡಾ. ದರ್ಶಿತ ಶೆಟ್ಟಿ ಅವರ ನೇತೃತ್ವದಲ್ಲಿ, ಡಾ. ಕೆ.ಎನ್. ಹೋಳಿಕಟ್ಟಿ ಹಾಗೂ ಡಾ. ಅಮೃತಾ ಸಾಲ್ಕರ ಅರವಳಿಕೆ ವಿಭಾಗದ ಮುಖ್ಯಸ್ಥ ಡಾ. ಆರ್. ಜಿ. ನೆಲವಿಗಿ ಅವರ ತಂಡ ಕಾರ್ಯದಲ್ಲಿ, ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದಲ್ಲಿ ಮುಖ್ಯಸ್ಥೆ ಡಾ. ರಾಜೇಶ್ವರಿ ಕಡಕೋಳ ಹಾಗೂ ಹಿರಿಯ ಶಸ್ತ್ರ ಚಿಕಿತ್ಸಜ್ಞ ಡಾ. ಅಶೋಕ ಪಾಂಗಿ ಇವರ ಮೇಲ್ವಿಚಾರಣೆಯಲ್ಲಿ ಮಾಡಲಾಯಿತು.

ಇಂತಹ ಕಷ್ಟಕರವಾದ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ ವೈದ್ಯರ ತಂಡವನ್ನು ಯು ಎಸ್ ಎಮ್ ಕೆ ಎಲ್ ಇ ಯ ನಿರ್ದೇಶಕ ಡಾ. ಹೆಚ್.ಬಿ. ರಾಜಶೇಖರ ಅವರು ಹಾಗೂ ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆಯವರು ಅಭಿನಂದಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ