Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸುರಪುರ: ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ

ಸುರಪುರ ತಾಲ್ಲೂಕಿನ ಖಾನಾಪುರ ಎಸ್‌ಎಚ್ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ರುಕ್ಮಾಪುರ ಹಾಗೂ ಶಿಬರಬಂಡಿ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಾರ್ವಜನಿಕರು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಸ್ತೆ, ಚರಂಡಿ, ಸಿಸಿ ರಸ್ತೆ ನಿರ್ಮಾಣ, ಮಹಿಳೆಯರಿಗೆ ಶೌಚಾಲಯಗಳ ವ್ಯವಸ್ಥೆ ಹಾಗೂ ವಿದ್ಯುತ್ ಕಂಬಗಳಿಗೆ ಬಲ್ಬುಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಜಯ ಕರ್ನಾಟಕ ಸಂಘಟನೆಯ ವತಿಯಿಂದ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸುರಪುರ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಮನವಿಯನ್ನು ಇಂದು ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಾಲಯಕ್ಕೆ ತೆರಳಿ, ಕಾರ್ಯಾಲಯದ ಅಕೌಂಟೆಂಟ್ ನಾಗರಾಜ ಅವರ ಮೂಲಕ ಅಧಿಕೃತವಾಗಿ ಸಲ್ಲಿಸಿದರು. ರುಕ್ಮಾಪುರ ಮತ್ತು ಶಿಬರಬಂಡಿ ಗ್ರಾಮಗಳಲ್ಲಿ ಅನೇಕ ವರ್ಷಗಳಿಂದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು ನಿಂತು ಸಾರ್ವಜನಿಕರಿಗೆ ಓಡಾಟಕ್ಕೆ ಅಡಚಣೆ ಉಂಟಾಗುತ್ತಿದೆ. ಅಲ್ಲದೇ ಒಳಚರಂಡಿ ವ್ಯವಸ್ಥೆಯ ಕೊರತೆಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಆತಂಕವಿದ್ದು, ತಕ್ಷಣವೇ ಚರಂಡಿ ನಿರ್ಮಾಣ ಕಾರ್ಯ ಕೈಗೊಳ್ಳಬೇಕೆಂದು ಸಂಘಟನೆ ಮನವಿ ಮಾಡಿದೆ.
ಇದೇ ವೇಳೆ, ಕೆಲ ಪ್ರಮುಖ ಬೀದಿಗಳಲ್ಲಿ ಸಿಸಿ ರಸ್ತೆ ನಿರ್ಮಾಣವಾಗದೇ ಇದ್ದುದರಿಂದ ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ನಡೆದುಹೋಗುವಾಗ ಅಪಾಯ ಎದುರಿಸುತ್ತಿದ್ದಾರೆ. ಗ್ರಾಮಗಳಲ್ಲಿ ಮಹಿಳೆಯರಿಗೆ ಅಗತ್ಯವಿರುವ ಶೌಚಾಲಯಗಳ ಕೊರತೆಯಿಂದ ಮಹಿಳೆಯರು ಮುಂಜಾನೆ ಹಾಗೂ ರಾತ್ರಿ ಸಮಯದಲ್ಲಿ ಬಹಳ ಅಸೌಕರ್ಯ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಟನೆ ಅಧಿಕಾರಿಗಳ ಗಮನಕ್ಕೆ ತಂದಿತು.

ಇದಲ್ಲದೆ, ಗ್ರಾಮಗಳಲ್ಲಿ ಸ್ಥಾಪಿಸಿರುವ ಅನೇಕ ವಿದ್ಯುತ್ ಕಂಬಗಳಿಗೆ ಬಲ್ಬುಗಳು ಅಳವಡಿಸದೆ ಇರುವುದರಿಂದ ರಾತ್ರಿ ಸಮಯದಲ್ಲಿ ಕತ್ತಲೆಯ ವಾತಾವರಣ ನಿರ್ಮಾಣವಾಗಿ ಅಪಘಾತ ಹಾಗೂ ಅಪರಾಧಗಳಿಗೆ ಅವಕಾಶ ಸೃಷ್ಟಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ವಿದ್ಯುತ್ ಕಂಬಗಳಿಗೆ ಬಲ್ಬುಗಳನ್ನು ಅಳವಡಿಸಿ ಗ್ರಾಮಗಳನ್ನು ಬೆಳಗಿಸುವಂತೆ ಸಂಘಟನೆ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಯಲ್ಲಪ್ಪ ನಾಯಕ ಕಭಾಡಗೆರಾ ಅವರು, “ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಸಾರ್ವಜನಿಕರ ಮೂಲಭೂತ ಅಗತ್ಯಗಳನ್ನು ಪೂರೈಸುವುದು ಆಡಳಿತದ ಜವಾಬ್ದಾರಿ. ರುಕ್ಮಾಪುರ ಮತ್ತು ಶಿಬರಬಂಡಿ ಗ್ರಾಮಗಳ ಜನರು ಅನೇಕ ವರ್ಷಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅಧಿಕಾರಿಗಳು ತಕ್ಷಣ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಬೇಕು” ಎಂದು ಆಗ್ರಹಿಸಿದರು.

ಈ ಮನವಿ ಸಲ್ಲಿಸುವ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ವೆಂಕಟೇಶ್ ನಾಯಕ, ಡಿಸಿ ಹಣಮಂತ ಗವಿ, ಹನುಮಗೌಡ ಮಾಲಿಪಾಟೀಲ್, ಯಂಕನಗೌಡ ಮಾಲಿಪಾಟೀಲ್, ಶರಣಪ್ಪ ಸಾಹುಕಾರ, ಮರೆಪ್ಪ ಶಿಬರಬಂಡಿ, ಮಲ್ಲು ನಾಯಕ, ರೆಡ್ಡೆಪ್ಪ ದೋರಿ ದೊಣ್ಣೆಗೇರ ಸೇರಿದಂತೆ ಜಯ ಕರ್ನಾಟಕ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆಗಳು ಪರಿಹಾರವಾಗದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ