Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

 ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.

 ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.

ಮತ ಎಣಿಕೆಯ ಆರಂಭದಿಂದಲೂ ಚೆನ್ನೈನ ಬಹುತೇಕ ಕ್ಷೇತ್ರಗಳಲ್ಲಿ ಟಿವಿಕೆ ಪ್ರಾಬಲ್ಯ ಮೆರೆದಿದೆ.
ಒಟ್ಟು 82,110 ಮತಗಳನ್ನು ಪಡೆದ ವಿ.ಎಸ್. ಬಾಬು ಅವರು ಸ್ಟಾಲಿನ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾದರು. ಸ್ಟಾಲಿನ್‌ ಅವರು 72,988 ಮತಗಳನ್ನು ಪಡೆದರು.

ಕೈಕೊಟ್ಟ ಭದ್ರಕೋಟೆ: 2011ರಿಂದಲೂ ಕೊಳತ್ತೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸ್ಟಾಲಿನ್ ಅವರಿಗೆ ಇದು ಮೊದಲ ಸೋಲು. 2021ರಲ್ಲಿ ಅವರು ಬರೋಬ್ಬರಿ 70,000 ಮತಗಳ ಅಂತರದಿಂದ ಜಯಗಳಿಸಿದ್ದರು.

ಯಾರು ಈ ವಿ.ಎಸ್. ಬಾಬು?  
75 ವರ್ಷದ ಹಿರಿಯ ರಾಜಕಾರಣಿ ವಿ.ಎಸ್. ಬಾಬು ಅವರು ಈ ಹಿಂದೆ ಡಿಎಂಕೆ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದರು. 2006 ರಿಂದ 2011 ರವರೆಗೆ ಪುರಸವಾಲ್ಕಂ ಕ್ಷೇತ್ರದ ಶಾಸಕರಾಗಿದ್ದರು.
ಹಿಂದೆ ಡಿಎಂಕೆಯ ಉತ್ತರ ಚೆನ್ನೈ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಇವರು, 2011ರಲ್ಲಿ ಸ್ಟಾಲಿನ್ ಅವರ ಅಲ್ಪ ಮತಗಳ ಅಂತರದ ಜಯದ ನಂತರ ಪಕ್ಷದಿಂದ ದೂರವಾಗಿದ್ದರು. ಇತ್ತೀಚೆಗಷ್ಟೇ ನಟ ವಿಜಯ ಅವರ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಇವರು, ಪ್ರಸ್ತುತ ಪಕ್ಷದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ತಮಿಳುನಾಡಿನ ವಿಧಾನಸಭೆ ಚುನಾವಣೆಯ ಫಲಿತಾಂಶದ ಟ್ರೆಂಡ್‌ಗಳ ಪ್ರಕಾರ, ತಮಿಳುನಾಡಿನಾದ್ಯಂತ ಟಿವಿಕೆ 108 ಸ್ಥಾನಗಳಲ್ಲಿ ಮುಂದಿದೆ. ಡಿಎಂಕೆ 72 ಸ್ಥಾನಗಳು ಹಾಗೂ ಎಐಎಡಿಎಂಕೆ 53 ಸ್ಥಾನಗಳಲ್ಲಿ ಮುಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ