ಸಿರಿಧಾನ್ಯಗಳ ಖಾದ್ಯಗಳ ಸವಿಯುವ ಅವಕಾಶ ಹಾಗೂ ಪಾಕ ಸ್ಪರ್ಧೆ.!
ದಾವಣಗೆರೆ: ಕೃಷಿ ಇಲಾಖೆಯ ವತಿಯಿಂದ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ – 2025 ರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಆಯೋಜಿಸಲಾಗಿದೆ.
ಮೂರು ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸಿರಿಧಾನ್ಯದ ಸಿಹಿ ಖಾದ್ಯಗಳು, ಸಿರಿಧಾನ್ಯದ ಖಾರದ ಖಾದ್ಯಗಳು, ಮರೆತು ಹೋದ ಖಾದ್ಯಗಳು, ಪ್ರತಿ ಸ್ಪರ್ಧಿಗೆ ಒಂದೇ ವಿಭಾಗದಲ್ಲಿ ಒಂದೇ ಸಸ್ಯಾಹಾರಿ ತಿನಿಸು, ಖಾದ್ಯ, ಸಿಹಿ, ಖಾರ ಮತ್ತು ದೇಶಿ ತಳಿಗಳಿಂದ ತಯಾರಿಸುವ ಖಾದ್ಯಗಳ ತಿನಿಸುಗಳನ್ನು ಮಾತ್ರ ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು.
ಸಿರಿಧಾನ್ಯಗಳಾದ ಜೋಳ, ರಾಗಿ, ನವಣೆ, ಸಜ್ಜೆ, ಹಾರಕ, ಬರಗು ಮತ್ತು ಸಾಮೆ ಬೆಳೆಗಳಿಂದ ಸಿಹಿ ಮತ್ತು ಖಾರದ ಖಾದ್ಯವನ್ನು ತಯಾರಿಸುವುದು. ಮರೆತು ಹೋದ ಖಾದ್ಯಗಳನ್ನು ರೈತರ ಸಾಂಪ್ರದಾಯಿಕ, ಪರಂಪರೆ, ಜಾನಪದ ಪ್ರಭೇದಗಳು ಎಂದು ಕರೆಯಲ್ಪಡುವ, ದೇಸಿ ತಳಿಗಳಿಂದ (ಸಿರಿಧಾನ್ಯಗಳನ್ನು ಹೊರತು ಪಡಿಸಿ ಇತರೆ ದೇಸಿ ತಳಿಗಳಡಿ ಬರುವ ಆಹಾರ ಮತ್ತು ಎಣ್ಣೆಕಾಳು ಬೆಳೆಗಳ, ತರಕಾರಿ ಮತ್ತು ಹಣ್ಣುಗಳು ಇತ್ಯಾದಿ) ಖಾದ್ಯಗಳನ್ನು ತಯಾರಿಸಬಹುದೆಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.