LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿಯನ್ನು ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ ಮಾರ್ಚ್ 20  ವಣಗೇರಿ ಗ್ರಾಮದ ಅಪರಾಧಿ ಬಸವರಾಜ ತಂದೆ ಮಲ್ಲಪ್ಪ ಮಕ್ಕಳ್ಳಿ ಇತನು ತನ್ನ ಹೆಂಡತಿಯಾದ ಅಂಬವ್ವ @ ಕಲ್ಲವ್ವ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮನೆಯಲ್ಲಿದ್ದ ಕೊಡಲಿಯಿಂದ ಕುತ್ತಿಗೆಗೆ ಹಾಗೂ ಇತರೆ ಕಡೆಗಳಿಗೆ ಹೊಡೆದು ಕೊಲೆ ಮಾಡಿದ ಅಪರಾಧ ಸಾಭಿತಾಗಿದೆ ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಈ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಿರುತ್ತಾರೆ.

ಬೇವೂರು ಪೋಲಿಸ್ ಠಾಣೆ ವ್ಯಾಪ್ತಿಯ ವಣಗೇರಿ ಗ್ರಾಮದ ಆರೋಪಿ ಬಸವರಾಜ ತಂದೆ ಮಲ್ಲಪ್ಪ ಮಕ್ಕಳ್ಳಿ ಈತನು ತನ್ನ ಹೆಂಡತಿಯಾದ ಮೃತ ಅಂಬವ್ವ @ ಕಲ್ಲವ್ವ ಇವಳ ಶೀಲದ ಮೇಲೆ ಸಂಶಯಪಡುತ್ತಾ ಆಗಾಗ್ಗೆ ಜಗಳ ಮಾಡುತ್ತಾ ಬಂದಿದ್ದು, ಈ ವಿಷಯವಾಗಿ ವಣಗೇರಿ ಗ್ರಾಮದ ಅಪರಾಧಿ ಬಸವರಾಜನ ಅಕ್ಕಪಕ್ಕದ ಮನೆಯವರು ಅಪರಾಧಿ ಬಸವರಾಜನಿಗೆ ಬುದ್ದಿವಾದ ಹೇಳಿದರೂ ತನ್ನ ಚಾಳಿಯನ್ನು ಬಿಡದೇ ತನ್ನ ಹೆಂಡತಿಯಾದ ಮೃತ ಅಂಬವ್ವ @ ಕಲ್ಲವ್ವ ಈಕೆಯ ಶೀಲದ ಮೇಲೆ ಸಂಶಯ ಪಟ್ಟು ಅವಳೊಂದಿಗೆ ಜಗಳ ಮಾಡುತ್ತಾ ಮಾನಸಿಕ ಹಾಗೂ ದೈಹಿಕವಾಗಿ ಚಿತ್ರಹಿಹಿಂಸೆ ನೀಡುತ್ತಾ ಬಂದು ಅಪರಾಧಿ ಬಸವರಾಜ ತನ್ನ ಹೆಂಡತಿ ಮಲಗಿಕೊಂಡಿದ್ದಾಗ ಮನೆಯಲ್ಲಿದ್ದ ಕೊಡಲಿಯಿಂದ ಅಂಬವ್ವ @ ಕಲ್ಲವ್ವ ಇವಳ ಕುತ್ತಿಗೆಗೆ ಹಾಗೂ ಇತರೆ ಕಡೆಗಳಿಗೆ ಹೊಡೆದು ಕೊಲೆ ಮಾಡಿದ್ದು ಇರುತ್ತದೆ. ಬೇವೂರು ಪೊಲೀಸ್ ಠಾಣೆ ಗುನ್ನೆ ನಂ. 143/2017, ಕಲಂ: 498[ಎ], 302 ಭಾ.ದಂ.ಸಂ. ಅಡಿಯಲ್ಲಿ ಹಿಂದಿನ ರಮೇಶ ರೊಟ್ಟಿ ಪಿ.ಐ ಇವರು ತನಿಖೆಯಲ್ಲಿ ಆರೋಪಗಳು ಸಾಭಿತಾಗಿದ್ದರಿಂದ ಆರೋಪಿತರ ವಿರುದ್ದ ದೋಷಾರೋಪಣೆ ಪಟ್ಟಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ವಣಗೇರಿ ಗ್ರಾಮದ ಅಪರಾಧಿ ಬಸವರಾಜ ತಂದೆ ಮಲ್ಲಪ್ಪ ಮಕ್ಕಳ್ಳಿ ಇತನ ಮೇಲಿರುವ ಆರೋಪಗಳು ಸಾಭೀತಾಗಿವೆ ಎಂದು ದಿ: 18-03-2025 ರಂದು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ ಅವರು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ರೂ. 50,000 ಗಳ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಅಂಬಣ್ಣ ಟಿ. ಮತ್ತು ಸರ್ಕಾರಿ ಅಭಿಯೋಜಕರಾದ ಬಂಡಿ ಅಪರ್ಣಾ ಎಂ. ಅವರು ಸರ್ಕಾರದ ಪರವಾಗಿ ಪ್ರಕರಣ ನಡೆಸಿ ವಾದ ಮಂಡಿಸಿರುತ್ತಾರೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ಪ್ರಧಾನ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು